ವಿಷಯಕ್ಕೆ ಹೋಗಿ

ವಿದ್ಯುತ್ ಮಿತಬಳಕೆ ಸಾಮಾಜಿಕ ಜವಬ್ದಾರಿ:ಉಮೇಶ್ ನಾಯ್ಕ್

ಹುಳಿಯಾರು:ವಿದ್ಯುತ್ ಇಂದು ಗಾಳಿ,ನೀರು ,ಬೆಳಕಿನಷ್ಟೆ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದ್ದು ಕೈಗಾರೀಕರಣ,ಆಧುನಿಕ ಹಾಗೂ ತಾಂತ್ರಿಕ ಜಗತ್ತಿನಲ್ಲಿ ಯಾಂತ್ರೀಕರಣದಿಂದಾಗಿ ಪ್ರತಿಯೊಂದು ಚಟುವಟಿಕೆಗೂ ವಿದ್ಯುತ್ ಮೇಲೆ ಅವಲಂಬಿತರಾಗಿದ್ದೇವೆ.ಆದರೆ ಇಂದು ಉತ್ಪಾದನೆಗಿಂಲೂ ಬಳಕೆ ಹೆಚ್ಚಾಗಿದ್ದೂ ವಿದ್ಯುತ್ ಮಿತವಾಗಿ ಬಳಕೆ ಮಾಡುವುದು ಸಾಮಾಜಿಕ ಜವಬ್ದಾರಿಯಾಗಿದೆ ಎಂದು ಬೆಸ್ಕಾಂ ವಿಭಾಗೀಯ ಅಧಿಕಾರಿ ಉಮೇಶ್ ನಾಯ್ಕ್ ತಿಳಿಸಿದರು.


ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಸ್ಕಾಂ ಹಾಗೂ ತುಮಕೂರಿನ ಮಹಾತ್ಮ ಗಾಂಧಿ ರೂರಲ್ ಡೆವಲಪ್ ಮೆಂಟ್ ಅಂಡ್ ಯೂತ್ ವೆಲ್ ಫೇರ್ ಸೆಂಟರ್ ಸಹಯೋಗದಲ್ಲಿ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ ದಿನದಿಂದ ದಿನಕ್ಕೆ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗುತ್ತಿದ್ದು ಉತ್ಪಾದನೆಗೂ ಬಳಕೆಗೂ ಹೆಚ್ಚಿನ ಅಂತರವಿದ್ದೂ ಉಳಿತಾಯ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಇದನ್ನೂ ಸರಿದೂಗಿಸಲು ನಾವುಗಳೂ ಅವಶ್ಯಕತೆ ಹಾಗೂ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಕೆ ಮಾಡುವುದರ ಮುಖಾಂತರ ಉಳಿತಾಯ ಮಾಡಬೇಕಿದ್ದು ಅಪಾಯಕಾರಿಯಾದ ವಿದ್ಯುತ್ ಅನ್ನು ಸುರಕ್ಷತೆಯಿಂದ ಬಳಕೆ ಮಾಡುವುದರ ಬಗ್ಗೆ ಎಲ್ಲರಿಗೂ ಅರಿವಿರಬೇಕೆಂದರು.

ತಾಪಂ ಸದಸ್ಯ ಹೆಚ್.ಎನ್.ಕುಮಾರ್ ಮಾತನಾಡಿ ಕೈಗಾರಿಕೆಯಿಂದ ಹಿಡಿದು ಅಡುಗೆಮನೆ, ಕೃಷಿಚಟವಟಿಕೆಯವರೆಗೆ ನಿತ್ಯ ಜೀವನದಲ್ಲಿ ನಾವುಗಳು ವಿದ್ಯುತ್ ಮೇಲೆ ಸಾಕಷ್ಟು ಅವಲಂಬಿತರಾಗಿದ್ದು ವಿದ್ಯುತ್ ಉಳಿತಾಯ ಮಾಡಲು ಹಾಗೂ ಸುರಕ್ಷಿತವಾಗಿ ಬಳಸಲು ನಾವು ವಹಿಸಬೇಕಾದ ಕ್ರಮಗಳ ಬಗ್ಗೆ ಇಲಾಖೆಯೂ ಕಾರ್ಯಗಾರದ ಮೂಲಕ ಅರಿವು ಮೂಡಿಸುತ್ತಿರುವ ಕ್ರಮ ಶ್ಲಾಘನೀಯ ಎಂದರು.

ವಾಸವಿ ಆಂಗ್ಲ ಪ್ರೌಢಶಾಲೆಯ ಪ್ರಕಾಶ್ ಮಾತನಾಡಿವಿದ್ಯುತ್ ಸುರಕ್ಷಿತವಾಗಿ ಬಳಕೆಮಾಡಿಕೊಳ್ಳುವುದರ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಅದರಲ್ಲೂ ರೈತಾಪಿ ವರ್ಗದವರಿಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಹೆಚ್ಚಿದೆ ಎಂದರು.
ಹುಳಿಯಾರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ವಿದ್ಯುತ್ ಸುರಕ್ಷತೆ ಮತ್ತು ಉಳಿತಾಯದ ಬಗ್ಗೆ ಬೆಸ್ಕಾಂ ಹಾಗೂ ಮಹಾತ್ಮ ಗಾಂಧಿ ರೂರಲ್ ಡೆವಲಪ್ ಮೆಂಟ್ ಅಂಡ್ ಯೂತ್ ವೆಲ್ ಫೇರ್ ಸೆಂಟರ್ ಸಹಯೋಗದಲ್ಲಿ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್ ಮಾತನಾಡಿದರು.ಬೆಸ್ಕಾಂ ವಿಭಾಗೀಯ ಅಧಿಕಾರಿ ಉಮೇಶ್ ನಾಯ್ಕ್,ತಾಪಂ ಸದಸ್ಯ ಹೆಚ್.ಎನ್.ಕುಮಾರ್ ,ಚಂದ್ರಕಲಾ ,ಚಂದ್ರಕಾಂತ್,ಶಕುಂತಲಾ,ನಾಗವೇಣಿ ಮತ್ತಿತರರಿದ್ದರು.

ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿ ಮನೆಯಲ್ಲೂ ಟಿವಿ,ಫ್ಯಾನ್,ರೆಫ್ರಿಗಿರೇಟರ್,ಮಿಕ್ಸಿ ಇಂದು ಅತ್ಯಗತ್ಯವಾಗಿದ್ದು ಬೇಸಿಗೆಯಲ್ಲಿ ಹೆಚ್ಚಿನ ಬಳಕೆಯಾಗುತ್ತದೆ.ಈ ಬಗ್ಗೆ ಮಹಿಳೆಯರಿಗೆ ಹೆಚ್ಚಿನ ಒತ್ತುಕೊಟ್ಟು ಕಾರ್ಯಾಗಾರ ಏರ್ಪಡಿಸಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು


ಸಂಪನ್ಮೂಲ ವ್ಯಕ್ತಿ ಈರಣ್ಣ ಪ್ರಾಸ್ತಾವಿಕ ನುಡಿಗಳಾನಾಡಿದರು.ಬೆಸ್ಕಾಂ ಅಧಿಕಾರಿ ಮೂರ್ತಿ,ಶಕುಂತಲಾ ,ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಚಂದ್ರಕಲಾ,ಆರೋಗ್ಯ ಇಲಾಖೆಯ ಚಂದ್ರಕಾಂತ್,ಆಶಾ ಕಾರ್ಯಕರ್ತೆ ನಾಗವೇಣಿ ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು,ಐ.ಟಿ.ಐ ವಿದ್ಯಾರ್ಥಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...