ವಿಷಯಕ್ಕೆ ಹೋಗಿ

ಹುಳಿಯಾರು: ಕಸಾಪ ಚುನಾವಣೆಯಲ್ಲಿ ರಮಾಕುಮಾರಿಗೆ ಹೆಚ್ಚುಮತ

          ಕನ್ನಡ ಸಾಹಿತ್ಯ ಪರಿಷತ್‌ನ ಕೇಂದ್ರ ಹಾಗೂ ಜಿಲ್ಲಾಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಹುಳಿಯಾರಿನಲ್ಲಿ ಶೇಕಡ ೬೩ ಮತದಾನ ನಡೆದಿದ್ದು ಸದಸ್ಯರು ಹುರುಪಿನಿಂದ ಪಾಲ್ಗೊಂಡಿದ್ದು ಕಂಡುಬಂತು.

               ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು ೫೬೨ ಮತದಾರರಿದ್ದು ಹುಳಿಯಾರು ಹೋಬಳಿಯ ೨೩೫ ಮತದಾರಿಗೆ ಹುಳಿಯಾರು ನಾಡಕಚೇರಿಯಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಲಾಗಿತ್ತು.ತಾಲ್ಲೂಕ್ ಕೇಂದ್ರಗಳಲ್ಲಿ ನಡೆಯುತ್ತಿದ್ದ ಪರಿಷತ್ ಚುನಾವಣೆ ಹೋಬಳಿ ಮತದಾರರ ಅನುಕೂಲ ದೃಷ್ಟಿಯಿಂದ ಪಟ್ಟಣದ ನಾಡ ಕಚೇರಿಯಲ್ಲಿ ಹೆಚ್ಚುವರಿ ಮತಗಟ್ಟೆಯ ವ್ಯವಸ್ಥೆ ಕಲ್ಪಿಸಿದ್ದರಿಂದ ಹೆಚ್ಚಿನ ಸದಸ್ಯರು ಮತ ಚಲಾಯಿಸಲು ಅನುಕೂಲವಾಯಿತು.ಬೆಳಿಗ್ಗೆ ೮ ಗಂಟೆಯಿಂದ ಪ್ರಾರಂಭವಾದ ಮತದಾನ ಸಂಜೆ ೪ ಗಂಟೆಯವರೆಗೂ ಮಂದಗತಿಯಲ್ಲಿ ನಡೆಯಿತು.
ಹುಳಿಯಾರಿನ ನಾಡಕಛೇರಿಯಲ್ಲಿ ಕಸಾಪ ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆದ ಮತಏಣಿಕೆ ದೃಶ್ಯ.

               ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಾ.ಹ.ರಮಾಕುಮಾರಿ, ಉಮಾಮಹೇಶ್‌, ಡಿ.ಚಂದ್ರಪ್ಪ, ಗರುಗದೊಡ್ಡಿ ನಟರಾಜ್‌, ಪುರುಷೋತ್ತಮ್‌, ಮಹಾದೇವಪ್ಪ, ರವಿಕುಮಾರ್‌ ಸೇರಿದಂತೆ ಒಟ್ಟು ಏಳು ಮಂದಿ ಕಣದಲ್ಲಿದ್ದರೆ ಕೇಂದ್ರ ಸ್ಥಾನಕ್ಕೆ ಮನುಬಳಿಗಾರ್ ಸೇರಿದಂತೆ ೧೪ ಮಂದಿ ಕಣದಲ್ಲಿದ್ದರು.

           ಹೆಚ್ಚಿನ ಚಟುವಟಿಕೆಯಿಂದ ಕೂಡಿ ಜಿಲ್ಲೆಯಲ್ಲಿ ಹೆಸರಾಗಿದ್ದ ಹುಳಿಯಾರು ಹೋಬಳಿ ಕಸಾಪ ಘಟಕ ಪ್ರತಿಷ್ಠೆಯ ಕಣವಾಗಿದ್ದರಿಂದ ಎಲ್ಲಾ ಅಭ್ಯರ್ಥಿಗಳು ಹುಳಿಯಾರನ್ನು ಹೆಚ್ಚು ಕೇಂದ್ರಿಕರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆ ಅಭ್ಯರ್ಥಿಯಾಗಿ ಬಾ.ಹ.ರಮಾಕುಮಾರಿ ಕಣದಲ್ಲಿದಿದ್ದು ವಿಶೇಷವಾಗಿತ್ತು.

                   ಸಂಜೆ ನಾಲ್ಕರ ನಂತರ ಮತಏಣಿಕೆ ಕಾರ್ಯನಡೆದು ಸ್ಥಳದಲ್ಲೆ ಜಿಲ್ಲಾ ಹಾಗೂ ಕೇಂದ್ರ ಕಛೇರಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಪಡೆದ ಮತಗಳನ್ನು ಚುನಾವಣಾಧಿಕಾರಿ ಉಪತಹಸಿಲ್ದಾರ್ ಸತ್ಯನಾರಾಯಣ್ ಘೋಷಿಸಿದರು.

ಹುಳಿಯಾರು ಮತಗಟ್ಟೆಯಲ್ಲಿ ಜಿಲ್ಲಾ ಅಭ್ಯರ್ಥಿಗಳು ಪಡೆದ ಮತವಿವರ
------------------------------------------------------- ಬಾ.ಹ.ರಮಾಕುಮಾರಿ(೬೨),ಡಿ.ಚಂದ್ರಪ್ಪ(೫೯),ಕೆ.ಎಸ್.ಉಮಾಮಹೇಶ್(೨೧),ಎಂ.ಎಸ್.ರವಿಕುಮಾರ್
(೪),ಎಸ್.ಪುರುಷೋತ್ತಮ್(೨)ಮತಗಳನ್ನು ಪಡೆದರೆ ಮಹದೇವಪ್ಪ,ಗರುಗದೊಡ್ಡಿ ನಟರಾಜ್ ಯಾವುದೇ ಮತಪಡೆಯಲು ವಿಫಲರಾಗಿದ್ದಾರೆ.

ಹುಳಿಯಾರು ಮತಗಟ್ಟೆಯಲ್ಲಿ ಕೇಂದ್ರ ಅಭ್ಯರ್ಥಿಗಳು ಪಡೆದ ಮತ ವಿವರ:
------------------------------------------------------


   ಮನುಬಳಿಗಾರ್(೯೦),ಬಿ.ಜಯಪ್ರಕಾಶ್ ಗೌಡ(೧೩),ಸಂಗಮೇಶ ಬಾದವಾಡಗಿ(೧೨),ಡಾ.ಜನಾರ್ಧನ್ ಹೆಚ್.ಎಲ್.(೭),ಶರಣ ಬಸಪ್ಪ ಕಲ್ಲಪ್ಪ ದಾನಕೈ(೫), ಮ.ಚಿ.ಕೃಷ್ಣ(೪), ಅಮೃತೇಶ್, ಆರ್.ಎಸ್.ಎನ್.ಗೌಡ ,ಬಸವರಾಜ ಹಳ್ಳೂರ,ರೇಣುಕ.ವೈ,ಶಿವರಾಜ ಗುರುಶಾಂತಪ್ಪ ಪಾಟೀಲ ತಲಾ ಮೂರು ಮತಗಳನ್ನು ಗಳಿಸಿದರೆ,ಪಟೇಲ ಪಾಂಡು(೧)ಮತಗಳನ್ನು ಪಡೆದಿದ್ದಾರೆ.ಶಿವಪ್ಪ ಮಲ್ಲಪ್ಪ ಹಾಗೂ ಸಂಜೀವ ಕುಮಾರ್ ಯಾವುದೇ ಮತಗಳನ್ನು ಗಳಿಸಲು ವಿಫಲರಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.