ವಿಷಯಕ್ಕೆ ಹೋಗಿ

ನಾಳೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ

ಮನೆ ಮನೆ ಪ್ರಚಾರ : ಕೊನೆಗಳಿಗೆ ಕಾರ್ಯಾಚರಣೆ
                                       -----------------------------------
ಹುಳಿಯಾರು:ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕ್ಷಣಗಣನೆ ನಡೆದಿದ್ದು ಶನಿವಾರದ ಮತದಾನದಲ್ಲಿ ಹಣಾಹಣಿ ನಡೆಸಿದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.
            ೪೮ ಗಂಟೆಗಳ ಮೊದಲೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದು,ಗುರುವಾರದಿಂದ ಶುರುವಾದ ಮನೆಮನೆ ಪ್ರಚಾರ ರಾತ್ರಿ ಹಗಲ್ಲೆನ್ನದೆ ಭರದಿಂದ ನಡೆದಿದೆ.ಇಷ್ಟು ದಿನ ಮಾಡಿದ ಪ್ರಚಾರ ಒಂದು ರೀತಿಯಾದಾದ್ದರೆ ಕಡೆಕ್ಷಣದಲ್ಲಿ ನಡೆಯುವ ಕಸರತ್ತು ಮತದಾರರ ಮನಬದಲಾಯಿಸಿ ಫಲಿತಾಂಶದಲ್ಲಿ ಬದಲಾವಣೆ ತರಲಿದೆ.
                        ಅಭ್ಯರ್ಥಿಗಳಿಗೆ ಕಡೆಯ ಎರಡು ದಿನಗಳು ಮುಖ್ಯವಾಗಿದ್ದು ಎಲ್ಲಾ ಅಭ್ಯರ್ಥಿಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಹಳ್ಳಿ ಪಟ್ಟಣವೆನ್ನದೆ ರಾತ್ರಿಯೆಲ್ಲಾ ತಮ್ಮ ಹಿಂಬಾಲಕರೊಂದಿಗೆ ಕಡೆಕ್ಷಣದ ಕಾರ್ಯಾಚರಣೆಗೆ ಇಳಿದಿದ್ದು ಎಲ್ಲೆಡೆ ಬಿರುಸಿನ ಚಟುವಟಿಕೆ ಕಂಡುಬಂತು. ಆಯಾ ಜಾತಿ ಜನಾಂಗದ ಮುಖಂಡರುಗಳನ್ನು ,ಸಂಘಸಂಸ್ಥಗಳ ಪ್ರತಿನಿಧಿಗಳನ್ನು ಆಯಾ ಮುಖಂಡರುಗಳಿಗೆ ಹತ್ತಿರವಾದವರ ಮೂಲಕ ಗುಪ್ತಸ್ಥಳಗಳಲ್ಲಿ ಭೇಟಿಯಾಗಿ ಮಾತುಕಥೆಯಾಡುವುದು ನಡೆದಿತ್ತು.
                 ಸಮಯದ ಪರಿವೆಯಿಲ್ಲದಂತೆ ರಾತ್ರಿಯೆಲ್ಲಾ ಗುಪ್ತ ಸಭೆಗಳು ನಡೆದು ಕೊನೆಗಳಿಗೆಯ ಕಾರ್ಯಾಚರಣೆಯಲ್ಲಿ ಹಂಚಿಕೆ ವ್ಯವಸ್ಥೆ ಎಗ್ಗಿಲ್ಲದೆ ನಡೆದಿದೆ.ಎಲ್ಲಾ ಪಕ್ಷದವರು ಅಲ್ಪಸಂಖ್ಯಾತರ ಮನವೊಲಿಕೆಗಾಗಿ ಮಸೀದಿಗಳಿಗೆ ತೆರಳಿ ಮತಹಾಕಲು ಮನವಿ ಮಾಡಿದ್ದು ವಿಶೇಷವಾಗಿತ್ತು.ಪ್ರತಿಯೊಬ್ಬ ಮತದಾರರ ಭೇಟಿಯಾಗುವ ಬದಲಿಗೆ ಆಯಾ ಜಾನಾಂಗದ, ಏರಿಯಾದ ಮುಖಂಡರುಗಳನ್ನು ಭೇಟಿಯಾಗಿ ಮನವೊಲಿಕೆಯಲ್ಲಿ ತೊಡಗಿದ್ದರು.ಇನ್ನು ಕೆಲವಡೆ ದೇವಾಲಯಗಳಲ್ಲೂ ಗ್ರಾಮಸ್ಥರ ಸಮ್ಮುಖ ಸಭೆ ನಡೆಸಿದ್ದು ಕಂಡುಬಂತು.
                       ಗ್ರಾಮಗಳ ಮುಖಂಡರುಗಳು ಹೇಳುವ ,ಕೇಳುವ ಬೇಡಿಕೆಗಳನ್ನು ಈಡೇರಿಸಿದರೆ ಫಲಿತಾಂಶ ನಮ್ಮಂತೆ ಆಗುತ್ತದೆಂಬ ನಂಬಿಕೆಯಿಂದಾಗಿ ಅವರುಗಳನ್ನು ಗುಪ್ತವಾಗಿ ಭೇಟಿಯಾಗಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ ನಾಯಕರುಗಳನ್ನು ಓಲೈಸುತ್ತಿದ್ದರು.ಎಲ್ಲಾ ಅಭ್ಯರ್ಥಿಗಳು ಸಿಕ್ಕಸಿಕ್ಕವರಿಗೆಲ್ಲಾ ಕೈ ಮುಗಿದು ಈ ಬಾರಿ ನಮ್ಮ ಕೈಹಿಡಿಯಿರಿ ಎನ್ನುವುದು ಮಾಮೂಲಿಯಾಗಿತ್ತು.
                         ಚುನಾವಣೆ ಎಂದರೆ ಹಣ ಹೆಂಡ ಎನ್ನುವಷ್ಟರ ಮಟ್ಟಿಗೆ ಮಾಮೂಲು ವಿಚಾರವಾಗಿದ್ದು ಹಣವಿಲ್ಲದೆ ಚುನಾವಣೆ ನಡೆಸುವುದು ಅಸಾಧ್ಯವಾಗಿದ್ದು ಇದರಿಂದಲೇ ಅಭ್ಯರ್ಥಿಯ ಸೋಲುಗೆಲುವು ನಿರ್ಧರಿಸಬಹುದಾಗಿದೆ. ಹಣಹಂಚಿಕೆ ವಿಚಾರದಲ್ಲಿ ಹೆಚ್ಚಿನ ಅಭ್ಯರ್ಥಿಗಳು ಕೈ ಬಿಚ್ಚಿ ಖರ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ.ಗ್ರಾಮೀಣ ಭಾಗದಲ್ಲಿ ಮತಕ್ಕಿಷ್ಟು ಎಂದು ಮೊದಲೆ ನಿರ್ಧಾರ ಮಾಡಿದ್ದು ಹೆಚ್ಚು ಮತದಾರರು ಇರುವ ಕುಟುಂಬಗಳಿಗೆ ಹೆಚ್ಚು ಹಣ ನೀಡಿ ಎಲ್ಲಾ ಮತ ತಮಗೆ ಹಾಕುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಹಣಕೊಟ್ಟು ಆಣೆಪ್ರಮಾಣ ಮಾಡಿಸಿಕೊಂಡಿದ್ದು ನಡೆದಿದೆ.
            ಮತದಾರರನ್ನು ಬೂತಿಗೆ ಕರೆತಂದು ಮತಹಾಕಿಸಿಕೊಂಡು ಕಳುಹಿಸಲು ಎಲ್ಲಾ ಅಭ್ಯರ್ಥಿಗಳು ವಾಹನದ ವ್ಯವಸ್ಥೆ ಮಾಡಿಕೊಂಡಿದ್ದು ಪಟ್ಟಣದ್ದಲ್ಲಿ ವಾಹನೆಗಳೆ ಇಲ್ಲದಂತಾಗಿದೆ.ಪರಊರಿನಲ್ಲಿರುವ ಮತದಾರರನ್ನು ಖರ್ಚುಕೊಟ್ಟು ಕರೆಯಿಸಿಕೊಳ್ಳುವ ವ್ಯವಸ್ಥೆ ಕೂಡ ಮಾಡಲಾಗಿದೆ.

                ಒಟ್ಟಾರೆ ನಾಳೆ ನಡೆಯಲಿರುವ ಚುನಾವಣೆಯಲ್ಲಿ ಹುಳಿಯಾರು ಕ್ಷೇತ್ರದ ಆರು ಜನ ಜಿಲ್ಲಾಪಂಚಾಯ್ತಿ ಅಭ್ಯರ್ಥಿಗಳು ಹಾಗೂ ಮೂರು ಜನ ತಾಲ್ಲೂಕ್ ಪಂಚಾಯ್ತಿ ಅಭ್ಯರ್ಥಿಗಳಲ್ಲಿ ಗೆಲ್ಲುವ ಅಭ್ಯರ್ಥಿ ಯಾರೆಂದು ನಿರ್ಧಾರವಾಗಲಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.