ವಿಷಯಕ್ಕೆ ಹೋಗಿ

ಹಾಲಿನ ಡೈರಿಗಳು ರೈತನ ಪಾಲಿನ ಲಕ್ಷ್ಮೀ ದೇವಸ್ಥಾನಗಳು :ತುಮಕೂರು ಹಾಲು ಒಕ್ಕೂಟದ ನಿರ್ದೆಶಕ ಹಳೆಮನೆ ಶಿವನಂಜಪ್ಪ

ಹುಳಿಯಾರು: ಮಳೆಬೆಳೆ ಕೈಕೊಟ್ಟಿರುವ ಇಂದು ರೈತನಿಗೆ ಹಣ ಕೊಟ್ಟು ನೆಮ್ಮದಿಯ ಜೀವನ ನಿರ್ವಹಣೆ ಮಾಡುವಂತೆ ಮಾಡಿರುವ ಡೈರಿಗಳು ರೈತನ ಪಾಲಿನ ಲಕ್ಷ್ಮೀ ದೇವಸ್ಥಾನಗಳು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೆಶಕ ಹಳೆಮನೆ ಶಿವನಂಜಪ್ಪ ತಿಳಿಸಿದರು.
                 ಹುಳಿಯಾರು ಸಮೀಪದ ಪುರದಮಠದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಆರಂಭಿಸಿರುವ ಬಿಎಂಸಿ ಘಟಕದ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹುಳಿಯಾರು ಸಮೀಪದ ಪುರದಮಠದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಆರಂಭಿಸಿರುವ ಬಿಎಂಸಿ ಘಟಕವನ್ನು ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಉದ್ಘಾಟಿಸಿದರು. ಹಳೆಮನೆ ಶಿವನಂಜಪ್ಪ, ಕೆ.ಶಾಂತಪ್ಪ ಮತ್ತಿತರರು ಇದ್ದಾರೆ.

                ಕೊಬ್ಬರಿ ಮಾರಲು ತಿಪಟೂರಿಗೂ, ಹುಣಸೆ ಮಾರಲು ತುಮಕೂರಿಗೂ, ಅಡಿಕೆ ಮಾರಲು ಭೀಮಸಂದ್ರಕ್ಕೂ ಹೋಗಬೇಕು. ಆದರೆ ಹಾಲು ಮಾರಲು ದೂರದೂರಿಗೆ ಹೋಗದೆ ತಮ್ಮ ಊರಿನ ಹಾಲಿನ ಡೈರಿಯಲ್ಲಿ ಮಾರಬಹುದು. ಅದೂ ದರ ಹೆಚ್ಚುಕಡಿಮೆಯಾಗದೆ ಪ್ರತಿದಿನ ಒಂದೇ ದರದಲ್ಲಿ ಮಾರಬಹುದು. ಹಾಗಾಗಿ ಇಂದು ಹಾಲಿನ ಡೇರಿಗಳು ಪ್ರತಿದಿನ ಬೆಳಿಗ್ಗೆ-ಸಂಜೆ ರೈತನಿಗೆ ಹಣ ನೀಡುವ ಲಕ್ಷ್ಮಿ ದೇವಸ್ಥಾನಗಳಾಗಿವೆ. ಈ ಸತ್ಯ ಮನವರಿಕೆ ಮಾಡಿ ಪ್ಯಾಟೆಯಲ್ಲಿ ಇನ್ನೊಬ್ಬರ ಕೈಕೆಳಗೆ ಮೂರ್ನಾಲ್ಕು ಸಾವಿರಕ್ಕೆ ಕೂಲಿ ಮಾಡಿ ದುಬಾರಿ ವೆಚ್ಚ ಹಾಗೂ ಒತ್ತಡದ ಜೀವನ ನಡೆಸುತ್ತಿರುವ ಯುವಕರಿಗೆ ಮುಕ್ತಿ ಕೊಡಬೇಕಾಗಿದೆ ಎಂದರು.

                   ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಅವರು ಮಾತನಾಡಿ ಉತ್ಪಾದಕರ ನಿಯತ್ತು ಸಂಘದ ಸಂಪತ್ತಾಗಿದ್ದು ಹಾಲು ಉತ್ಪಾದಕರು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಇದ್ದರೆ ಸಂಘದ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಹಾಲಿಗೆ ಕಲಬೆರಕೆ ಮಾಡದೆ ಶುದ್ಧವಾದ ಹಾಲು ಕೊಟ್ಟು ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವ ಮೂಲಕ ತನ್ನ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು ಎಂದರು.

                  ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ಬಲರಾಮ್ ಅವರು ಮಾತನಾಡಿ ಇಂದಿನ ಜಾಗತೀಕರಣದಲ್ಲಿ ಕೃಷಿಕರು ಕ್ವಾಂಟಿಟಿಗೆ ಬದಲು ಕ್ವಾಲಿಟಿಗೆ ಗಮನ ಹರಿಸುವ ಅಗತ್ಯವಿದ್ದು ಶುದ್ಧಹಾಲು ಉತ್ಪಾದನೆಗೆ ರಾಸು ಆರೋಗ್ಯ, ಖನಿಜ ಮಿಶ್ರಣ ಆಹಾರ, ಕಾಲಕಾಲಕ್ಕೆ ಲಸಿಕೆ ಹಾಗೂ ಕೊಟ್ಟಿಗೆ ಸ್ವಚ್ಚವಾಗಿಟ್ಟುಕೊಳ್ಳುವುದು ಮುಖ್ಯ ಎಂದು ಸಲಹೆ ನೀಡಿದರು.

                   ಸಹಾಯಕ ವ್ಯವಸ್ಥಾಪಕ ಎ.ಪಿ.ಯರಗುಂಟಪ್ಪ ಅವರು ಮಾತನಾಡಿ ಹೈನುಗಾರಿಕೆಯಲ್ಲಿ ಲಾಭ ಪಡೆಯಬೇಕಾದರೆ ಹಸುಗಳ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳುವುದು ಬಹುಮುಖ್ಯ. ಈ ನಿಟ್ಟಿನಲ್ಲಿ ಕೆಚ್ಚಲುಬಾವು ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೆಚ್ಚಲುಬಾವು ಬಂದಿರುವ ಲಕ್ಷಣ ಕಂಡರೆ ಪೊಟಾಷಿಯಂ ಪರಮಾಂಗ್ನೇಟ್ ಅಥವಾ ಬೇವಿನ ಎಣ್ಣೆ ಹಚ್ಚಬೇಕು. ಕಾಲಾಕಾಲಕ್ಕೆ ಲಸಿಕೆಗಳನ್ನು ಕೊಡಿಸುತ್ತಿರಬೇಕು ಎಂದು ಸಲಹೆ ನೀಡಿದರು.


                  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಶಾಂತಪ್ಪ ಅವರು ವಹಿಸಿದ್ದರು. ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಎನ್.ಆರ್.ನಾಗರಾಜು, ಉಪವ್ಯವಸ್ಥಾಪಕ ಡಾ.ಎಂ.ಎನ್.ಚಂದ್ರಪ್ಪ, ಉಪ ವ್ಯವಸ್ಥಾಪಕ ಎಚ್.ಎಸ್.ಸಿದ್ಧರಾಮಯ್ಯ, ವಿಸ್ತರಣಾಧಿಕಾರಿ ಎಂ.ಎನ್.ಮಹೇಶ್, ಸಿ.ರಾಜು, ವಿಸ್ತರಣಾ ಸಮಾಲೋಚಕರಾದ ಎಂ.ಕೆ.ಸುಮಿತ್ರ, ಪಶು ಆಸ್ಪತ್ರೆ ಸಹಾಯಕ ನಿರ್ದೆಶಕ ಡಾ.ವೈ.ಜಿ.ರಂಗನಾಥಯ್ಯ, ಕಾರ್ಯದರ್ಶಿ ಸಿ.ಶೇಖರಪ್ಪ, ಹಾಲು ಪರೀಕ್ಷಕ ರಾಮಯ್ಯ, ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...