ವಿಷಯಕ್ಕೆ ಹೋಗಿ

ಎಸ್ ಬಿ ಐ ಬ್ಯಾಂಕಲ್ಲಿ ಗ್ರಾಹಕರಿಗೆ ಕಿರಿಕಿರಿ

ರೊಚ್ಚಿಗೆದ್ದ ಗ್ರಾಹಕರು: ಕ್ಷಮೆ ಯಾಚಿಸಿದ ವ್ಯವಸ್ಥಾಪಕ
--------------------------
ಹುಳಿಯಾರು:ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ವ್ಯವಸ್ಥಾಪಕರು ಹಾಗೂ ಕೆಲ ಸಿಬ್ಬಂದಿಯವ ಗ್ರಾಹಕಸ್ನೇಹಿಯಾಗಿ ವರ್ತಿಸದೆ ಗ್ರಾಹಕರಿಗೆ ಕಿರಿಕಿರಿಯುಂಟುಮಾಡುತ್ತಾರೆಂದು ರೊಚ್ಚಿಗೆದ್ದ ಗ್ರಾಹಕರು ಮ್ಯಾನೇಜರ್ ಅವರನ್ನು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ಬುಧವಾರದಂದು ಜರುಗಿತು.

           ಇಲ್ಲಿನ ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳದೆ ಪ್ರತಿದಿನ ದೌರ್ಜನ್ಯದಿಂದ ನಡೆದುಕೊಳ್ಳುತ್ತಾರಲ್ಲದೆ ಗ್ರಾಹಕರಿಗೆ ಕನಿಷ್ಟ ಮರ್ಯಾದೆಯನ್ನು ಕೊಡದೆ ಕಿರಿಕಿರಿ ಉಂಟು ಮಾಡುತ್ತಿದ್ದು ಈ ಧೋರಣೆ ಸರಿಪಡಿಸಿಕೊಳ್ಳಬೇಕೆಂದು ಗ್ರಾಮಪಂಚಾಯ್ತಿ ಸದಸ್ಯ ಎಲ್.ಆರ್.ಚಂದ್ರಶೇಖರ್ ಹಾಗೂ ಸಾರ್ವಜನಿಕರು ಬ್ಯಾಂಕಿನ ವ್ಯವಸ್ಥಾಪಕರ ವಿರುದ್ದ ಹರಿಹಾಯ್ದರು.

ಸಮಸ್ಯೆ ಏನು: ಹಣ ಪಾವತಿ ಮಾಡಲು ಹೋದರೆ ಚಲನ್ ಕೊಡದೆ ಗ್ರೀನ್ ರೆಮಿಟ್ ಕಾರ್ಡ್ ಮೂಲಕವೇ ಪಾವತಿಸಿ ಎನ್ನುತ್ತಾರೆ ಮತ್ತು ಹಣ ಬಿಡಿಸುವುದಕ್ಕೆ ಹೋದರೆ ಚೆಕ್ ಲೀಫ್ ಕೊಡದೆ ಎಟಿಎಂ ಮೂಲಕ ಡ್ರಾ ಮಾಡಿ ಎಂದು ವಾಪಸ್ಸು ಕಳುಹಿಸುತ್ತಾರೆ.ಚಲನ್ ನೀಡದೆ ಕಾರ್ಡ್ ಮೂಲಕವೇ ಪಾವತಿಸಿ ಎಂದು ಪಟ್ಟು ಹಿಡಿಯುವುದರಿಂದ ಗ್ರಾಮೀಣ ಭಾಗದ ಅನಕ್ಷರಸ್ಥರು ಮೋಸ ಹೋಗುತ್ತಿರುವ ಘಟನೆಗಳು ಕೂಡ ಹೆಚ್ಚಾಗುತ್ತಿದೆ.ಕಾರ್ಡ್ ಮೂಲಕ ಡ್ರಾ ಮಾಡಲು ತಿಳಿಯದೆ ಅಕ್ಕಪಕ್ಕದವರ ಸಹಾಯ ತೆಗೆದುಕೊಳ್ಳುವ ಮುಗ್ಧರು ಪಿನ್ ನಂಬರ್ ಹೇಳುತ್ತಲೆ ಅವರ ಖಾತೆಯಲ್ಲಿ ಅವರಿಗೆ ತಿಳಿಯದಂತೆ ಹೆಚ್ಚು ಹಣ ಲಪಾಟಾಯಿಸಿದ ಪ್ರಕರಣಗಳು ಕೂಡ ಜರುಗಿದೆ.
ಕನಿಷ್ಟ ಹಣ ಬಿಡಿಸಿಕೊಳ್ಳಲು ಇಡಿ ದಿನವಾಗುತ್ತೆ.ದೂರದ ಊರಿನಿಂದ ಬಂದು ಬ್ಯಾಂಕಿನ ವ್ಯವಹಾರ ಮಾಡುವುದಕ್ಕೆ ತುಂಬಾ ತೊಂದರೆ ಅನುಭವಿಸುವಂತಾಗಿದೆ.

ಆರೋಪ : ಹೊಸ ಖಾತೆ ತೆರೆಯಲು ಇಲ್ಲ ಸಲ್ಲದ ದಾಖಲೆಗಳನ್ನು ಕೇಳುತ್ತಾ ವಿನಾಕಾರಣ ಸಲ್ಲದ ನೆಪ ಹೇಳಿ ಅಲೆದಾಡಿಸುವರು,ಒಂದು ಖಾತೆ ಪ್ರಾರಂಭಿಸಲು ಕಂಪ್ಯೂಟರ್ ಸೆಂಟರ್ ಗೆ ಕಳುಹಿಸಿ ಅಲ್ಲಿ ಕೊಡುವ ನಂಬರ್ ನೀಡಿದರೆ ಮಾತ್ರವೆ ಇಲ್ಲಿ ಖಾತೆ ತೆರೆಯುವರು.ಬೇರೆ ಬ್ಯಾಂಕಿನ ಚೆಕ್ಕನ್ನು ಇಲ್ಲಿ ನಗದಿಕರಿಸಿಕೊಳ್ಳಲು ಕನಿಷ್ಟವೆಂದರೂ ಒಂದು ತಿಂಗಳು ಹಿಡಿಯುತ್ತದೆ. ಬ್ಯಾಂಕಿನ ಸಿಬ್ಬಂದಿ ಗ್ರಾಹಕರಿಗೆ ನಗುಮುಖದ ಸೇವೆ ಕೊಡದೆ ನಿಕೃಷ್ಟವಾಗಿ ಮಾತನಾಡುತ್ತಾರೆ.ಯಾವುದೇ ಮಾಹಿತಿ ಒದಗಿಸದೆ ನಿರ್ಲಕ್ಷ್ಯ ಮಾಡುತ್ತಾರೆ.ಪ್ರತಿನಿತ್ಯವೂ ಇದೇ ಸಮಸ್ಯೆಯಿಂದ ಕೂಡಿದ್ದು ಇವರ ಧೋರಣೆ ಬದಲಾಗಬೇಕೆಂದು ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ಎ ಎಸೈ ಶಿವಪ್ಪ ಸುಮಾರು ಒಂದು ಗಂಟೆ ಕಾಲ ಗ್ರಾಹಕರ ಸಮಸ್ಯೆ ಆಲಿಸಿ ಸಮಾಧಾನ ಪಡಿಸಿದರು. ವ್ಯವಸ್ಥಾಪಕರು ತನ್ನದು ತಿಳಿಯದೆ ತಪ್ಪಾಗಿದೆ ಎಂದು ಬಹಿರಂಗವಾಗಿ ಕ್ಷಮೆ ಯಾಚಿಸಿದಲ್ಲದೆ ತಮ್ಮಿಂದ ಹಾಗೂ ಸಿಬ್ಬಂದಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಕೊಂಡು ಇನ್ನುಮುಂದೆ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದಾಗಿ ತಿಳಿಸಿ ಪ್ರಕರಣಕ್ಕೆ ಇತಿಶ್ರೀ ಹಾಡಿದರು.
        ಗ್ರಾಪಂ ಸದಸ್ಯ ರಾಘವೇಂದ್ರ,ಕಿಯೋನಿಕ್ಸ್ ಪ್ರಭು,ಗಂಗಾಧರಯ್ಯ,ನಿವೃತ್ತ ಮುಖ್ಯೋಪಾಧ್ಯಾಯ ಲೋಕೇಶ್ವರಚಾರ್ ಮುಂತಾದವರಿದ್ದರು.

------------------------------------------------------------
ಬ್ಯಾಂಕಿನಿಂದ ಗ್ರಾಹಕರಿಗೆ ಉತ್ತಮ ಸೇವೆ ದೊರಕುತ್ತಿಲ್ಲ, ಸಿಬ್ಬಂದಿ ಹಾಗೂ ವ್ಯವಸ್ಥಾಪಕರು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲ.ಹಾಗಿದ್ದೂ ಕೂಡ ಅನಿವಾರ್ಯವಾಗಿ ವ್ಯವಹಾರ ಮಾಡುವಂತಾಗಿದೆ: ಎಲ್.ಆರ್.ಬಾಲಾಜಿ,ಎಪಿಎಂಸಿ ವರ್ತಕರು

--------------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.