ವಿಷಯಕ್ಕೆ ಹೋಗಿ

ಹುಳಿಯಾರು:ಶಾಂತಿಯುತ ಮತದಾನ:ಶೇ ೬೬ % ಮತಚಲಾವಣೆ

ಹುಳಿಯಾರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ನಡೆದ ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯ್ತಿ ಚುನಾವಣೆಯಲ್ಲಿ ಶೇ ೬೬ ಮತದಾನ ನಡೆದಿದ್ದು ಶಾಂತಿಯುತವಾಗಿತ್ತು.

ಹುಳಿಯಾರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ನಡೆದ ಜಿಲ್ಲಾ ಹಾಗೂ ತಾಲ್ಲೂಕ್ ಪಂಚಾಯ್ತಿ ಚುನಾವಣೆಯಲ್ಲಿ ಎಂಪಿಎಸ್ ಶಾಲೆಯ ಬೂತ್ ಮುಂದೆ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ ಮತದಾರರು
            ಬೆಳಗ್ಗೆ ೭ ರಿಂದ ಪ್ರಾರಂಭವಾದ ಮತದಾನ ಸಂಜೆ ೫ ರವರೆಗೂ ನಡೆಯಿತು. ಯಾವುದೇ ಅಹಿತಕರಘಟನೆ ನಡೆಯದಂತೆ ಪ್ರತಿ ಬೂತ್ ಹಾಗೂ ಮತಕೇಂದ್ರದ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಹಾಕಲಾಗಿತ್ತು. ಮುಂಜಾನೆ ೭ ಗಂಟೆಗೆ ಪ್ರಾರಂಭವಾಗಿದ್ದ ಮತದಾನ ೧೦ ಗಂಟೆಯವರೆಗೂ ಮಂದಗತಿಯಲ್ಲಿ ಸಾಗಿ 1 ಗಂಟೆಯ ನಂತರ ಚುರುಕಾಗಿತ್ತು.ಒಟ್ಟು ೧೨೧೧೮ ಮತದಾರರಿದ್ದು ೧೩ ವಾರ್ಡುಗಳ ೧೪ ಬೂತಿನಿಂದ ೮೦೧೧ ಮತಚಲಾವಣೆಯಾಗಿದೆ.                  ಪಟ್ಟಣದ ಎಂಪಿಎಸ್ ಶಾಲೆ,ಸರ್ಕಾರಿ ಬಾಲಕಿಯರ ಶಾಲೆ,ಉರ್ದು ಶಾಲೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮಜ್ಜನಪಾಳ್ಯದ ಸರ್ಕಾರಿ ಶಾಲೆಯಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿತ್ತು. ಮತದಾನ ಕೇಂದ್ರದ ಹೊರಭಾಗದಲ್ಲಿ ಅಭ್ಯಥಿ೯ಗಳ ಪರ ಅವರ ಪಕ್ಷದ ಮುಖಂಡರುಗಳು ,ಕಾರ್ಯಕರ್ತರುಗಳು ,ಬೆಂಬಲಿಗರು,ಕುಟುಂಬ ವರ್ಗದವರು ಮನವಿ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
                 ಮದ್ಯಾಹ್ನನದ ನಂತರ ಮತದಾನ ಮಾಡದೆ ಮನೆಯಲಿಳುದಿದ್ದ ಮತದಾರರನ್ನು ಓಲೈಸಿ ವಾಹನಗಳಲ್ಲಿ ಮತಘಟ್ಟೆಗೆ ಕರೆತಂದು ಮತಹಾಕಿಸುವ ಪ್ರಯತ್ನ ನಡೆಸುತ್ತಿದ್ದರು.ನಾಲ್ಕು ಗಂಟೆಯ ನಂತರ ಮತದಾನ ಬಿರುಸಿನಿಂದ ಕೂಡಿದ್ದು ಸಮಯ ಮುಗಿಯುವ ಆತಂಕದಲ್ಲಿ ಮತದಾರರನ್ನು ತರಾತುರಿಯಲ್ಲಿ ಕರೆದುಕೊಂಡೂ ಹೋಗಿ ಮತಹಾಕಿಸಿದರು.
               ಕೆಲವೊಂದು ಬ್ಲಾಕಿನಲ್ಲಿ ಮತದಾರರ ಪಟ್ಟಿಯಲ್ಲಿನ ಮತದಾರರ ಹೆಸರುಗಳ ಕಾಣೆಯಾಗಿದ್ದು ಪಟ್ಟಿಯಲ್ಲಿ ಹೆಸರಿಲ್ಲದಕ್ಕೆ ಮಾತಿನ ಸಂಘರ್ಷಕ್ಕೆ ಕಾರಣವಾಯಿತು.ಇತ್ತೀಚೆಗಷ್ಟೆ ನಡೆದಿದ್ದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಹೆಸರಿದ್ದು ಇದೀಗ ಜಿಲ್ಲಾಪಂಚಾಯ್ತಿ ಚುನಾವಣೆಯ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕಾಣದಿದ್ದು ಗೊಂದಲಕ್ಕೆ ಕಾರಣವಾಯಿತು.ಬೇರೆ ಪಟ್ಟಿಯಲ್ಲಾದರೂ ಕಾಣಬಹುದೆಂದು ಸಾಕಷ್ಟು ಹುಡುಕಾಡಿ ಪ್ರಯೋಜನವಾಗದೆ ಕೆಲವರು ಚುನಾವಣಾ ಅಧಿಕಾರಿಗಳನ್ನು ಬೈಯುತ್ತಾ ವಾಪಸ್ಸು ಹೋದ ಪ್ರಕರಣ ಕೂಡ ನಡೆಯಿತು.
ಮತಚಲಾಯಿಸಿದವರಲ್ಲಿ ಈ ಬಾರಿ ಯುವಕರ ಸಂಖ್ಯೆ ಹೆಚ್ಚಾಗಿದ್ದು ಉತ್ಸಾಹದಿಂದ ಮತಚಲಾಯಿಸಿದ್ದು ಕಂಡುಬಂತು.ಎಲ್ಲಡೆ ಬಿಗಿ ಪೋಲಿಸ್ ಬಂದೋಬಸ್ತ್ ನಿಂದಾಗಿ ಶಾಂತಿಯುತ ಮತದಾನ ಸಾಗಿತ್ತು.ಪಿಎಸೈ ಬಿ.ಪ್ರವೀಣ್ ಕುಮಾರ್ ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಯಲ್ಲಿನ ಮತಕೇಂದ್ರಗಳಲ್ಲಿಗೆ ಗಸ್ತು ತಿರುಗುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿದ್ದರು.
               ಒಟ್ಟಾರೆ ಇಂದು ನಡೆದ ಚುನಾವಣೆಯಲ್ಲಿ ಹುಳಿಯಾರು ಕ್ಷೇತ್ರದ ಜಿಲ್ಲಾಪಂಚಾಯ್ತಿ ಸ್ಥಾನಕ್ಕೆ ಸ್ಪರ್ಧಿಸಿದ್ದ ೬ ಅಭ್ಯರ್ಥಿಗಳ ಹಾಗೂ ತಾಲ್ಲೂಕ್ ಪಂಚಾಯ್ತಿಗೆ ಸ್ಪರ್ಧಿಸಿದ ೩ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆದಿದ್ದು ಯಾರು ಆಯ್ಕೆಯಾಗುತ್ತಾರೋ ಎಂದು ತಿಳಿಯಲು ಇದೇ ತಿಂಗಳ ೨೩ ನೇ ತಾರೀಖಿನವರೆಗೆ ಕಾದುನೋಡಬೇಕಿದೆ.
-------------------------
ಹುಳಿಯಾರಿನ ೧೦ ನೇ ಮತಗಟ್ಟೆಯಲ್ಲಿ ಮುಂಜಾನೆ ಎಂಟು ಗಂಟೆಯವರೆಗೂ ಮತದಾರರು ಮತಚಲಾಯಿಸುವ ವೇಳೆ ಬಲಗೈ ಹೆಬ್ಬೆಟ್ಟಿಗೆ ಶಾಹಿ ಹಾಕುವ ಬದಲು ಎಡಗೈ ತೋರುಬೆರಳಿಗೆ ಶಾಹಿ ಗುರುತು ಹಾಕಿದ್ದಾರೆ.ಹೆಬ್ಬೆಟ್ಟು ಕೊಟ್ಟರು ಸಹ ಈ ಬೆರಳಲ್ಲವೆಂದು ಹೇಳಿ ಎಡಗೈ ತೋರುಬೆರಳಿಗೆ ಹಾಕಬೇಕೆಂದು ಹೇಳಿದ್ದು ವಿಪರ್ಯಾಸಕ್ಕೆ ಕಾರಣವಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...