ವಿಷಯಕ್ಕೆ ಹೋಗಿ

ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಿದ ನಂತರ ಸುಂಕ ವಸೂಲಿ

ಹುಳಿಯಾರು: ಇಲ್ಲಿನ ಬಸ್ ನಿಲ್ದಾಣದಲ್ಲಿನ ಬಸ್ ಶೆಲ್ಟರ್‌ನ ಸ್ಥಳದಲ್ಲಿ ಪ್ರಯಾಣಿಕರಿಗೆ ಕೂರಲು ಆಸನಗಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ನಂತರ ಫುಟ್‌ಪಾತ್ ಅಂಗಡಿಗಳ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸಲಾಗುವುದು ಎಂದು ಗ್ರಾಪಂ ಉಪಾಧ್ಯಕ್ಷ ಗಣೇಶ್ ತಿಳಿಸಿದರು.


            ಹುಳಿಯಾರಿನ ಗ್ರಾಪಂ ಆವರಣದಲ್ಲಿ ನಡೆದ ಬಸ್ ಸುಂಕ ಮತ್ತು ಸಂತೆ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸುವ ವೇಳೆ ಆಗಮಿಸಿದ ಫುಟ್‌ಪಾತ್ ಅಂಗಡಿಯವರೊಂದಿಗೆ ಅವರು ಮಾತನಾಡಿದರು.
ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಕಲ್ಪಿಸಿದ ನಂತರ ಬಸ್ ನಿಲ್ದಾಣದಲ್ಲಿನ ುಟ್‌ಪಾತ್ ಅಂಗಡಿಯವರನ್ನು ಮತ್ತು ಡಾ:ರಾಜಕುಮಾರ್ ರಸ್ತೆಯಲ್ಲಿನ ಸಣ್ಣಪುಟ್ಟ ಗೂಡಂಗಡಿಯವರನ್ನು ಪ್ರತ್ಯೇಕ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲನಿಬಂಧನೆಗಳಿಗೆ ಒಳಪಡಿಸಿ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸಲಾಗುವುದು ಎಂದರು.

               ಬಸ್‌ನಿಲ್ದಾಣದ ಫುಟ್‌ಪಾತ್ ಅಂಗಡಿಯ ಹೂವಿನರಘು ಮಾತನಾಡಿ ಬಸ್‌ಶೆಲ್ಟರ್ ಸ್ಥಳದಲ್ಲಿನ ಸಣ್ಣಪುಟ್ಟ ಅಂಗಡಿಗಳನ್ನು ನಾವೇ ಸ್ವಯಂ ಪ್ರೇರಣೆಯಿಂದ ತೆರವು ಮಾಡುತ್ತೇವೆ. ಅಲ್ಲಿ ಪ್ರಾಯಾಣಿಕರಿಗೆ ಕೂರಲು ಆಸನದ ವ್ಯವಸ್ತೆ ಕಲ್ಪಿಸಿ. ನಂತರ ಅಲ್ಲಿಯೇ ಇರುವ ಅಲ್ಪ ಸ್ವಲ್ಪ ಜಾಗದಲ್ಲಿ ಅನೇಕ ವರ್ಷಗಳಿಂದ ಅಂಗಡಿಯಿಟ್ಟು ಜೀವನ ನಡೆಸಿಕೊಂಡು ಬರುತ್ತಿರುವಂತ ಬಡವರಿಗೆ ಸ್ಥಳವಾಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಜೆಡಿಎಸ್ ಮುಖಂಡ ಪ್ರಸನ್ನ ಕುಮಾರ್ ಧ್ವನಿಗೂಡಿಸಿ ಮಾತನಾಡಿ ಈ ಸಂಬಂಧ ಕಳೆದ ೨ ವರ್ಷಗಳ ಹಿಂದೆ ಶಾಸಕ ಸಿ.ಬಿ.ಸುರೇಶ್‌ಬಾಬು ರವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಬಸ್ ನಿಲ್ದಾಣದಲ್ಲಿನ ಸಣ್ಣಪುಟ್ಟ ಅಂಗಡಿಯವರಿಗೆ ಮತ್ತು ಪ್ರಯಾಣಿಕರಿಗೆ ಕೂರಲು ಅನುಕೂಲವಾಗುವ ರೀತಿಯಲ್ಲಿ ಬಸ್ ಶೆಲ್ಟರ್ ನಿರ್ಮಾಣದ ನಕ್ಷೆ ಸಿದ್ದಪಡಿಸುವ ಬಗ್ಗೆ ಎಂಜಿನಿಯರ್ ಶಿವನಂದ್‌ಗೆ ಸೂಚಿಸಿದ್ದರು. ಎಂಜಿನಿಯರ್ ಸಹಾ ಇಬ್ಬರಿಗೂ ಅನುಕೂಲ ವಾಗುವ ನಿಟ್ಟಿನಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದಿದ್ದರು ಎಂದು ನೆನಪು ಮಾಡಿ ಕೊಂಡರು.

                ಪಿಡಿಓ ಸಿದ್ದರಾಮಯ್ಯ ಮಾತನಾಡಿ ಈ ಸಂಬಂದ ಶಾಸಕರು ಹಾಗೂ ಇಂಜಿನಿಯರವರನ್ನು ಸಂಪರ್ಕಿಸಿ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಸಣ್ಣಪುಟ್ಟ ಅಂಗಡಿಯವರಿಗೆ ತೊಂದರೆಯಾಗದ ರೀತಿಯಲ್ಲಿ ಪಾರ್ಯಾಯ ವ್ಯವಸ್ಥೆ ಕಲ್ಪಿಸಿ ನಂತರ ಪುಟ್ಟಬಾತ್ ವಸೂಲಾತಿ ಸುಂಕದ ಹರಾಜು ನಡೆಸಲಾಗುವುದು ಎಂದರು.

 ಹರಾಜು ಪ್ರಕ್ರಿಯೆ: ಸುಂಕ ವಸೂಲಾತಿಯ ಹರಾಜು ಮುಂದುವರೆದು ಬಸ್ ಗಳ ಸುಂಕ ವಸೂಲಾತಿಯ ಹರಾಜು ೨ ಲಕ್ಷಕ್ಕೆ, ಮತ್ತು ಸಂತ್ತೆ ಸುಂಕ ವಸೂಲಾತಿಯ ಹರಾಜು ೨.೫೦ ಲಕ್ಷಕ್ಕೆ ನಡೆಯಿತು.


ಈ ಹರಾಜು ಪ್ರಕ್ರಿಯೆಯ ಅಧ್ಯತೆಯನ್ನ ಗ್ರಾಪಂ ಅಧ್ಯಕ್ಷೆ ಗೀತಪ್ರದೀಪ್ ವಯಿಸಿದ್ದರು, ತಾಪಂ ಸದಸ್ಯ ಹೆಚ್.ಎನ್.ಕುಮಾರ್, ಗ್ರಾಪಂ ಸದಸ್ಯರಾದ ರಾಘವೇಂದ್ರ, ಸೈಯದ್ ಜಬೀಹುಲ್ಲಾ, ವೆಂಕಟೇಶ್, ಸಿದ್ದಗಂಗಮ್ಮ, ಶಶಿಕಲಾ, ಗೀತಅಶೋಕ್‌ಬಾಬು, ಬಡ್ಡಿಪುಟ್ಟಣ್ಣ, ಪುಟ್ಟಮ್ಮ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.