ವಿಷಯಕ್ಕೆ ಹೋಗಿ

ಕಾರೇಹಳ್ಳಿ:ವೈಭವದ ರಂಗನಾಥಸ್ವಾಮಿ ರಥೋತ್ಸವ


ಹುಳಿಯಾರು : ಹೋಬಳಿಯ ಕಾರೇಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿಯ ಮೂಲಸ್ಥಾನದಲ್ಲಿ ವೈಭವಯುತ ಬ್ರಹ್ಮ ರಥೋತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸೋಮವಾರದಂದು ವೈಭವದಿಂದ ಜರುಗಿತು.

                        


ಕಳೆದ ಮೂರು ದಿನದಿಂದ ಜಾತ್ರೆ ಅಂಗವಾಗಿ ಸ್ವಾಮಿಗೆ ಕಂಕಣ, ಅಂಕುರಾರ್ಪಣೆ, ಧ್ವಜಾರೋಹಣ, ಉಯ್ಯಾಲೋತ್ಸವ, ಗಜಾರೋಹಣ, ಗರುಡ ವಾಹನೋತ್ಸವ, ಸಂತರ್ಪಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದಿದ್ದು, ಇಂದು ಮುಂಜಾನೆಯಿಂದಲೆ ಬ್ರಹ್ಮ ರಥೋತ್ಸವದ ವಿವಿಧ ಪೂಜಾ ಕೈಂಕರ್ಯ ನಡೆದವು.ರಥೋತ್ಸವದ ಅಂಗವಾಗಿ ರಥವನ್ನು ಬಗೆಬಗೆ ಹೂ ಹಾರ, ಬಾವುಟಗಳಿಂದ ಸಿಂಗರಿಸಿದ್ದಲ್ಲದೆ, ಪುಣ್ಯಾಹ, ಅನ್ನಶಾಂತಿ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಿದ್ದರು.

                      


ನಂತರ ರಂಗನಾಥಸ್ವಾಮಿಯ ಮೂಲಸ್ಥಾನದಿಂದ ಅಲಂಕೃತ ಉತ್ಸವ ಮೂರ್ತಿಯನ್ನು ಯರೇಹಳ್ಳಿಯ ಕೆಂಪಮ್ಮ ಹಾಗೂ ಹೊಯ್ಸಳಕಟ್ಟೆ ಕರಿಯಮ್ಮ , ಕೆಂಚರಾಯ, ಭೂತಪ್ಪ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ಪೂರ್ಣಕುಂಭ ಹಾಗೂ ವಾದ್ಯ ಮೇಳದೊಂದಿಗೆ ರಥದ ಬಳಿ ಕರೆತಂದು ಸಿಂಗಾರಗೊಂಡ ಸರ್ವಾಲಂಕೃಥ ರಥದಲ್ಲಿ ಶ್ರೀ ಸ್ವಾಮಿಯವರನ್ನು ಪ್ರತಿಷ್ಠಾಪಿಸಿ ಸಹಸ್ರಾರು ಭಕ್ತರು ಉದ್ಘೋಷದೊಂದಿಗೆ ರಥವನ್ನೆಳೆಯಲಾಯಿತು.

                        


ಸುಡುವ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದಲೇ ಕಿಕ್ಕಿರಿದು ನೆರೆದಿದ್ದ ಭಕ್ತರು ಜಯಘೋಷದೊಂದಿಗೆ ಸುಮಾರು ಐವತ್ತು ಅಡಿಗೂ ಎತ್ತರದ ರಥವನ್ನು ಎಳೆದರಲ್ಲದೆ ಮಂಡಕ್ಕಿ,ಬಾಳೆಹಣ್ಣುಗಳನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ದೂರದೂರುಗಳಿಂದ ಆಗಮಿಸಿದ ಭಕ್ತರು ಸ್ವಾಮಿಗೆ ಹಣ್ಣುಕಾಯಿ ಮಾಡಿಸಿದರು,ಎಲ್ಲೆಲ್ಲೂ ಜಾತ್ರೆಯ ಸಡಗರ ತುಂಬಿ ತುಳುಕುತಿತ್ತು.

                       

                 ರಥೋತ್ಸವದ ನಂತರ ದಸೂಡಿಯ ದಿ.ಕೊಟ್ಟಿಗೆ ರಂಗೇಗೌಡರ ಸಹೋದರರು ಮತ್ತು ಮಕ್ಕಳಿಂದ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ನಡೆಯಿತು.ಜಿ.ಎಂ.ಸೀನಪ್ಪ ಶೆಟ್ಟರು ಮತ್ತು ಜಿ.ಎಸ್.ಸತ್ಯನಾರಾಯಣ ಶೆಟ್ಟರು ಇವರುಗಳಿಂದ ಆರ್ಯವೈಶ್ಯ ಮಂಡಳಿಯವರಿಗೆ ಹಾಗೂ ತಿಮ್ಮನಹಳ್ಳಿಯ ಅಳ್ಳಪ್ಪ ವಂಶಸ್ಥರಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
           ತಹಸೀಲ್ದಾರ್ ಗಂಗೇಶ್, ಸಿಂಗದಹಳ್ಳಿ ರಾಜ್ ಕುಮಾರ್ , ದೇವಸ್ಥಾನ ಸಮಿತಿಯ ಆರ್.ರಂಗಸ್ವಾಮಿ, ಮುದ್ದುರಂಗಯ್ಯ,ದೊಡ್ಡಯ್ಯ,ರಮೇಶ್ , ರಾಮಕೃಷ್ಣಪ್ಪ, ಸೀತಾರಾಮಯ್ಯ,ಗ್ರಾಪಂ ಸದಸ್ಯರುಗಳಾದ ಮಧುಸೂದನ್, ಗಂಗಮ್ಮ,ಕೊಟ್ರೇಶ್,ಜಯಬಾಯಿ,ಪಿಡಿಓ ಕೋಕಿಲಾ ಸೇರಿದಂತೆ ಗ್ರಾಪಂ ಸಿಬ್ಬಂದಿ ಹಾಗೂ ಭಕ್ತರ ಮಹಾಪೂರವೇ ಪಾಲ್ಗೊಂಡಿತ್ತು.

                         

                              -----------------------------------------------------------------
ಬ್ರಹ್ಮರಥೋತ್ಸವಕ್ಕೂ ಮುನ್ನಾದಿನದಿಂದ ರಾಸುಗಳು ಸೇರುವುದು ವಾಡಿಕೆಯಾಗಿದ್ದು ಅದರಂತೆ ನಡೆಯುತ್ತ ಬಂದಿದೆ. ಇಲ್ಲಿ ನಡೆಯುವ ದನಗಳ ಜಾತ್ರೆ ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿದ್ದು ವಿವಿಧ ಜಿಲ್ಲೆಗಳಿಂದ ರಾಸುಗಳನ್ನು ಕೊಳ್ಳಲು ಹಾಗು ಮಾರಾಟ ಮಾಡಲು ರೈತರು ಆಗಮಿಸುವ ವಾಡಿಕೆಯಿದೆ. ನಿರೀಕ್ಷೆಗೂ ಮೀರಿದ ದನಗಳು ಬಂದಿದ್ದು ರಾಸುಗಳ ಬೆಲೆ ಗಗನಕ್ಕೇರಿದೆ. ಬ್ರಹ್ಮರಥೋತ್ಸವದ ದಿನದ ನಂತರ ಸುತ್ತಮುತ್ತಲ ಭಾಗದಿಂದ ಇನ್ನಷ್ಟು ದನಗಳು ಮಾರಾಟ ಮಾಡಲು ಬರುವುದಿದ್ದು .ಮಾರ್ಚ್ ೨೬ ರವರೆಗೆ ಜಾತ್ರೆ ಮುಂದುವರೆಯಲಿದೆ.
                                                       ----------------------------------- 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...