ವಿಷಯಕ್ಕೆ ಹೋಗಿ

ದೊಡ್ಡಬಿದರೆ ಕರಿಯಮ್ಮನಿಗೆ ಶ್ರದ್ಧಾಭಕ್ತಿಯಿಂದ ನಡೆದ ಕೆಂಡದ ಸೇವೆ

ಹುಳಿಯಾರು : ಸಮೀಪದ ದೊಡ್ಡಬಿದರೆ ಗ್ರಾಮದ ಶ್ರೀಕರಿಯಮ್ಮದೇವಿ ಹಾಗೂ ಶ್ರೀಬೇವಿನಹಳ್ಳಿ ಅಮ್ಮನವರ ಆರತಿ ಬಾನ ಹಾಗೂ ಕೆಂಡದ ಸೇವೆ ಶನಿವಾರದಂದು ಶ್ರದ್ಧಾಭಕ್ತಿಯಿಂದ ನಡೆಯಿತು. ಮದುವಣಗಿತ್ತಿ, ಮಡಲಕ್ಕಿ ಸೇವೆಯ ಮೂಲಕ ಗುರುವಾರದಂದು ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ೨೯ ರ ಮಂಗಳವಾರದವರೆಗೆ ನಡೆಯಲಿದೆ.

       ಚಿಕ್ಕಬಿದರೆ ಕರಿಯಮ್ಮ, ಕೋಡಿಹಳ್ಳಿ ಶ್ರೀಕೊಲ್ಲಾಪುರದಮ್ಮ , ಹುಳಿಯಾರಿನ ಸಣ್ಣದುರ್ಗಮ್ಮ ಹಾಗೂ ದೂತರಾಯನೊಂದಿಗೆ ಅಲಂಕೃತ ಕರಿಯಮ್ಮನನ್ನು ಕಳಸ ಹೊತ್ತ ಹುಡುಗಿಯೊಂದಿಗೆ ಉರೊಳಗಿನ ದೇವಸ್ಥಾನದಿಂದ ನಡೆಮುಡಿ ಹಾಗೂ ಮೆರವಣಿಗೆಯಲ್ಲಿ ಸುಮಾರು ಎರಡು ಕಿಮೀ ದೂರದ ಬಾರೆಯಲ್ಲಿರುವ ಉದ್ಭವ ಬೇವಿನಹಳ್ಳಿ ಅಮ್ಮನವರ ಮೂಲಸ್ಥಾನಕ್ಕೆ ಕರೆತರಲಾಯಿತು.

         ಅಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ವಾದ್ಯಮೇಳದ ಹಿಮ್ಮೇಳದೊಂದಿಗೆ ದೇವಾಲಯದ ಮುಂದೆ ನಿಗಿನಿಗಿಸುವ ಕೆಂಡದ ಮೇಲೆ ಕಳಸ ಹೊತ್ತ ಬಾಲಕಿ ಹಾದ ನಂತರ ಕರಿಯಮ್ಮನೊಟ್ಟಿಗೆ ಎಲ್ಲಾ ದೇವರುಗಳನ್ನು ಕೆಂಡ ಹಾಯಿಸಲಾಯಿತು.ನಂತರ ಮಹಿಳೆಯರು ತಾವು ಮಡಿಯಲ್ಲಿ ಮಾಡಿ ತಂದಿದ್ದ ತಂಬಿಟ್ಟಿನ ಆರತಿ ಬೆಳಗುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

                ಕರಿಯಮ್ಮ ದೇವಿ ದೇವಾಲಯ ಸಮಿತಿಯ ಅಧ್ಯಕ್ಷ ಕರಿಯಪ್ಪ,ಸತೀಶ್,ಪಾತಲಿಂಗೇಶ್ವರ ದೇವಾಲಯ ಸಮಿತಿಯ ಯಜಮಾನರುಗಳು, ಗ್ರಾಪಂ ಸದಸ್ಯರುಗಳು, ದೊಡ್ಡಬಿದರೆ, ಕೋಡಿಹಳ್ಳಿ, ದಾಸಣ್ಣನ ಹಟ್ಟಿ ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು.

             ತುಮಕೂರು ಜಿಲ್ಲೆಯಲ್ಲಿ ಮೊನ್ನೆಯಷ್ಟೆ ನಡೆದ ಎತ್ತೇನಹಳ್ಳಿ ಅವಘಡದ ನಂತರ ಕೆಂಡ ಹಾಯುವ ಸಂಪ್ರದಾಯಕ್ಕೆ ತೀವ್ರ ಬಿಗಿಮಾಡಲಾಗಿದ್ದು ತಹಸೀಲ್ದಾರ್ ಅವರ ಒಪ್ಪಿಗೆ ಪತ್ರದ ನಂತರ ಪೋಲಿಸ್ ವಿಚಾರಣೆ ನಡೆದು ಎಲ್ಲಾ ಮುಂಜಾಗ್ರತೆ ಕ್ರಮ ಪರಿಶೀಲಿಸಿದ ಮೇಲಷ್ಟೆ ಈ ಬಾರಿ ಕೆಂಡ ಹಾಯಲು ಅವಕಾಶ ಮಾಡಿಕೊಡಲಾಗಿತ್ತು.ಪಿಎಸೈ ಪ್ರವೀಣ್ ಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಹಾಜರಿದ್ದು ಕೆಂಡದ ಸಮಯದಲ್ಲಿ ಭಾರಿ ನಿಗಾವಹಿಸಿದ್ದರು.
-----------------------------------------
ಕೆಂಡಾದ ಸೇವೆ ಸಾಂಪ್ರದಾಯಿಕ ಆಚರಣೆಯಾಗಿದ್ದು ಅನಾದಿ ಕಾಲದಿಂದಲೂ ಜಾತ್ರಾ ಮಹೋತ್ಸವದಲ್ಲಿ ನಡೆಸಿಕೊಂದು ಬರುತ್ತಿದ್ದೇವೆ.ಇದೇ ಪ್ರಥಮ ಬಾರಿಗೆ ಕೆಂಡ ಸೇವೆ ಸಲ್ಲಿಸಲು ತಾಲ್ಲೂಕ್ ಆಡಳಿತದಿಂದ ಒಪ್ಪಿಗೆ ಪತ್ರ ತರಲಾಯಿತು :ಕರಿಯಪ್ಪ ,ಕರಿಯಮ್ಮ ದೇವಿ ದೇವಾಲಯ ಸಮಿತಿಯ ಅಧ್ಯಕ್ಷ
-----------------------------
ಸರ್ಕಾರಿ ಆದೇಶದಂತೆ ಮುಂಜಾಗ್ರತೆಯಾಗಿ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾಗ್ಯೂ ಐದು ಸಾವಿರ ರೂಪಾಯಿ ಹಣ ಪಾವತಿಸಿ ರಸೀದಿ ನೀಡಿದರಷ್ಟೆ ಬರುವುದು ಎಂದು ಜಾತ್ರೆಗೆ ಬರಲು ನಿರಾಕರಿಸಿದರು.ಅಕಸ್ಮಾತ್ ಅಗ್ನಿಕೊಂಡ ಹಾಯುವಾಗ ಏನಾದರೂ ಹೆಚ್ಚುಕಮ್ಮಿಯಾಗಿ ಬಿದಿದ್ದರೆ ಯಾರು ಹೊಣೆ.ಸರ್ಕಾರ ಇದಕ್ಕೆ ಹಣ ಪಡೆಯುವುದನ್ನು ಬಿಟ್ಟು ಮುಂಜಾಗ್ರತೆಯಾಗಿ ವಾಹನ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಿ:ಲಿಂಗದೇವರು,ಗ್ರಾಮಸ್ಥ

---------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...