ವಿಷಯಕ್ಕೆ ಹೋಗಿ

ಕಾರೇಹಳ್ಳಿ:ವೈಭವದ ರಂಗನಾಥಸ್ವಾಮಿ ರಥೋತ್ಸವ


ಹುಳಿಯಾರು : ಹೋಬಳಿಯ ಕಾರೇಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿಯ ಮೂಲಸ್ಥಾನದಲ್ಲಿ ವೈಭವಯುತ ಬ್ರಹ್ಮ ರಥೋತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಸೋಮವಾರದಂದು ವೈಭವದಿಂದ ಜರುಗಿತು.

                        


ಕಳೆದ ಮೂರು ದಿನದಿಂದ ಜಾತ್ರೆ ಅಂಗವಾಗಿ ಸ್ವಾಮಿಗೆ ಕಂಕಣ, ಅಂಕುರಾರ್ಪಣೆ, ಧ್ವಜಾರೋಹಣ, ಉಯ್ಯಾಲೋತ್ಸವ, ಗಜಾರೋಹಣ, ಗರುಡ ವಾಹನೋತ್ಸವ, ಸಂತರ್ಪಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದಿದ್ದು, ಇಂದು ಮುಂಜಾನೆಯಿಂದಲೆ ಬ್ರಹ್ಮ ರಥೋತ್ಸವದ ವಿವಿಧ ಪೂಜಾ ಕೈಂಕರ್ಯ ನಡೆದವು.ರಥೋತ್ಸವದ ಅಂಗವಾಗಿ ರಥವನ್ನು ಬಗೆಬಗೆ ಹೂ ಹಾರ, ಬಾವುಟಗಳಿಂದ ಸಿಂಗರಿಸಿದ್ದಲ್ಲದೆ, ಪುಣ್ಯಾಹ, ಅನ್ನಶಾಂತಿ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಿದ್ದರು.

                      


ನಂತರ ರಂಗನಾಥಸ್ವಾಮಿಯ ಮೂಲಸ್ಥಾನದಿಂದ ಅಲಂಕೃತ ಉತ್ಸವ ಮೂರ್ತಿಯನ್ನು ಯರೇಹಳ್ಳಿಯ ಕೆಂಪಮ್ಮ ಹಾಗೂ ಹೊಯ್ಸಳಕಟ್ಟೆ ಕರಿಯಮ್ಮ , ಕೆಂಚರಾಯ, ಭೂತಪ್ಪ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ಪೂರ್ಣಕುಂಭ ಹಾಗೂ ವಾದ್ಯ ಮೇಳದೊಂದಿಗೆ ರಥದ ಬಳಿ ಕರೆತಂದು ಸಿಂಗಾರಗೊಂಡ ಸರ್ವಾಲಂಕೃಥ ರಥದಲ್ಲಿ ಶ್ರೀ ಸ್ವಾಮಿಯವರನ್ನು ಪ್ರತಿಷ್ಠಾಪಿಸಿ ಸಹಸ್ರಾರು ಭಕ್ತರು ಉದ್ಘೋಷದೊಂದಿಗೆ ರಥವನ್ನೆಳೆಯಲಾಯಿತು.

                        


ಸುಡುವ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದಲೇ ಕಿಕ್ಕಿರಿದು ನೆರೆದಿದ್ದ ಭಕ್ತರು ಜಯಘೋಷದೊಂದಿಗೆ ಸುಮಾರು ಐವತ್ತು ಅಡಿಗೂ ಎತ್ತರದ ರಥವನ್ನು ಎಳೆದರಲ್ಲದೆ ಮಂಡಕ್ಕಿ,ಬಾಳೆಹಣ್ಣುಗಳನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ದೂರದೂರುಗಳಿಂದ ಆಗಮಿಸಿದ ಭಕ್ತರು ಸ್ವಾಮಿಗೆ ಹಣ್ಣುಕಾಯಿ ಮಾಡಿಸಿದರು,ಎಲ್ಲೆಲ್ಲೂ ಜಾತ್ರೆಯ ಸಡಗರ ತುಂಬಿ ತುಳುಕುತಿತ್ತು.

                       

                 ರಥೋತ್ಸವದ ನಂತರ ದಸೂಡಿಯ ದಿ.ಕೊಟ್ಟಿಗೆ ರಂಗೇಗೌಡರ ಸಹೋದರರು ಮತ್ತು ಮಕ್ಕಳಿಂದ ಬ್ರಾಹ್ಮಣರಿಗೆ ಅನ್ನಸಂತರ್ಪಣೆ ನಡೆಯಿತು.ಜಿ.ಎಂ.ಸೀನಪ್ಪ ಶೆಟ್ಟರು ಮತ್ತು ಜಿ.ಎಸ್.ಸತ್ಯನಾರಾಯಣ ಶೆಟ್ಟರು ಇವರುಗಳಿಂದ ಆರ್ಯವೈಶ್ಯ ಮಂಡಳಿಯವರಿಗೆ ಹಾಗೂ ತಿಮ್ಮನಹಳ್ಳಿಯ ಅಳ್ಳಪ್ಪ ವಂಶಸ್ಥರಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
           ತಹಸೀಲ್ದಾರ್ ಗಂಗೇಶ್, ಸಿಂಗದಹಳ್ಳಿ ರಾಜ್ ಕುಮಾರ್ , ದೇವಸ್ಥಾನ ಸಮಿತಿಯ ಆರ್.ರಂಗಸ್ವಾಮಿ, ಮುದ್ದುರಂಗಯ್ಯ,ದೊಡ್ಡಯ್ಯ,ರಮೇಶ್ , ರಾಮಕೃಷ್ಣಪ್ಪ, ಸೀತಾರಾಮಯ್ಯ,ಗ್ರಾಪಂ ಸದಸ್ಯರುಗಳಾದ ಮಧುಸೂದನ್, ಗಂಗಮ್ಮ,ಕೊಟ್ರೇಶ್,ಜಯಬಾಯಿ,ಪಿಡಿಓ ಕೋಕಿಲಾ ಸೇರಿದಂತೆ ಗ್ರಾಪಂ ಸಿಬ್ಬಂದಿ ಹಾಗೂ ಭಕ್ತರ ಮಹಾಪೂರವೇ ಪಾಲ್ಗೊಂಡಿತ್ತು.

                         

                              -----------------------------------------------------------------
ಬ್ರಹ್ಮರಥೋತ್ಸವಕ್ಕೂ ಮುನ್ನಾದಿನದಿಂದ ರಾಸುಗಳು ಸೇರುವುದು ವಾಡಿಕೆಯಾಗಿದ್ದು ಅದರಂತೆ ನಡೆಯುತ್ತ ಬಂದಿದೆ. ಇಲ್ಲಿ ನಡೆಯುವ ದನಗಳ ಜಾತ್ರೆ ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿದ್ದು ವಿವಿಧ ಜಿಲ್ಲೆಗಳಿಂದ ರಾಸುಗಳನ್ನು ಕೊಳ್ಳಲು ಹಾಗು ಮಾರಾಟ ಮಾಡಲು ರೈತರು ಆಗಮಿಸುವ ವಾಡಿಕೆಯಿದೆ. ನಿರೀಕ್ಷೆಗೂ ಮೀರಿದ ದನಗಳು ಬಂದಿದ್ದು ರಾಸುಗಳ ಬೆಲೆ ಗಗನಕ್ಕೇರಿದೆ. ಬ್ರಹ್ಮರಥೋತ್ಸವದ ದಿನದ ನಂತರ ಸುತ್ತಮುತ್ತಲ ಭಾಗದಿಂದ ಇನ್ನಷ್ಟು ದನಗಳು ಮಾರಾಟ ಮಾಡಲು ಬರುವುದಿದ್ದು .ಮಾರ್ಚ್ ೨೬ ರವರೆಗೆ ಜಾತ್ರೆ ಮುಂದುವರೆಯಲಿದೆ.
                                                       ----------------------------------- 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...