ವಿಷಯಕ್ಕೆ ಹೋಗಿ

ಇದು ನನ್ನ ಗೆಲುವಲ್ಲ ,ಕಾರ್ಯಕರ್ತರ ಗೆಲುವು:ವೈ.ಸಿ.ಸಿದ್ದರಾಮಯ್ಯ

ಶಾಸಕರ ಮೇಲೆ ಕಿಡಿಕಾರಿದ ನೂತನ ಜಿಪಂ ಸದಸ್ಯ
------------------------------------
                   ನನ್ನ ಹಿಂದೆ ಹಲವಾರು ಕಾರ್ಯಕರ್ತರು ಹಗಲಿರುಳೆನ್ನದೆ ದುಡಿದ ಪರಿಣಾಮವಾಗಿ ಹುಳಿಯಾರು ಜಿಲ್ಲಾಪಂಚಾಯ್ತಿ ಸ್ಥಾನಕ್ಕೆ ನಾನು ಆಯ್ಕೆಯಾಗಲು ಕಾರಣವಾಗಿದ್ದು ನನ್ನ ಗೆಲುವಿನ ಸಂಪೂರ್ಣ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕಿದೆ ಎಂದು ಹುಳಿಯಾರು ಜಿಪಂ ವಿಜೇತ ಅಭ್ಯರ್ಥಿ ವೈ.ಸಿ.ಸಿದ್ರಾಮಯ್ಯ ನುಡಿದರು.

                    ಚಿಕ್ಕನಾಯಕನಹಳ್ಳಿ ತಾಲ್ಲೂಕಿನಾದ್ಯಂತ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟಿರುವುದು ಹುಳಿಯಾರು ಕ್ಷೇತ್ರವಾಗಿದ್ದು ಈ ಗೆಲುವಿಗೆ ಕಾರಣರಾದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ನಾನು ಕೃತಜ್ಞ ಎಂದ ಅವರು ಜನರಿಟ್ಟ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದು ಅವರ ಹಿತಕಾಯಲು ನಾನು ಬದ್ದ ಎಂದರು.
ಹುಳಿಯಾರು ಜಿಪಂ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ಸಿನ ವೈ.ಸಿ.ಸಿದ್ರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿದರು.ಗ್ರಾಪಂ ಸದಸ್ಯ ದಯಾನಂದ್,ಧನುಷ್ ರಂಗನಾಥ್,ಮಲ್ಲೀಕಣ್ಣ,ರಮೇಶ್ ಬಾಬು,ಹೊಸಳ್ಳಿ ಅಶೋಕ್ ಇದ್ದಾರೆ.

ಈ ಹಿಂದೆ ಎಪಿಎಂಸಿ ಚುನಾವಣೆಯಲ್ಲೂ ಸಹ ಜನರ ಆಶೀರ್ವಾದ ನನ್ನ ಮೇಲಿದ್ದ ಕಾರಣ ಅಲ್ಲೂ ಕೂಡ ಇದೇರೀತಿ ಫಲಿತಾಂಶದಿಂದಾಗಿ ಗೆಲುವು ಸಾಧಿಸಿದ್ದೆ.ಹಾಲಿ ಶಾಸಕರು ಹಾಗೂ ಮಾಜಿ ಶಾಸಕರುಗಳ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದು ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟ ಕಾರಣ ಈ ಗೆಲುವು ಸಾಧ್ಯಾವಾಯಿತು ಎಂದು ವಿಶ್ಲೇಷಿಸಿದರು.

ಶಾಸಕರ ಮೇಲೆ ಟೀಕಾಪ್ರಹಾರ : ಕ್ಷೇತ್ರದಲ್ಲಿ ಶಾಸಕರ ಸಾಧನೆ ಶೂನ್ಯವಾಗಿದ್ದು ಅವರ ಅಭ್ಯರ್ಥಿ ಸೋಲಿಗೆ ಕಾರಣವಾಯಿತು. ಜನರು ಬಯಸುವುದು ಜನಸಾಮಾನ್ಯರಿಗೆ ಸ್ಪಂದಿಸುವಂತಹ ವ್ಯಕ್ತಿಯನ್ನು ಹೊರತು ಗೆದ್ದಾಗ ಬೆಂಗಳೂರು ಸೇರಿಕೊಂಡು ನಾಮಕರಣ,ಆರಾಧನೆ ಮುಂತಾದ ಸಮಾರಂಭಗಳೆಗೆ ದುಡ್ಡುಹಂಚುವ ವ್ಯಕ್ತಿಯನ್ನಲ್ಲ ಎಂದು ಲೇವಡಿ ಮಾಡಿದರು.

             ಮುಖ್ಯಮಂತ್ರಿಗಳು ಚುನಾವಣ ಪ್ರಚಾರಕ್ಕೆ ಹುಳಿಯಾರಿಗೆ ಬಂದಿದ್ದಂತಹ ಸಂದರ್ಭದಲ್ಲಿ ನುಡಿದಂತೆ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಎರಡುಕೋಟಿ ರೂಪಾಯಿ ಅನುದಾನ ಬಿಡುಗಡೆಮಾಡಿದ್ದು ಇದನ್ನು ಶಾಸಕರು ಹಳ್ಳಿಜನಕ್ಕೆ ಮಬ್ಬು ಮಾಡುತ್ತಾ ನಿಮ್ಮಹಳ್ಳಿಗೆ ನಾನು ೨೦ ಲಕ್ಷ ಹಾಕಿದ್ದಿನಿ ಅಂತ ಸುಳ್ಳು ಭರವಸೆ ಕೊಡುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರದ ಹಣವನ್ನು ನನ್ನ ಅನುದಾನವೆಂದು ತಪ್ಪು ಸಂದೇಶ ಕೊಡುವುದನ್ನು ಈ ಕೂಡಲೇ ನಿಲ್ಲಿಸಿ ಎಂದರು.ನನ್ನ ಸೋಲಿಗೆ ಹಗಲು ರಾತ್ರಿಯೆನ್ನದೆ ಹುಳಿಯಾರಿಗೆ ಬಂದ ಮಲಗಿದ್ದ ಶಾಸಕರನ್ನು ಮನೆ ಸೇರಿಸುವವರೆಗೂ ನಾವು ಸಹ ವಿರಮಿಸುವುದಿಲ್ಲ ಎಂದು ಕಿಡಿಕಾರಿದರು.

                ನನಗಾಗಿ ಹಲವಾರು ಕಾರ್ಯಕರ್ತರು ಶ್ರಮಿಸಿದ್ದು ಅವರ ಹಿತ ಕಾಪಾಡಲು ನಾನು ಬದ್ದ.ಈ ಗೆಲುವು ನನ್ನದಲ್ಲ ಕಾರ್ಯಕರ್ತರ ಗೆಲುವು. ನಾನ್ಯಾವಾಗಲೂ ಹಳ್ಳಿಯಲ್ಲಿದ್ದು ಹಳ್ಳಿಯ ಜನರಿಗೆ ಸ್ಪಂದಿಸುವೆ.ಕುಡಿಯುವ ನೀರು,ರಸ್ತೆ,ಆರೋಗ್ಯ ಮುಂತಾದ ಸಮಸ್ಯೆಗಳಿಗೆ ಒತ್ತುಕೊಟ್ಟು ಜನರ ಹಿತಕಾಪಾಡುವೆ.ಜನರ ವಿಶ್ವಾಸಕ್ಕೆ ತಲೆಬಾಗಿ ಜನಗಳ ಜೊತೆಯಲ್ಲೇಯಿರುವೆ ಎಂದರು.


                ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ದಯಾನಂದ್,ಧನುಷ್ ರಂಗನಾಥ್,ಮಾಜಿ ತಾಪಂ ಸದಸ್ಯ ಮಲ್ಲೀಕಣ್ಣ.ವಕೀಲ ರಮೇಶ್ ಬಾಬು,ಹೊಸಳ್ಳಿ ಅಶೋಕ್ ,ಕಿರಣ್ ಕುಮಾರ್,ವೆಂಕಟೇಶ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...