ವಿಷಯಕ್ಕೆ ಹೋಗಿ

ಹುಳಿಯಾರು: ಕಸಾಪ ಚುನಾವಣೆಯಲ್ಲಿ ರಮಾಕುಮಾರಿಗೆ ಹೆಚ್ಚುಮತ

          ಕನ್ನಡ ಸಾಹಿತ್ಯ ಪರಿಷತ್‌ನ ಕೇಂದ್ರ ಹಾಗೂ ಜಿಲ್ಲಾಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಹುಳಿಯಾರಿನಲ್ಲಿ ಶೇಕಡ ೬೩ ಮತದಾನ ನಡೆದಿದ್ದು ಸದಸ್ಯರು ಹುರುಪಿನಿಂದ ಪಾಲ್ಗೊಂಡಿದ್ದು ಕಂಡುಬಂತು.

               ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು ೫೬೨ ಮತದಾರರಿದ್ದು ಹುಳಿಯಾರು ಹೋಬಳಿಯ ೨೩೫ ಮತದಾರಿಗೆ ಹುಳಿಯಾರು ನಾಡಕಚೇರಿಯಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಲಾಗಿತ್ತು.ತಾಲ್ಲೂಕ್ ಕೇಂದ್ರಗಳಲ್ಲಿ ನಡೆಯುತ್ತಿದ್ದ ಪರಿಷತ್ ಚುನಾವಣೆ ಹೋಬಳಿ ಮತದಾರರ ಅನುಕೂಲ ದೃಷ್ಟಿಯಿಂದ ಪಟ್ಟಣದ ನಾಡ ಕಚೇರಿಯಲ್ಲಿ ಹೆಚ್ಚುವರಿ ಮತಗಟ್ಟೆಯ ವ್ಯವಸ್ಥೆ ಕಲ್ಪಿಸಿದ್ದರಿಂದ ಹೆಚ್ಚಿನ ಸದಸ್ಯರು ಮತ ಚಲಾಯಿಸಲು ಅನುಕೂಲವಾಯಿತು.ಬೆಳಿಗ್ಗೆ ೮ ಗಂಟೆಯಿಂದ ಪ್ರಾರಂಭವಾದ ಮತದಾನ ಸಂಜೆ ೪ ಗಂಟೆಯವರೆಗೂ ಮಂದಗತಿಯಲ್ಲಿ ನಡೆಯಿತು.
ಹುಳಿಯಾರಿನ ನಾಡಕಛೇರಿಯಲ್ಲಿ ಕಸಾಪ ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆದ ಮತಏಣಿಕೆ ದೃಶ್ಯ.

               ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಾ.ಹ.ರಮಾಕುಮಾರಿ, ಉಮಾಮಹೇಶ್‌, ಡಿ.ಚಂದ್ರಪ್ಪ, ಗರುಗದೊಡ್ಡಿ ನಟರಾಜ್‌, ಪುರುಷೋತ್ತಮ್‌, ಮಹಾದೇವಪ್ಪ, ರವಿಕುಮಾರ್‌ ಸೇರಿದಂತೆ ಒಟ್ಟು ಏಳು ಮಂದಿ ಕಣದಲ್ಲಿದ್ದರೆ ಕೇಂದ್ರ ಸ್ಥಾನಕ್ಕೆ ಮನುಬಳಿಗಾರ್ ಸೇರಿದಂತೆ ೧೪ ಮಂದಿ ಕಣದಲ್ಲಿದ್ದರು.

           ಹೆಚ್ಚಿನ ಚಟುವಟಿಕೆಯಿಂದ ಕೂಡಿ ಜಿಲ್ಲೆಯಲ್ಲಿ ಹೆಸರಾಗಿದ್ದ ಹುಳಿಯಾರು ಹೋಬಳಿ ಕಸಾಪ ಘಟಕ ಪ್ರತಿಷ್ಠೆಯ ಕಣವಾಗಿದ್ದರಿಂದ ಎಲ್ಲಾ ಅಭ್ಯರ್ಥಿಗಳು ಹುಳಿಯಾರನ್ನು ಹೆಚ್ಚು ಕೇಂದ್ರಿಕರಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆ ಅಭ್ಯರ್ಥಿಯಾಗಿ ಬಾ.ಹ.ರಮಾಕುಮಾರಿ ಕಣದಲ್ಲಿದಿದ್ದು ವಿಶೇಷವಾಗಿತ್ತು.

                   ಸಂಜೆ ನಾಲ್ಕರ ನಂತರ ಮತಏಣಿಕೆ ಕಾರ್ಯನಡೆದು ಸ್ಥಳದಲ್ಲೆ ಜಿಲ್ಲಾ ಹಾಗೂ ಕೇಂದ್ರ ಕಛೇರಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಪಡೆದ ಮತಗಳನ್ನು ಚುನಾವಣಾಧಿಕಾರಿ ಉಪತಹಸಿಲ್ದಾರ್ ಸತ್ಯನಾರಾಯಣ್ ಘೋಷಿಸಿದರು.

ಹುಳಿಯಾರು ಮತಗಟ್ಟೆಯಲ್ಲಿ ಜಿಲ್ಲಾ ಅಭ್ಯರ್ಥಿಗಳು ಪಡೆದ ಮತವಿವರ
------------------------------------------------------- ಬಾ.ಹ.ರಮಾಕುಮಾರಿ(೬೨),ಡಿ.ಚಂದ್ರಪ್ಪ(೫೯),ಕೆ.ಎಸ್.ಉಮಾಮಹೇಶ್(೨೧),ಎಂ.ಎಸ್.ರವಿಕುಮಾರ್
(೪),ಎಸ್.ಪುರುಷೋತ್ತಮ್(೨)ಮತಗಳನ್ನು ಪಡೆದರೆ ಮಹದೇವಪ್ಪ,ಗರುಗದೊಡ್ಡಿ ನಟರಾಜ್ ಯಾವುದೇ ಮತಪಡೆಯಲು ವಿಫಲರಾಗಿದ್ದಾರೆ.

ಹುಳಿಯಾರು ಮತಗಟ್ಟೆಯಲ್ಲಿ ಕೇಂದ್ರ ಅಭ್ಯರ್ಥಿಗಳು ಪಡೆದ ಮತ ವಿವರ:
------------------------------------------------------


   ಮನುಬಳಿಗಾರ್(೯೦),ಬಿ.ಜಯಪ್ರಕಾಶ್ ಗೌಡ(೧೩),ಸಂಗಮೇಶ ಬಾದವಾಡಗಿ(೧೨),ಡಾ.ಜನಾರ್ಧನ್ ಹೆಚ್.ಎಲ್.(೭),ಶರಣ ಬಸಪ್ಪ ಕಲ್ಲಪ್ಪ ದಾನಕೈ(೫), ಮ.ಚಿ.ಕೃಷ್ಣ(೪), ಅಮೃತೇಶ್, ಆರ್.ಎಸ್.ಎನ್.ಗೌಡ ,ಬಸವರಾಜ ಹಳ್ಳೂರ,ರೇಣುಕ.ವೈ,ಶಿವರಾಜ ಗುರುಶಾಂತಪ್ಪ ಪಾಟೀಲ ತಲಾ ಮೂರು ಮತಗಳನ್ನು ಗಳಿಸಿದರೆ,ಪಟೇಲ ಪಾಂಡು(೧)ಮತಗಳನ್ನು ಪಡೆದಿದ್ದಾರೆ.ಶಿವಪ್ಪ ಮಲ್ಲಪ್ಪ ಹಾಗೂ ಸಂಜೀವ ಕುಮಾರ್ ಯಾವುದೇ ಮತಗಳನ್ನು ಗಳಿಸಲು ವಿಫಲರಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...