ವಿಷಯಕ್ಕೆ ಹೋಗಿ

ಇದು ನನ್ನ ಗೆಲುವಲ್ಲ ,ಕಾರ್ಯಕರ್ತರ ಗೆಲುವು:ವೈ.ಸಿ.ಸಿದ್ದರಾಮಯ್ಯ

ಶಾಸಕರ ಮೇಲೆ ಕಿಡಿಕಾರಿದ ನೂತನ ಜಿಪಂ ಸದಸ್ಯ
------------------------------------
                   ನನ್ನ ಹಿಂದೆ ಹಲವಾರು ಕಾರ್ಯಕರ್ತರು ಹಗಲಿರುಳೆನ್ನದೆ ದುಡಿದ ಪರಿಣಾಮವಾಗಿ ಹುಳಿಯಾರು ಜಿಲ್ಲಾಪಂಚಾಯ್ತಿ ಸ್ಥಾನಕ್ಕೆ ನಾನು ಆಯ್ಕೆಯಾಗಲು ಕಾರಣವಾಗಿದ್ದು ನನ್ನ ಗೆಲುವಿನ ಸಂಪೂರ್ಣ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕಿದೆ ಎಂದು ಹುಳಿಯಾರು ಜಿಪಂ ವಿಜೇತ ಅಭ್ಯರ್ಥಿ ವೈ.ಸಿ.ಸಿದ್ರಾಮಯ್ಯ ನುಡಿದರು.

                    ಚಿಕ್ಕನಾಯಕನಹಳ್ಳಿ ತಾಲ್ಲೂಕಿನಾದ್ಯಂತ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟಿರುವುದು ಹುಳಿಯಾರು ಕ್ಷೇತ್ರವಾಗಿದ್ದು ಈ ಗೆಲುವಿಗೆ ಕಾರಣರಾದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ನಾನು ಕೃತಜ್ಞ ಎಂದ ಅವರು ಜನರಿಟ್ಟ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದು ಅವರ ಹಿತಕಾಯಲು ನಾನು ಬದ್ದ ಎಂದರು.
ಹುಳಿಯಾರು ಜಿಪಂ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ಸಿನ ವೈ.ಸಿ.ಸಿದ್ರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿದರು.ಗ್ರಾಪಂ ಸದಸ್ಯ ದಯಾನಂದ್,ಧನುಷ್ ರಂಗನಾಥ್,ಮಲ್ಲೀಕಣ್ಣ,ರಮೇಶ್ ಬಾಬು,ಹೊಸಳ್ಳಿ ಅಶೋಕ್ ಇದ್ದಾರೆ.

ಈ ಹಿಂದೆ ಎಪಿಎಂಸಿ ಚುನಾವಣೆಯಲ್ಲೂ ಸಹ ಜನರ ಆಶೀರ್ವಾದ ನನ್ನ ಮೇಲಿದ್ದ ಕಾರಣ ಅಲ್ಲೂ ಕೂಡ ಇದೇರೀತಿ ಫಲಿತಾಂಶದಿಂದಾಗಿ ಗೆಲುವು ಸಾಧಿಸಿದ್ದೆ.ಹಾಲಿ ಶಾಸಕರು ಹಾಗೂ ಮಾಜಿ ಶಾಸಕರುಗಳ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದು ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟ ಕಾರಣ ಈ ಗೆಲುವು ಸಾಧ್ಯಾವಾಯಿತು ಎಂದು ವಿಶ್ಲೇಷಿಸಿದರು.

ಶಾಸಕರ ಮೇಲೆ ಟೀಕಾಪ್ರಹಾರ : ಕ್ಷೇತ್ರದಲ್ಲಿ ಶಾಸಕರ ಸಾಧನೆ ಶೂನ್ಯವಾಗಿದ್ದು ಅವರ ಅಭ್ಯರ್ಥಿ ಸೋಲಿಗೆ ಕಾರಣವಾಯಿತು. ಜನರು ಬಯಸುವುದು ಜನಸಾಮಾನ್ಯರಿಗೆ ಸ್ಪಂದಿಸುವಂತಹ ವ್ಯಕ್ತಿಯನ್ನು ಹೊರತು ಗೆದ್ದಾಗ ಬೆಂಗಳೂರು ಸೇರಿಕೊಂಡು ನಾಮಕರಣ,ಆರಾಧನೆ ಮುಂತಾದ ಸಮಾರಂಭಗಳೆಗೆ ದುಡ್ಡುಹಂಚುವ ವ್ಯಕ್ತಿಯನ್ನಲ್ಲ ಎಂದು ಲೇವಡಿ ಮಾಡಿದರು.

             ಮುಖ್ಯಮಂತ್ರಿಗಳು ಚುನಾವಣ ಪ್ರಚಾರಕ್ಕೆ ಹುಳಿಯಾರಿಗೆ ಬಂದಿದ್ದಂತಹ ಸಂದರ್ಭದಲ್ಲಿ ನುಡಿದಂತೆ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಎರಡುಕೋಟಿ ರೂಪಾಯಿ ಅನುದಾನ ಬಿಡುಗಡೆಮಾಡಿದ್ದು ಇದನ್ನು ಶಾಸಕರು ಹಳ್ಳಿಜನಕ್ಕೆ ಮಬ್ಬು ಮಾಡುತ್ತಾ ನಿಮ್ಮಹಳ್ಳಿಗೆ ನಾನು ೨೦ ಲಕ್ಷ ಹಾಕಿದ್ದಿನಿ ಅಂತ ಸುಳ್ಳು ಭರವಸೆ ಕೊಡುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರದ ಹಣವನ್ನು ನನ್ನ ಅನುದಾನವೆಂದು ತಪ್ಪು ಸಂದೇಶ ಕೊಡುವುದನ್ನು ಈ ಕೂಡಲೇ ನಿಲ್ಲಿಸಿ ಎಂದರು.ನನ್ನ ಸೋಲಿಗೆ ಹಗಲು ರಾತ್ರಿಯೆನ್ನದೆ ಹುಳಿಯಾರಿಗೆ ಬಂದ ಮಲಗಿದ್ದ ಶಾಸಕರನ್ನು ಮನೆ ಸೇರಿಸುವವರೆಗೂ ನಾವು ಸಹ ವಿರಮಿಸುವುದಿಲ್ಲ ಎಂದು ಕಿಡಿಕಾರಿದರು.

                ನನಗಾಗಿ ಹಲವಾರು ಕಾರ್ಯಕರ್ತರು ಶ್ರಮಿಸಿದ್ದು ಅವರ ಹಿತ ಕಾಪಾಡಲು ನಾನು ಬದ್ದ.ಈ ಗೆಲುವು ನನ್ನದಲ್ಲ ಕಾರ್ಯಕರ್ತರ ಗೆಲುವು. ನಾನ್ಯಾವಾಗಲೂ ಹಳ್ಳಿಯಲ್ಲಿದ್ದು ಹಳ್ಳಿಯ ಜನರಿಗೆ ಸ್ಪಂದಿಸುವೆ.ಕುಡಿಯುವ ನೀರು,ರಸ್ತೆ,ಆರೋಗ್ಯ ಮುಂತಾದ ಸಮಸ್ಯೆಗಳಿಗೆ ಒತ್ತುಕೊಟ್ಟು ಜನರ ಹಿತಕಾಪಾಡುವೆ.ಜನರ ವಿಶ್ವಾಸಕ್ಕೆ ತಲೆಬಾಗಿ ಜನಗಳ ಜೊತೆಯಲ್ಲೇಯಿರುವೆ ಎಂದರು.


                ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ದಯಾನಂದ್,ಧನುಷ್ ರಂಗನಾಥ್,ಮಾಜಿ ತಾಪಂ ಸದಸ್ಯ ಮಲ್ಲೀಕಣ್ಣ.ವಕೀಲ ರಮೇಶ್ ಬಾಬು,ಹೊಸಳ್ಳಿ ಅಶೋಕ್ ,ಕಿರಣ್ ಕುಮಾರ್,ವೆಂಕಟೇಶ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.