ವಿಷಯಕ್ಕೆ ಹೋಗಿ

ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಕಲ್ಪಿಸಿದ ನಂತರ ಸುಂಕ ವಸೂಲಿ

ಹುಳಿಯಾರು: ಇಲ್ಲಿನ ಬಸ್ ನಿಲ್ದಾಣದಲ್ಲಿನ ಬಸ್ ಶೆಲ್ಟರ್‌ನ ಸ್ಥಳದಲ್ಲಿ ಪ್ರಯಾಣಿಕರಿಗೆ ಕೂರಲು ಆಸನಗಳು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ನಂತರ ಫುಟ್‌ಪಾತ್ ಅಂಗಡಿಗಳ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸಲಾಗುವುದು ಎಂದು ಗ್ರಾಪಂ ಉಪಾಧ್ಯಕ್ಷ ಗಣೇಶ್ ತಿಳಿಸಿದರು.


            ಹುಳಿಯಾರಿನ ಗ್ರಾಪಂ ಆವರಣದಲ್ಲಿ ನಡೆದ ಬಸ್ ಸುಂಕ ಮತ್ತು ಸಂತೆ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸುವ ವೇಳೆ ಆಗಮಿಸಿದ ಫುಟ್‌ಪಾತ್ ಅಂಗಡಿಯವರೊಂದಿಗೆ ಅವರು ಮಾತನಾಡಿದರು.
ಪ್ರಯಾಣಿಕರಿಗೆ ಆಸನದ ವ್ಯವಸ್ಥೆ ಕಲ್ಪಿಸಿದ ನಂತರ ಬಸ್ ನಿಲ್ದಾಣದಲ್ಲಿನ ುಟ್‌ಪಾತ್ ಅಂಗಡಿಯವರನ್ನು ಮತ್ತು ಡಾ:ರಾಜಕುಮಾರ್ ರಸ್ತೆಯಲ್ಲಿನ ಸಣ್ಣಪುಟ್ಟ ಗೂಡಂಗಡಿಯವರನ್ನು ಪ್ರತ್ಯೇಕ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲನಿಬಂಧನೆಗಳಿಗೆ ಒಳಪಡಿಸಿ ಸುಂಕ ವಸೂಲಾತಿ ಗುತ್ತಿಗೆ ಹರಾಜು ನಡೆಸಲಾಗುವುದು ಎಂದರು.

               ಬಸ್‌ನಿಲ್ದಾಣದ ಫುಟ್‌ಪಾತ್ ಅಂಗಡಿಯ ಹೂವಿನರಘು ಮಾತನಾಡಿ ಬಸ್‌ಶೆಲ್ಟರ್ ಸ್ಥಳದಲ್ಲಿನ ಸಣ್ಣಪುಟ್ಟ ಅಂಗಡಿಗಳನ್ನು ನಾವೇ ಸ್ವಯಂ ಪ್ರೇರಣೆಯಿಂದ ತೆರವು ಮಾಡುತ್ತೇವೆ. ಅಲ್ಲಿ ಪ್ರಾಯಾಣಿಕರಿಗೆ ಕೂರಲು ಆಸನದ ವ್ಯವಸ್ತೆ ಕಲ್ಪಿಸಿ. ನಂತರ ಅಲ್ಲಿಯೇ ಇರುವ ಅಲ್ಪ ಸ್ವಲ್ಪ ಜಾಗದಲ್ಲಿ ಅನೇಕ ವರ್ಷಗಳಿಂದ ಅಂಗಡಿಯಿಟ್ಟು ಜೀವನ ನಡೆಸಿಕೊಂಡು ಬರುತ್ತಿರುವಂತ ಬಡವರಿಗೆ ಸ್ಥಳವಾಕಾಶ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಜೆಡಿಎಸ್ ಮುಖಂಡ ಪ್ರಸನ್ನ ಕುಮಾರ್ ಧ್ವನಿಗೂಡಿಸಿ ಮಾತನಾಡಿ ಈ ಸಂಬಂಧ ಕಳೆದ ೨ ವರ್ಷಗಳ ಹಿಂದೆ ಶಾಸಕ ಸಿ.ಬಿ.ಸುರೇಶ್‌ಬಾಬು ರವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಬಸ್ ನಿಲ್ದಾಣದಲ್ಲಿನ ಸಣ್ಣಪುಟ್ಟ ಅಂಗಡಿಯವರಿಗೆ ಮತ್ತು ಪ್ರಯಾಣಿಕರಿಗೆ ಕೂರಲು ಅನುಕೂಲವಾಗುವ ರೀತಿಯಲ್ಲಿ ಬಸ್ ಶೆಲ್ಟರ್ ನಿರ್ಮಾಣದ ನಕ್ಷೆ ಸಿದ್ದಪಡಿಸುವ ಬಗ್ಗೆ ಎಂಜಿನಿಯರ್ ಶಿವನಂದ್‌ಗೆ ಸೂಚಿಸಿದ್ದರು. ಎಂಜಿನಿಯರ್ ಸಹಾ ಇಬ್ಬರಿಗೂ ಅನುಕೂಲ ವಾಗುವ ನಿಟ್ಟಿನಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದಿದ್ದರು ಎಂದು ನೆನಪು ಮಾಡಿ ಕೊಂಡರು.

                ಪಿಡಿಓ ಸಿದ್ದರಾಮಯ್ಯ ಮಾತನಾಡಿ ಈ ಸಂಬಂದ ಶಾಸಕರು ಹಾಗೂ ಇಂಜಿನಿಯರವರನ್ನು ಸಂಪರ್ಕಿಸಿ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಸಣ್ಣಪುಟ್ಟ ಅಂಗಡಿಯವರಿಗೆ ತೊಂದರೆಯಾಗದ ರೀತಿಯಲ್ಲಿ ಪಾರ್ಯಾಯ ವ್ಯವಸ್ಥೆ ಕಲ್ಪಿಸಿ ನಂತರ ಪುಟ್ಟಬಾತ್ ವಸೂಲಾತಿ ಸುಂಕದ ಹರಾಜು ನಡೆಸಲಾಗುವುದು ಎಂದರು.

 ಹರಾಜು ಪ್ರಕ್ರಿಯೆ: ಸುಂಕ ವಸೂಲಾತಿಯ ಹರಾಜು ಮುಂದುವರೆದು ಬಸ್ ಗಳ ಸುಂಕ ವಸೂಲಾತಿಯ ಹರಾಜು ೨ ಲಕ್ಷಕ್ಕೆ, ಮತ್ತು ಸಂತ್ತೆ ಸುಂಕ ವಸೂಲಾತಿಯ ಹರಾಜು ೨.೫೦ ಲಕ್ಷಕ್ಕೆ ನಡೆಯಿತು.


ಈ ಹರಾಜು ಪ್ರಕ್ರಿಯೆಯ ಅಧ್ಯತೆಯನ್ನ ಗ್ರಾಪಂ ಅಧ್ಯಕ್ಷೆ ಗೀತಪ್ರದೀಪ್ ವಯಿಸಿದ್ದರು, ತಾಪಂ ಸದಸ್ಯ ಹೆಚ್.ಎನ್.ಕುಮಾರ್, ಗ್ರಾಪಂ ಸದಸ್ಯರಾದ ರಾಘವೇಂದ್ರ, ಸೈಯದ್ ಜಬೀಹುಲ್ಲಾ, ವೆಂಕಟೇಶ್, ಸಿದ್ದಗಂಗಮ್ಮ, ಶಶಿಕಲಾ, ಗೀತಅಶೋಕ್‌ಬಾಬು, ಬಡ್ಡಿಪುಟ್ಟಣ್ಣ, ಪುಟ್ಟಮ್ಮ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...