ವಿಷಯಕ್ಕೆ ಹೋಗಿ

ಹಾಲಿನ ಡೈರಿಗಳು ರೈತನ ಪಾಲಿನ ಲಕ್ಷ್ಮೀ ದೇವಸ್ಥಾನಗಳು :ತುಮಕೂರು ಹಾಲು ಒಕ್ಕೂಟದ ನಿರ್ದೆಶಕ ಹಳೆಮನೆ ಶಿವನಂಜಪ್ಪ

ಹುಳಿಯಾರು: ಮಳೆಬೆಳೆ ಕೈಕೊಟ್ಟಿರುವ ಇಂದು ರೈತನಿಗೆ ಹಣ ಕೊಟ್ಟು ನೆಮ್ಮದಿಯ ಜೀವನ ನಿರ್ವಹಣೆ ಮಾಡುವಂತೆ ಮಾಡಿರುವ ಡೈರಿಗಳು ರೈತನ ಪಾಲಿನ ಲಕ್ಷ್ಮೀ ದೇವಸ್ಥಾನಗಳು ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೆಶಕ ಹಳೆಮನೆ ಶಿವನಂಜಪ್ಪ ತಿಳಿಸಿದರು.
                 ಹುಳಿಯಾರು ಸಮೀಪದ ಪುರದಮಠದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಆರಂಭಿಸಿರುವ ಬಿಎಂಸಿ ಘಟಕದ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹುಳಿಯಾರು ಸಮೀಪದ ಪುರದಮಠದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಆರಂಭಿಸಿರುವ ಬಿಎಂಸಿ ಘಟಕವನ್ನು ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಉದ್ಘಾಟಿಸಿದರು. ಹಳೆಮನೆ ಶಿವನಂಜಪ್ಪ, ಕೆ.ಶಾಂತಪ್ಪ ಮತ್ತಿತರರು ಇದ್ದಾರೆ.

                ಕೊಬ್ಬರಿ ಮಾರಲು ತಿಪಟೂರಿಗೂ, ಹುಣಸೆ ಮಾರಲು ತುಮಕೂರಿಗೂ, ಅಡಿಕೆ ಮಾರಲು ಭೀಮಸಂದ್ರಕ್ಕೂ ಹೋಗಬೇಕು. ಆದರೆ ಹಾಲು ಮಾರಲು ದೂರದೂರಿಗೆ ಹೋಗದೆ ತಮ್ಮ ಊರಿನ ಹಾಲಿನ ಡೈರಿಯಲ್ಲಿ ಮಾರಬಹುದು. ಅದೂ ದರ ಹೆಚ್ಚುಕಡಿಮೆಯಾಗದೆ ಪ್ರತಿದಿನ ಒಂದೇ ದರದಲ್ಲಿ ಮಾರಬಹುದು. ಹಾಗಾಗಿ ಇಂದು ಹಾಲಿನ ಡೇರಿಗಳು ಪ್ರತಿದಿನ ಬೆಳಿಗ್ಗೆ-ಸಂಜೆ ರೈತನಿಗೆ ಹಣ ನೀಡುವ ಲಕ್ಷ್ಮಿ ದೇವಸ್ಥಾನಗಳಾಗಿವೆ. ಈ ಸತ್ಯ ಮನವರಿಕೆ ಮಾಡಿ ಪ್ಯಾಟೆಯಲ್ಲಿ ಇನ್ನೊಬ್ಬರ ಕೈಕೆಳಗೆ ಮೂರ್ನಾಲ್ಕು ಸಾವಿರಕ್ಕೆ ಕೂಲಿ ಮಾಡಿ ದುಬಾರಿ ವೆಚ್ಚ ಹಾಗೂ ಒತ್ತಡದ ಜೀವನ ನಡೆಸುತ್ತಿರುವ ಯುವಕರಿಗೆ ಮುಕ್ತಿ ಕೊಡಬೇಕಾಗಿದೆ ಎಂದರು.

                   ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಅವರು ಮಾತನಾಡಿ ಉತ್ಪಾದಕರ ನಿಯತ್ತು ಸಂಘದ ಸಂಪತ್ತಾಗಿದ್ದು ಹಾಲು ಉತ್ಪಾದಕರು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಇದ್ದರೆ ಸಂಘದ ಏಳಿಗೆ ಸಾಧ್ಯ. ಈ ನಿಟ್ಟಿನಲ್ಲಿ ಹಾಲಿಗೆ ಕಲಬೆರಕೆ ಮಾಡದೆ ಶುದ್ಧವಾದ ಹಾಲು ಕೊಟ್ಟು ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವ ಮೂಲಕ ತನ್ನ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು ಎಂದರು.

                  ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ಬಲರಾಮ್ ಅವರು ಮಾತನಾಡಿ ಇಂದಿನ ಜಾಗತೀಕರಣದಲ್ಲಿ ಕೃಷಿಕರು ಕ್ವಾಂಟಿಟಿಗೆ ಬದಲು ಕ್ವಾಲಿಟಿಗೆ ಗಮನ ಹರಿಸುವ ಅಗತ್ಯವಿದ್ದು ಶುದ್ಧಹಾಲು ಉತ್ಪಾದನೆಗೆ ರಾಸು ಆರೋಗ್ಯ, ಖನಿಜ ಮಿಶ್ರಣ ಆಹಾರ, ಕಾಲಕಾಲಕ್ಕೆ ಲಸಿಕೆ ಹಾಗೂ ಕೊಟ್ಟಿಗೆ ಸ್ವಚ್ಚವಾಗಿಟ್ಟುಕೊಳ್ಳುವುದು ಮುಖ್ಯ ಎಂದು ಸಲಹೆ ನೀಡಿದರು.

                   ಸಹಾಯಕ ವ್ಯವಸ್ಥಾಪಕ ಎ.ಪಿ.ಯರಗುಂಟಪ್ಪ ಅವರು ಮಾತನಾಡಿ ಹೈನುಗಾರಿಕೆಯಲ್ಲಿ ಲಾಭ ಪಡೆಯಬೇಕಾದರೆ ಹಸುಗಳ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳುವುದು ಬಹುಮುಖ್ಯ. ಈ ನಿಟ್ಟಿನಲ್ಲಿ ಕೆಚ್ಚಲುಬಾವು ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೆಚ್ಚಲುಬಾವು ಬಂದಿರುವ ಲಕ್ಷಣ ಕಂಡರೆ ಪೊಟಾಷಿಯಂ ಪರಮಾಂಗ್ನೇಟ್ ಅಥವಾ ಬೇವಿನ ಎಣ್ಣೆ ಹಚ್ಚಬೇಕು. ಕಾಲಾಕಾಲಕ್ಕೆ ಲಸಿಕೆಗಳನ್ನು ಕೊಡಿಸುತ್ತಿರಬೇಕು ಎಂದು ಸಲಹೆ ನೀಡಿದರು.


                  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಶಾಂತಪ್ಪ ಅವರು ವಹಿಸಿದ್ದರು. ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕ ಎನ್.ಆರ್.ನಾಗರಾಜು, ಉಪವ್ಯವಸ್ಥಾಪಕ ಡಾ.ಎಂ.ಎನ್.ಚಂದ್ರಪ್ಪ, ಉಪ ವ್ಯವಸ್ಥಾಪಕ ಎಚ್.ಎಸ್.ಸಿದ್ಧರಾಮಯ್ಯ, ವಿಸ್ತರಣಾಧಿಕಾರಿ ಎಂ.ಎನ್.ಮಹೇಶ್, ಸಿ.ರಾಜು, ವಿಸ್ತರಣಾ ಸಮಾಲೋಚಕರಾದ ಎಂ.ಕೆ.ಸುಮಿತ್ರ, ಪಶು ಆಸ್ಪತ್ರೆ ಸಹಾಯಕ ನಿರ್ದೆಶಕ ಡಾ.ವೈ.ಜಿ.ರಂಗನಾಥಯ್ಯ, ಕಾರ್ಯದರ್ಶಿ ಸಿ.ಶೇಖರಪ್ಪ, ಹಾಲು ಪರೀಕ್ಷಕ ರಾಮಯ್ಯ, ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...