ವಿಷಯಕ್ಕೆ ಹೋಗಿ

ಎಸ್ ಬಿ ಐ ಬ್ಯಾಂಕಲ್ಲಿ ಗ್ರಾಹಕರಿಗೆ ಕಿರಿಕಿರಿ

ರೊಚ್ಚಿಗೆದ್ದ ಗ್ರಾಹಕರು: ಕ್ಷಮೆ ಯಾಚಿಸಿದ ವ್ಯವಸ್ಥಾಪಕ
--------------------------
ಹುಳಿಯಾರು:ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ವ್ಯವಸ್ಥಾಪಕರು ಹಾಗೂ ಕೆಲ ಸಿಬ್ಬಂದಿಯವ ಗ್ರಾಹಕಸ್ನೇಹಿಯಾಗಿ ವರ್ತಿಸದೆ ಗ್ರಾಹಕರಿಗೆ ಕಿರಿಕಿರಿಯುಂಟುಮಾಡುತ್ತಾರೆಂದು ರೊಚ್ಚಿಗೆದ್ದ ಗ್ರಾಹಕರು ಮ್ಯಾನೇಜರ್ ಅವರನ್ನು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಬುಧವಾರದಂದು ಜರುಗಿತು.

           ಇಲ್ಲಿನ ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದೆ ಪ್ರತಿದಿನ ದೌರ್ಜನ್ಯದಿಂದ ನಡೆದುಕೊಳ್ಳುತ್ತಾರಲ್ಲದೆ ಗ್ರಾಹಕರಿಗೆ ಕನಿಷ್ಟ ಮರ್ಯಾದೆಯನ್ನು ಕೊಡದೆ ಕಿರಿಕಿರಿ ಉಂಟು ಮಾಡುತ್ತಿದ್ದು ಈ ಧೋರಣೆ ಸರಿಪಡಿಸಿಕೊಳ್ಳಬೇಕೆಂದು ಗ್ರಾಮಪಂಚಾಯ್ತಿ ಸದಸ್ಯ ಎಲ್.ಆರ್.ಚಂದ್ರಶೇಖರ್ ಹಾಗೂ ಸಾರ್ವಜನಿಕರು ಬ್ಯಾಂಕಿನ ವ್ಯವಸ್ಥಾಪಕರ ವಿರುದ್ದ ಹರಿಹಾಯ್ದರು.

ಸಮಸ್ಯೆ ಏನು: ಹಣ ಪಾವತಿ ಮಾಡಲು ಹೋದರೆ ಚಲನ್ ಕೊಡದೆ ಗ್ರೀನ್ ರೆಮಿಟ್ ಕಾರ್ಡ್ ಮೂಲಕವೇ ಪಾವತಿಸಿ ಎನ್ನುತ್ತಾರೆ ಮತ್ತು ಹಣ ಬಿಡಿಸುವುದಕ್ಕೆ ಹೋದರೆ ಚೆಕ್ ಲೀಫ್ ಕೊಡದೆ ಎಟಿಎಂ ಮೂಲಕ ಡ್ರಾ ಮಾಡಿ ಎಂದು ವಾಪಸ್ಸು ಕಳುಹಿಸುತ್ತಾರೆ.ಚಲನ್ ನೀಡದೆ ಕಾರ್ಡ್ ಮೂಲಕವೇ ಪಾವತಿಸಿ ಎಂದು ಪಟ್ಟು ಹಿಡಿಯುವುದರಿಂದ ಗ್ರಾಮೀಣ ಭಾಗದ ಅನಕ್ಷರಸ್ಥರು ಮೋಸ ಹೋಗುತ್ತಿರುವ ಘಟನೆಗಳು ಕೂಡ ಹೆಚ್ಚಾಗುತ್ತಿದೆ.ಕಾರ್ಡ್ ಮೂಲಕ ಡ್ರಾ ಮಾಡಲು ತಿಳಿಯದೆ ಅಕ್ಕಪಕ್ಕದವರ ಸಹಾಯ ತೆಗೆದುಕೊಳ್ಳುವ ಮುಗ್ಧರು ಪಿನ್ ನಂಬರ್ ಹೇಳುತ್ತಲೆ ಅವರ ಖಾತೆಯಲ್ಲಿ ಅವರಿಗೆ ತಿಳಿಯದಂತೆ ಹೆಚ್ಚು ಹಣ ಲಪಾಟಾಯಿಸಿದ ಪ್ರಕರಣಗಳು ಕೂಡ ಜರುಗಿದೆ.
ಕನಿಷ್ಟ ಹಣ ಬಿಡಿಸಿಕೊಳ್ಳಲು ಇಡಿ ದಿನವಾಗುತ್ತೆ.ದೂರದ ಊರಿನಿಂದ ಬಂದು ಬ್ಯಾಂಕಿನ ವ್ಯವಹಾರ ಮಾಡುವುದಕ್ಕೆ ತುಂಬಾ ತೊಂದರೆ ಅನುಭವಿಸುವಂತಾಗಿದೆ.

ಆರೋಪ : ಹೊಸ ಖಾತೆ ತೆರೆಯಲು ಇಲ್ಲ ಸಲ್ಲದ ದಾಖಲೆಗಳನ್ನು ಕೇಳುತ್ತಾ ವಿನಾಕಾರಣ ಸಲ್ಲದ ನೆಪ ಹೇಳಿ ಅಲೆದಾಡಿಸುವರು,ಒಂದು ಖಾತೆ ಪ್ರಾರಂಭಿಸಲು ಕಂಪ್ಯೂಟರ್ ಸೆಂಟರ್ ಗೆ ಕಳುಹಿಸಿ ಅಲ್ಲಿ ಕೊಡುವ ನಂಬರ್ ನೀಡಿದರೆ ಮಾತ್ರವೆ ಇಲ್ಲಿ ಖಾತೆ ತೆರೆಯುವರು.ಬೇರೆ ಬ್ಯಾಂಕಿನ ಚೆಕ್ಕನ್ನು ಇಲ್ಲಿ ನಗದಿಕರಿಸಿಕೊಳ್ಳಲು ಕನಿಷ್ಟವೆಂದರೂ ಒಂದು ತಿಂಗಳು ಹಿಡಿಯುತ್ತದೆ. ಬ್ಯಾಂಕಿನ ಸಿಬ್ಬಂದಿ ಗ್ರಾಹಕರಿಗೆ ನಗುಮುಖದ ಸೇವೆ ಕೊಡದೆ ನಿಕೃಷ್ಟವಾಗಿ ಮಾತನಾಡುತ್ತಾರೆ.ಯಾವುದೇ ಮಾಹಿತಿ ಒದಗಿಸದೆ ನಿರ್ಲಕ್ಷ್ಯ ಮಾಡುತ್ತಾರೆ.ಪ್ರತಿನಿತ್ಯವೂ ಇದೇ ಸಮಸ್ಯೆಯಿಂದ ಕೂಡಿದ್ದು ಇವರ ಧೋರಣೆ ಬದಲಾಗಬೇಕೆಂದು ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ಎ ಎಸೈ ಶಿವಪ್ಪ ಸುಮಾರು ಒಂದು ಗಂಟೆ ಕಾಲ ಗ್ರಾಹಕರ ಸಮಸ್ಯೆ ಆಲಿಸಿ ಸಮಾಧಾನ ಪಡಿಸಿದರು. ವ್ಯವಸ್ಥಾಪಕರು ತನ್ನದು ತಿಳಿಯದೆ ತಪ್ಪಾಗಿದೆ ಎಂದು ಬಹಿರಂಗವಾಗಿ ಕ್ಷಮೆ ಯಾಚಿಸಿದಲ್ಲದೆ ತಮ್ಮಿಂದ ಹಾಗೂ ಸಿಬ್ಬಂದಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಕೊಂಡು ಇನ್ನುಮುಂದೆ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದಾಗಿ ತಿಳಿಸಿ ಪ್ರಕರಣಕ್ಕೆ ಇತಿಶ್ರೀ ಹಾಡಿದರು.
        ಗ್ರಾಪಂ ಸದಸ್ಯ ರಾಘವೇಂದ್ರ,ಕಿಯೋನಿಕ್ಸ್ ಪ್ರಭು,ಗಂಗಾಧರಯ್ಯ,ನಿವೃತ್ತ ಮುಖ್ಯೋಪಾಧ್ಯಾಯ ಲೋಕೇಶ್ವರಚಾರ್ ಮುಂತಾದವರಿದ್ದರು.

------------------------------------------------------------
ಬ್ಯಾಂಕಿನಿಂದ ಗ್ರಾಹಕರಿಗೆ ಉತ್ತಮ ಸೇವೆ ದೊರಕುತ್ತಿಲ್ಲ, ಸಿಬ್ಬಂದಿ ಹಾಗೂ ವ್ಯವಸ್ಥಾಪಕರು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲ.ಹಾಗಿದ್ದೂ ಕೂಡ ಅನಿವಾರ್ಯವಾಗಿ ವ್ಯವಹಾರ ಮಾಡುವಂತಾಗಿದೆ: ಎಲ್.ಆರ್.ಬಾಲಾಜಿ,ಎಪಿಎಂಸಿ ವರ್ತಕರು

--------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...