ವಿಷಯಕ್ಕೆ ಹೋಗಿ

ಇದು ನನ್ನ ಗೆಲುವಲ್ಲ ,ಕಾರ್ಯಕರ್ತರ ಗೆಲುವು:ವೈ.ಸಿ.ಸಿದ್ದರಾಮಯ್ಯ

ಶಾಸಕರ ಮೇಲೆ ಕಿಡಿಕಾರಿದ ನೂತನ ಜಿಪಂ ಸದಸ್ಯ
------------------------------------
                   ನನ್ನ ಹಿಂದೆ ಹಲವಾರು ಕಾರ್ಯಕರ್ತರು ಹಗಲಿರುಳೆನ್ನದೆ ದುಡಿದ ಪರಿಣಾಮವಾಗಿ ಹುಳಿಯಾರು ಜಿಲ್ಲಾಪಂಚಾಯ್ತಿ ಸ್ಥಾನಕ್ಕೆ ನಾನು ಆಯ್ಕೆಯಾಗಲು ಕಾರಣವಾಗಿದ್ದು ನನ್ನ ಗೆಲುವಿನ ಸಂಪೂರ್ಣ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕಿದೆ ಎಂದು ಹುಳಿಯಾರು ಜಿಪಂ ವಿಜೇತ ಅಭ್ಯರ್ಥಿ ವೈ.ಸಿ.ಸಿದ್ರಾಮಯ್ಯ ನುಡಿದರು.

                    ಚಿಕ್ಕನಾಯಕನಹಳ್ಳಿ ತಾಲ್ಲೂಕಿನಾದ್ಯಂತ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟಿರುವುದು ಹುಳಿಯಾರು ಕ್ಷೇತ್ರವಾಗಿದ್ದು ಈ ಗೆಲುವಿಗೆ ಕಾರಣರಾದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ನಾನು ಕೃತಜ್ಞ ಎಂದ ಅವರು ಜನರಿಟ್ಟ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದು ಅವರ ಹಿತಕಾಯಲು ನಾನು ಬದ್ದ ಎಂದರು.
ಹುಳಿಯಾರು ಜಿಪಂ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ಸಿನ ವೈ.ಸಿ.ಸಿದ್ರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿದರು.ಗ್ರಾಪಂ ಸದಸ್ಯ ದಯಾನಂದ್,ಧನುಷ್ ರಂಗನಾಥ್,ಮಲ್ಲೀಕಣ್ಣ,ರಮೇಶ್ ಬಾಬು,ಹೊಸಳ್ಳಿ ಅಶೋಕ್ ಇದ್ದಾರೆ.

ಈ ಹಿಂದೆ ಎಪಿಎಂಸಿ ಚುನಾವಣೆಯಲ್ಲೂ ಸಹ ಜನರ ಆಶೀರ್ವಾದ ನನ್ನ ಮೇಲಿದ್ದ ಕಾರಣ ಅಲ್ಲೂ ಕೂಡ ಇದೇರೀತಿ ಫಲಿತಾಂಶದಿಂದಾಗಿ ಗೆಲುವು ಸಾಧಿಸಿದ್ದೆ.ಹಾಲಿ ಶಾಸಕರು ಹಾಗೂ ಮಾಜಿ ಶಾಸಕರುಗಳ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದು ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟ ಕಾರಣ ಈ ಗೆಲುವು ಸಾಧ್ಯಾವಾಯಿತು ಎಂದು ವಿಶ್ಲೇಷಿಸಿದರು.

ಶಾಸಕರ ಮೇಲೆ ಟೀಕಾಪ್ರಹಾರ : ಕ್ಷೇತ್ರದಲ್ಲಿ ಶಾಸಕರ ಸಾಧನೆ ಶೂನ್ಯವಾಗಿದ್ದು ಅವರ ಅಭ್ಯರ್ಥಿ ಸೋಲಿಗೆ ಕಾರಣವಾಯಿತು. ಜನರು ಬಯಸುವುದು ಜನಸಾಮಾನ್ಯರಿಗೆ ಸ್ಪಂದಿಸುವಂತಹ ವ್ಯಕ್ತಿಯನ್ನು ಹೊರತು ಗೆದ್ದಾಗ ಬೆಂಗಳೂರು ಸೇರಿಕೊಂಡು ನಾಮಕರಣ,ಆರಾಧನೆ ಮುಂತಾದ ಸಮಾರಂಭಗಳೆಗೆ ದುಡ್ಡುಹಂಚುವ ವ್ಯಕ್ತಿಯನ್ನಲ್ಲ ಎಂದು ಲೇವಡಿ ಮಾಡಿದರು.

             ಮುಖ್ಯಮಂತ್ರಿಗಳು ಚುನಾವಣ ಪ್ರಚಾರಕ್ಕೆ ಹುಳಿಯಾರಿಗೆ ಬಂದಿದ್ದಂತಹ ಸಂದರ್ಭದಲ್ಲಿ ನುಡಿದಂತೆ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಎರಡುಕೋಟಿ ರೂಪಾಯಿ ಅನುದಾನ ಬಿಡುಗಡೆಮಾಡಿದ್ದು ಇದನ್ನು ಶಾಸಕರು ಹಳ್ಳಿಜನಕ್ಕೆ ಮಬ್ಬು ಮಾಡುತ್ತಾ ನಿಮ್ಮಹಳ್ಳಿಗೆ ನಾನು ೨೦ ಲಕ್ಷ ಹಾಕಿದ್ದಿನಿ ಅಂತ ಸುಳ್ಳು ಭರವಸೆ ಕೊಡುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರದ ಹಣವನ್ನು ನನ್ನ ಅನುದಾನವೆಂದು ತಪ್ಪು ಸಂದೇಶ ಕೊಡುವುದನ್ನು ಈ ಕೂಡಲೇ ನಿಲ್ಲಿಸಿ ಎಂದರು.ನನ್ನ ಸೋಲಿಗೆ ಹಗಲು ರಾತ್ರಿಯೆನ್ನದೆ ಹುಳಿಯಾರಿಗೆ ಬಂದ ಮಲಗಿದ್ದ ಶಾಸಕರನ್ನು ಮನೆ ಸೇರಿಸುವವರೆಗೂ ನಾವು ಸಹ ವಿರಮಿಸುವುದಿಲ್ಲ ಎಂದು ಕಿಡಿಕಾರಿದರು.

                ನನಗಾಗಿ ಹಲವಾರು ಕಾರ್ಯಕರ್ತರು ಶ್ರಮಿಸಿದ್ದು ಅವರ ಹಿತ ಕಾಪಾಡಲು ನಾನು ಬದ್ದ.ಈ ಗೆಲುವು ನನ್ನದಲ್ಲ ಕಾರ್ಯಕರ್ತರ ಗೆಲುವು. ನಾನ್ಯಾವಾಗಲೂ ಹಳ್ಳಿಯಲ್ಲಿದ್ದು ಹಳ್ಳಿಯ ಜನರಿಗೆ ಸ್ಪಂದಿಸುವೆ.ಕುಡಿಯುವ ನೀರು,ರಸ್ತೆ,ಆರೋಗ್ಯ ಮುಂತಾದ ಸಮಸ್ಯೆಗಳಿಗೆ ಒತ್ತುಕೊಟ್ಟು ಜನರ ಹಿತಕಾಪಾಡುವೆ.ಜನರ ವಿಶ್ವಾಸಕ್ಕೆ ತಲೆಬಾಗಿ ಜನಗಳ ಜೊತೆಯಲ್ಲೇಯಿರುವೆ ಎಂದರು.


                ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ದಯಾನಂದ್,ಧನುಷ್ ರಂಗನಾಥ್,ಮಾಜಿ ತಾಪಂ ಸದಸ್ಯ ಮಲ್ಲೀಕಣ್ಣ.ವಕೀಲ ರಮೇಶ್ ಬಾಬು,ಹೊಸಳ್ಳಿ ಅಶೋಕ್ ,ಕಿರಣ್ ಕುಮಾರ್,ವೆಂಕಟೇಶ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...