ವಿಷಯಕ್ಕೆ ಹೋಗಿ

ಯಗಚೀಹಳ್ಳಿ ಗ್ರಾಮಕ್ಕೆ ನಿಗದಿತವಾಗಿ ವಿದ್ಯುತ್ ಪೂರೈಸಲು ಒತ್ತಾಯ

ಹುಳಿಯಾರು: ಹೋಬಳಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಾದ ಯಗಚಿಹಳ್ಳಿ,ಮಾರುಹೊಳೆ,ಕೆಎಸ್ ಪಾಳ್ಯ,ಬಡಾವಣೆ,ಭದ್ರಯ್ಯನ ಪಾಳ್ಯದ ಗ್ರಾಮಸ್ಥರುಗಳು ವಿದ್ಯುತ್ ಸಮಸ್ಯೆಯಿಂದ ಬೇಸತ್ತು ಗ್ರಾಮದ ಪ್ರಮುಖರುಗಳ ಸಮ್ಮುಖದಲ್ಲಿ ಹುಳಿಯಾರಿನ ಬೆಸ್ಕಾಂಗೆ ಆಗಮಿಸಿ ಇನ್ನೊಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಸರಿಪಡಿಸುವಂತೆ ಗಡುವು ನೀಡಿದ ಘಟನೆ ಮಂಗಳವಾರದಂದು ಜರುಗಿತು.
ಯಗಚಿಹಳ್ಳಿ ಗ್ರಾಮಸ್ಥರುಗಳು ವಿದ್ಯುತ್ ಸಮಸ್ಯೆಪರಿಹರಿಸುವಂತೆ ಒತ್ತಾಯಿಸಿ ಹುಳಿಯಾರಿನ ಬೆಸ್ಕಾಂ ಸೆಕ್ಷನ್ ಆಫೀಸರ್ ಮೂರ್ತಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಮ್ಮೂರಿನಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು ರಾತ್ರಿ ಹೊತ್ತು ವಿದ್ಯುತ್ ಇಲ್ಲದೆ ಹಳ್ಳಿಗಳು ಕತ್ತಲಲ್ಲಿ ಮುಳುಗುವಂತಾಗಿದ್ದು ವಿದ್ಯುತ್ ವ್ಯತ್ಯಯದಿಂದ ಕುಡಿಯುವ ನೀರಿಗೂ ಕಷ್ಟವಾಗಿದೆ.ಥ್ರಿ ಫೇಸ್ ವಿದ್ಯುತ್ ಬದಲು ಕೆಲವೇ ಗಂಟೆಗಳ ಸಮಯ ಸಿಂಗಲ್ ಫೇಸ್ ವಿದ್ಯುತ್ ನೀಡುತ್ತಿರುವುದರಿಂದ ಯಾವುದೇ ಕೆಲಸವಾಗುತ್ತಿಲ್ಲ.ಅದನ್ನು ಕೂಡ ಸರಿಯಾಗಿ ಸರಬರಾಜು ಮಾಡದೆ ದಿನಕ್ಕೆ ಹತ್ತಿಪತ್ತು ಬಾರಿ ತೆಗೆಯುವುದರಿಂದ ಅನಿಶ್ಚಿತ ವಿದ್ಯುತ್ ನಿಂದ ಮಕ್ಕಳ ಪರೀಕ್ಷಾ ಸಮಯದಲ್ಲಿ ಓದಿಗೂ ಕೂಡ ತೊಂದರೆಯಾಗಿದೆ ಎಂದು ದೂರಿದರು.

ಹಳ್ಳಿಗಳಲ್ಲಿ ಕೇವಲ ಎರಡು ಮೂರು ಗಂಟೆ ವಿದ್ಯುತ್ ನೀಡುವುದರಿಂದ ತೋಟ ತುಡಿಕೆಗಳು ಬೇಸಿಗೆಯ ಬಿಸಿಲ ಝಳಕ್ಕೆ ಒಣಗಿಹೋಗುತ್ತಿದ್ದು ತೋಟದಲ್ಲಿ ಭರ್ತಿ ನೀರಿದ್ದರೂ ಕರೆಂಟ್ ಸಮಸ್ಯೆಯಿಂದಾಗಿ ನೀರು ಹಾಯಿಸಲಾರದ ಸ್ಥಿತಿಯುಂಟಾಗಿದೆ ಎಂದು ಅಲವತ್ತುಕೊಂಡರು.
                ನಮ್ಮ ಹಳ್ಳಿಗೆ ನಾವುಗಳು ದಿನದ ಇಪ್ಪತ್ನಾಲು ಗಂಟೆ ವಿದ್ಯುತ್ ಕೇಳುತ್ತಿಲ್ಲ.ಆದರೆ ಕೊಡುವ ವಿದ್ಯುತ್ತನ್ನೆ ನಿಗದಿತವಾಗಿ ಕೊಡಿ.ಹಗಲಿನಲ್ಲಿ ಎರಡುಗಂಟೆ ಹಾಗೂ ರಾತ್ರಿ ಸಮಯದಲ್ಲಿ ಕೇವಲ ಮೂರು ಗಂಟೆ ಗುಣಮಟ್ಟದ ಥ್ರೀ ಫೇಸ್ ವಿದ್ಯುತ್ ನೀಡಿ ಎಂದು ಮನವಿ ಮಾಡಿದರು.
               ಮನವಿ ಸ್ವೀಕರಿಸಿದ ಬೆಸ್ಕಾಂ ಸೆಕ್ಷನ್ ಆಫೀಸರ್ ಮೂರ್ತಪ್ಪ ಮಾತನಾಡಿ, ಬೇಸಿಗೆಯಾದ್ದರಿಂದ ವಿದ್ಯುತ್ ಅಭಾವ ಉಂಟಾಗಿದ್ದು ನಿಗದಿಯಂತೆ ವಿದ್ಯುತ್ ಒದಗಿಸಲು ಸಾಧ್ಯವಾಗುತ್ತಿಲ್ಲ.ಆದರೂ ಕೂಡ ನಿಮ್ಮ ಸಮಸ್ಯೆಗಳನ್ನು ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
           ಈ ಸಂದರ್ಭದಲ್ಲಿ ಗ್ರಾಮದ ರಾಮಯ್ಯ,ನಾಗರಾಜು,ಗ್ರಾಪಂ ಸದಸ್ಯ ಮಧುಸೂದನ, ತ್ಯಾಗರಾಜು, ವಿಜಯಕುಮಾರ್,ಚಂದ್ರಯ್ಯ,ದೇವರಾಜು ಸೇರಿದಂತೆ ಗ್ರಾಮದ ಮುಖ್ಯಸ್ಥರು  ಹಾಜರಿದ್ದರು.
-----------------------------------------------------------
ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯ ಹಿನ್ನಲೆಯಲ್ಲಿ ವಿದ್ಯುತ್ ಅಭಾವ ತೀವ್ರವಾಗಿದ್ದು ಅನಿಶ್ಚಿತ ವಿದ್ಯುತ್ ನಿಂದಾಗಿ ಹಳ್ಳಿಗಳು ಕತ್ತಲಲ್ಲಿ ಮುಳುಗಿದ ಪರಿಸ್ಥಿತಿಉಂಟಾಗಿದೆಯಲ್ಲದೆ ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ : ಯಗಚಿಹಳ್ಳಿ ಗ್ರಾಪಂ ಸದಸ್ಯ ಮಧುಸೂದನ

--------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...