ವಿಷಯಕ್ಕೆ ಹೋಗಿ

ಹುಳಿಯಾರು:ಶಾಂತಿಯುತ ಮತದಾನ:ಶೇ ೬೬ % ಮತಚಲಾವಣೆ

ಹುಳಿಯಾರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ನಡೆದ ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯ್ತಿ ಚುನಾವಣೆಯಲ್ಲಿ ಶೇ ೬೬ ಮತದಾನ ನಡೆದಿದ್ದು ಶಾಂತಿಯುತವಾಗಿತ್ತು.

ಹುಳಿಯಾರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ನಡೆದ ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯ್ತಿ ಚುನಾವಣೆಯಲ್ಲಿ ಎಂಪಿಎಸ್ ಶಾಲೆಯ ಬೂತ್ ಮುಂದೆ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ ಮತದಾರರು
            ಬೆಳಗ್ಗೆ ೭ ರಿಂದ ಪ್ರಾರಂಭವಾದ ಮತದಾನ ಸಂಜೆ ೫ ರವರೆಗೂ ನಡೆಯಿತು. ಯಾವುದೇ ಅಹಿತಕರಘಟನೆ ನಡೆಯದಂತೆ ಪ್ರತಿ ಬೂತ್ ಹಾಗೂ ಮತಕೇಂದ್ರದ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಹಾಕಲಾಗಿತ್ತು. ಮುಂಜಾನೆ ೭ ಗಂಟೆಗೆ ಪ್ರಾರಂಭವಾಗಿದ್ದ ಮತದಾನ ೧೦ ಗಂಟೆಯವರೆಗೂ ಮಂದಗತಿಯಲ್ಲಿ ಸಾಗಿ 1 ಗಂಟೆಯ ನಂತರ ಚುರುಕಾಗಿತ್ತು.ಒಟ್ಟು ೧೨೧೧೮ ಮತದಾರರಿದ್ದು ೧೩ ವಾರ್ಡುಗಳ ೧೪ ಬೂತಿನಿಂದ ೮೦೧೧ ಮತಚಲಾವಣೆಯಾಗಿದೆ.                  ಪಟ್ಟಣದ ಎಂಪಿಎಸ್ ಶಾಲೆ,ಸರ್ಕಾರಿ ಬಾಲಕಿಯರ ಶಾಲೆ,ಉರ್ದು ಶಾಲೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮಜ್ಜನಪಾಳ್ಯದ ಸರ್ಕಾರಿ ಶಾಲೆಯಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಕೇಂದ್ರದ ಹೊರಭಾಗದಲ್ಲಿ ಅಭ್ಯಥಿ೯ಗಳ ಪರ ಅವರ ಪಕ್ಷದ ಮುಖಂಡರುಗಳು ,ಕಾರ್ಯಕರ್ತರುಗಳು ,ಬೆಂಬಲಿಗರು,ಕುಟುಂಬ ವರ್ಗದವರು ಮನವಿ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
                 ಮದ್ಯಾಹ್ನನದ ನಂತರ ಮತದಾನ ಮಾಡದೆ ಮನೆಯಲಿಳುದಿದ್ದ ಮತದಾರರನ್ನು ಓಲೈಸಿ ವಾಹನಗಳಲ್ಲಿ ಮತಘಟ್ಟೆಗೆ ಕರೆತಂದು ಮತಹಾಕಿಸುವ ಪ್ರಯತ್ನ ನಡೆಸುತ್ತಿದ್ದರು.ನಾಲ್ಕು ಗಂಟೆಯ ನಂತರ ಮತದಾನ ಬಿರುಸಿನಿಂದ ಕೂಡಿದ್ದು ಸಮಯ ಮುಗಿಯುವ ಆತಂಕದಲ್ಲಿ ಮತದಾರರನ್ನು ತರಾತುರಿಯಲ್ಲಿ ಕರೆದುಕೊಂಡೂ ಹೋಗಿ ಮತಹಾಕಿಸಿದರು.
               ಕೆಲವೊಂದು ಬ್ಲಾಕಿನಲ್ಲಿ ಮತದಾರರ ಪಟ್ಟಿಯಲ್ಲಿನ ಮತದಾರರ ಹೆಸರುಗಳ ಕಾಣೆಯಾಗಿದ್ದು ಪಟ್ಟಿಯಲ್ಲಿ ಹೆಸರಿಲ್ಲದಕ್ಕೆ ಮಾತಿನ ಸಂಘರ್ಷಕ್ಕೆ ಕಾರಣವಾಯಿತು.ಇತ್ತೀಚೆಗಷ್ಟೆ ನಡೆದಿದ್ದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಹೆಸರಿದ್ದು ಇದೀಗ ಜಿಲ್ಲಾಪಂಚಾಯ್ತಿ ಚುನಾವಣೆಯ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕಾಣದಿದ್ದು ಗೊಂದಲಕ್ಕೆ ಕಾರಣವಾಯಿತು.ಬೇರೆ ಪಟ್ಟಿಯಲ್ಲಾದರೂ ಕಾಣಬಹುದೆಂದು ಸಾಕಷ್ಟು ಹುಡುಕಾಡಿ ಪ್ರಯೋಜನವಾಗದೆ ಕೆಲವರು ಚುನಾವಣಾ ಅಧಿಕಾರಿಗಳನ್ನು ಬೈಯುತ್ತಾ ವಾಪಸ್ಸು ಹೋದ ಪ್ರಕರಣ ಕೂಡ ನಡೆಯಿತು.
ಮತಚಲಾಯಿಸಿದವರಲ್ಲಿ ಈ ಬಾರಿ ಯುವಕರ ಸಂಖ್ಯೆ ಹೆಚ್ಚಾಗಿದ್ದು ಉತ್ಸಾಹದಿಂದ ಮತಚಲಾಯಿಸಿದ್ದು ಕಂಡುಬಂತು.ಎಲ್ಲಡೆ ಬಿಗಿ ಪೋಲಿಸ್ ಬಂದೋಬಸ್ತ್ ನಿಂದಾಗಿ ಶಾಂತಿಯುತ ಮತದಾನ ಸಾಗಿತ್ತು.ಪಿಎಸೈ ಬಿ.ಪ್ರವೀಣ್ ಕುಮಾರ್ ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಯಲ್ಲಿನ ಮತಕೇಂದ್ರಗಳಲ್ಲಿಗೆ ಗಸ್ತು ತಿರುಗುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿದ್ದರು.
               ಒಟ್ಟಾರೆ ಇಂದು ನಡೆದ ಚುನಾವಣೆಯಲ್ಲಿ ಹುಳಿಯಾರು ಕ್ಷೇತ್ರದ ಜಿಲ್ಲಾಪಂಚಾಯ್ತಿ ಸ್ಥಾನಕ್ಕೆ ಸ್ಪರ್ಧಿಸಿದ್ದ ೬ ಅಭ್ಯರ್ಥಿಗಳ ಹಾಗೂ ತಾಲ್ಲೂಕ್ ಪಂಚಾಯ್ತಿಗೆ ಸ್ಪರ್ಧಿಸಿದ ೩ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆದಿದ್ದು ಯಾರು ಆಯ್ಕೆಯಾಗುತ್ತಾರೋ ಎಂದು ತಿಳಿಯಲು ಇದೇ ತಿಂಗಳ ೨೩ ನೇ ತಾರೀಖಿನವರೆಗೆ ಕಾದುನೋಡಬೇಕಿದೆ.
-------------------------
ಹುಳಿಯಾರಿನ ೧೦ ನೇ ಮತಗಟ್ಟೆಯಲ್ಲಿ ಮುಂಜಾನೆ ಎಂಟು ಗಂಟೆಯವರೆಗೂ ಮತದಾರರು ಮತಚಲಾಯಿಸುವ ವೇಳೆ ಬಲಗೈ ಹೆಬ್ಬೆಟ್ಟಿಗೆ ಶಾಹಿ ಹಾಕುವ ಬದಲು ಎಡಗೈ ತೋರುಬೆರಳಿಗೆ ಶಾಹಿ ಗುರುತು ಹಾಕಿದ್ದಾರೆ.ಹೆಬ್ಬೆಟ್ಟು ಕೊಟ್ಟರು ಸಹ ಈ ಬೆರಳಲ್ಲವೆಂದು ಹೇಳಿ ಎಡಗೈ ತೋರುಬೆರಳಿಗೆ ಹಾಕಬೇಕೆಂದು ಹೇಳಿದ್ದು ವಿಪರ್ಯಾಸಕ್ಕೆ ಕಾರಣವಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.