ವಿಷಯಕ್ಕೆ ಹೋಗಿ

ದೊಡ್ಡಬಿದರೆ ಕರಿಯಮ್ಮನಿಗೆ ಶ್ರದ್ಧಾಭಕ್ತಿಯಿಂದ ನಡೆದ ಕೆಂಡದ ಸೇವೆ

ಹುಳಿಯಾರು : ಸಮೀಪದ ದೊಡ್ಡಬಿದರೆ ಗ್ರಾಮದ ಶ್ರೀಕರಿಯಮ್ಮದೇವಿ ಹಾಗೂ ಶ್ರೀಬೇವಿನಹಳ್ಳಿ ಅಮ್ಮನವರ ಆರತಿ ಬಾನ ಹಾಗೂ ಕೆಂಡದ ಸೇವೆ ಶನಿವಾರದಂದು ಶ್ರದ್ಧಾಭಕ್ತಿಯಿಂದ ನಡೆಯಿತು. ಮದುವಣಗಿತ್ತಿ, ಮಡಲಕ್ಕಿ ಸೇವೆಯ ಮೂಲಕ ಗುರುವಾರದಂದು ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ೨೯ ರ ಮಂಗಳವಾರದವರೆಗೆ ನಡೆಯಲಿದೆ.

       ಚಿಕ್ಕಬಿದರೆ ಕರಿಯಮ್ಮ, ಕೋಡಿಹಳ್ಳಿ ಶ್ರೀಕೊಲ್ಲಾಪುರದಮ್ಮ , ಹುಳಿಯಾರಿನ ಸಣ್ಣದುರ್ಗಮ್ಮ ಹಾಗೂ ದೂತರಾಯನೊಂದಿಗೆ ಅಲಂಕೃತ ಕರಿಯಮ್ಮನನ್ನು ಕಳಸ ಹೊತ್ತ ಹುಡುಗಿಯೊಂದಿಗೆ ಉರೊಳಗಿನ ದೇವಸ್ಥಾನದಿಂದ ನಡೆಮುಡಿ ಹಾಗೂ ಮೆರವಣಿಗೆಯಲ್ಲಿ ಸುಮಾರು ಎರಡು ಕಿಮೀ ದೂರದ ಬಾರೆಯಲ್ಲಿರುವ ಉದ್ಭವ ಬೇವಿನಹಳ್ಳಿ ಅಮ್ಮನವರ ಮೂಲಸ್ಥಾನಕ್ಕೆ ಕರೆತರಲಾಯಿತು.

         ಅಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದ ನಂತರ ವಾದ್ಯಮೇಳದ ಹಿಮ್ಮೇಳದೊಂದಿಗೆ ದೇವಾಲಯದ ಮುಂದೆ ನಿಗಿನಿಗಿಸುವ ಕೆಂಡದ ಮೇಲೆ ಕಳಸ ಹೊತ್ತ ಬಾಲಕಿ ಹಾದ ನಂತರ ಕರಿಯಮ್ಮನೊಟ್ಟಿಗೆ ಎಲ್ಲಾ ದೇವರುಗಳನ್ನು ಕೆಂಡ ಹಾಯಿಸಲಾಯಿತು.ನಂತರ ಮಹಿಳೆಯರು ತಾವು ಮಡಿಯಲ್ಲಿ ಮಾಡಿ ತಂದಿದ್ದ ತಂಬಿಟ್ಟಿನ ಆರತಿ ಬೆಳಗುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

                ಕರಿಯಮ್ಮ ದೇವಿ ದೇವಾಲಯ ಸಮಿತಿಯ ಅಧ್ಯಕ್ಷ ಕರಿಯಪ್ಪ,ಸತೀಶ್,ಪಾತಲಿಂಗೇಶ್ವರ ದೇವಾಲಯ ಸಮಿತಿಯ ಯಜಮಾನರುಗಳು, ಗ್ರಾಪಂ ಸದಸ್ಯರುಗಳು, ದೊಡ್ಡಬಿದರೆ, ಕೋಡಿಹಳ್ಳಿ, ದಾಸಣ್ಣನ ಹಟ್ಟಿ ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು.

             ತುಮಕೂರು ಜಿಲ್ಲೆಯಲ್ಲಿ ಮೊನ್ನೆಯಷ್ಟೆ ನಡೆದ ಎತ್ತೇನಹಳ್ಳಿ ಅವಘಡದ ನಂತರ ಕೆಂಡ ಹಾಯುವ ಸಂಪ್ರದಾಯಕ್ಕೆ ತೀವ್ರ ಬಿಗಿಮಾಡಲಾಗಿದ್ದು ತಹಸೀಲ್ದಾರ್ ಅವರ ಒಪ್ಪಿಗೆ ಪತ್ರದ ನಂತರ ಪೋಲಿಸ್ ವಿಚಾರಣೆ ನಡೆದು ಎಲ್ಲಾ ಮುಂಜಾಗ್ರತೆ ಕ್ರಮ ಪರಿಶೀಲಿಸಿದ ಮೇಲಷ್ಟೆ ಈ ಬಾರಿ ಕೆಂಡ ಹಾಯಲು ಅವಕಾಶ ಮಾಡಿಕೊಡಲಾಗಿತ್ತು.ಪಿಎಸೈ ಪ್ರವೀಣ್ ಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಹಾಜರಿದ್ದು ಕೆಂಡದ ಸಮಯದಲ್ಲಿ ಭಾರಿ ನಿಗಾವಹಿಸಿದ್ದರು.
-----------------------------------------
ಕೆಂಡಾದ ಸೇವೆ ಸಾಂಪ್ರದಾಯಿಕ ಆಚರಣೆಯಾಗಿದ್ದು ಅನಾದಿ ಕಾಲದಿಂದಲೂ ಜಾತ್ರಾ ಮಹೋತ್ಸವದಲ್ಲಿ ನಡೆಸಿಕೊಂದು ಬರುತ್ತಿದ್ದೇವೆ.ಇದೇ ಪ್ರಥಮ ಬಾರಿಗೆ ಕೆಂಡ ಸೇವೆ ಸಲ್ಲಿಸಲು ತಾಲ್ಲೂಕ್ ಆಡಳಿತದಿಂದ ಒಪ್ಪಿಗೆ ಪತ್ರ ತರಲಾಯಿತು :ಕರಿಯಪ್ಪ ,ಕರಿಯಮ್ಮ ದೇವಿ ದೇವಾಲಯ ಸಮಿತಿಯ ಅಧ್ಯಕ್ಷ
-----------------------------
ಸರ್ಕಾರಿ ಆದೇಶದಂತೆ ಮುಂಜಾಗ್ರತೆಯಾಗಿ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾಗ್ಯೂ ಐದು ಸಾವಿರ ರೂಪಾಯಿ ಹಣ ಪಾವತಿಸಿ ರಸೀದಿ ನೀಡಿದರಷ್ಟೆ ಬರುವುದು ಎಂದು ಜಾತ್ರೆಗೆ ಬರಲು ನಿರಾಕರಿಸಿದರು.ಅಕಸ್ಮಾತ್ ಅಗ್ನಿಕೊಂಡ ಹಾಯುವಾಗ ಏನಾದರೂ ಹೆಚ್ಚುಕಮ್ಮಿಯಾಗಿ ಬಿದಿದ್ದರೆ ಯಾರು ಹೊಣೆ.ಸರ್ಕಾರ ಇದಕ್ಕೆ ಹಣ ಪಡೆಯುವುದನ್ನು ಬಿಟ್ಟು ಮುಂಜಾಗ್ರತೆಯಾಗಿ ವಾಹನ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಿ:ಲಿಂಗದೇವರು,ಗ್ರಾಮಸ್ಥ

---------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...