ವಿಷಯಕ್ಕೆ ಹೋಗಿ

ಯಗಚೀಹಳ್ಳಿ ಗ್ರಾಮಕ್ಕೆ ನಿಗದಿತವಾಗಿ ವಿದ್ಯುತ್ ಪೂರೈಸಲು ಒತ್ತಾಯ

ಹುಳಿಯಾರು: ಹೋಬಳಿ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಾದ ಯಗಚಿಹಳ್ಳಿ,ಮಾರುಹೊಳೆ,ಕೆಎಸ್ ಪಾಳ್ಯ,ಬಡಾವಣೆ,ಭದ್ರಯ್ಯನ ಪಾಳ್ಯದ ಗ್ರಾಮಸ್ಥರುಗಳು ವಿದ್ಯುತ್ ಸಮಸ್ಯೆಯಿಂದ ಬೇಸತ್ತು ಗ್ರಾಮದ ಪ್ರಮುಖರುಗಳ ಸಮ್ಮುಖದಲ್ಲಿ ಹುಳಿಯಾರಿನ ಬೆಸ್ಕಾಂಗೆ ಆಗಮಿಸಿ ಇನ್ನೊಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಸರಿಪಡಿಸುವಂತೆ ಗಡುವು ನೀಡಿದ ಘಟನೆ ಮಂಗಳವಾರದಂದು ಜರುಗಿತು.
ಯಗಚಿಹಳ್ಳಿ ಗ್ರಾಮಸ್ಥರುಗಳು ವಿದ್ಯುತ್ ಸಮಸ್ಯೆಪರಿಹರಿಸುವಂತೆ ಒತ್ತಾಯಿಸಿ ಹುಳಿಯಾರಿನ ಬೆಸ್ಕಾಂ ಸೆಕ್ಷನ್ ಆಫೀಸರ್ ಮೂರ್ತಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಮ್ಮೂರಿನಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು ರಾತ್ರಿ ಹೊತ್ತು ವಿದ್ಯುತ್ ಇಲ್ಲದೆ ಹಳ್ಳಿಗಳು ಕತ್ತಲಲ್ಲಿ ಮುಳುಗುವಂತಾಗಿದ್ದು ವಿದ್ಯುತ್ ವ್ಯತ್ಯಯದಿಂದ ಕುಡಿಯುವ ನೀರಿಗೂ ಕಷ್ಟವಾಗಿದೆ.ಥ್ರಿ ಫೇಸ್ ವಿದ್ಯುತ್ ಬದಲು ಕೆಲವೇ ಗಂಟೆಗಳ ಸಮಯ ಸಿಂಗಲ್ ಫೇಸ್ ವಿದ್ಯುತ್ ನೀಡುತ್ತಿರುವುದರಿಂದ ಯಾವುದೇ ಕೆಲಸವಾಗುತ್ತಿಲ್ಲ.ಅದನ್ನು ಕೂಡ ಸರಿಯಾಗಿ ಸರಬರಾಜು ಮಾಡದೆ ದಿನಕ್ಕೆ ಹತ್ತಿಪತ್ತು ಬಾರಿ ತೆಗೆಯುವುದರಿಂದ ಅನಿಶ್ಚಿತ ವಿದ್ಯುತ್ ನಿಂದ ಮಕ್ಕಳ ಪರೀಕ್ಷಾ ಸಮಯದಲ್ಲಿ ಓದಿಗೂ ಕೂಡ ತೊಂದರೆಯಾಗಿದೆ ಎಂದು ದೂರಿದರು.

ಹಳ್ಳಿಗಳಲ್ಲಿ ಕೇವಲ ಎರಡು ಮೂರು ಗಂಟೆ ವಿದ್ಯುತ್ ನೀಡುವುದರಿಂದ ತೋಟ ತುಡಿಕೆಗಳು ಬೇಸಿಗೆಯ ಬಿಸಿಲ ಝಳಕ್ಕೆ ಒಣಗಿಹೋಗುತ್ತಿದ್ದು ತೋಟದಲ್ಲಿ ಭರ್ತಿ ನೀರಿದ್ದರೂ ಕರೆಂಟ್ ಸಮಸ್ಯೆಯಿಂದಾಗಿ ನೀರು ಹಾಯಿಸಲಾರದ ಸ್ಥಿತಿಯುಂಟಾಗಿದೆ ಎಂದು ಅಲವತ್ತುಕೊಂಡರು.
                ನಮ್ಮ ಹಳ್ಳಿಗೆ ನಾವುಗಳು ದಿನದ ಇಪ್ಪತ್ನಾಲು ಗಂಟೆ ವಿದ್ಯುತ್ ಕೇಳುತ್ತಿಲ್ಲ.ಆದರೆ ಕೊಡುವ ವಿದ್ಯುತ್ತನ್ನೆ ನಿಗದಿತವಾಗಿ ಕೊಡಿ.ಹಗಲಿನಲ್ಲಿ ಎರಡುಗಂಟೆ ಹಾಗೂ ರಾತ್ರಿ ಸಮಯದಲ್ಲಿ ಕೇವಲ ಮೂರು ಗಂಟೆ ಗುಣಮಟ್ಟದ ಥ್ರೀ ಫೇಸ್ ವಿದ್ಯುತ್ ನೀಡಿ ಎಂದು ಮನವಿ ಮಾಡಿದರು.
               ಮನವಿ ಸ್ವೀಕರಿಸಿದ ಬೆಸ್ಕಾಂ ಸೆಕ್ಷನ್ ಆಫೀಸರ್ ಮೂರ್ತಪ್ಪ ಮಾತನಾಡಿ, ಬೇಸಿಗೆಯಾದ್ದರಿಂದ ವಿದ್ಯುತ್ ಅಭಾವ ಉಂಟಾಗಿದ್ದು ನಿಗದಿಯಂತೆ ವಿದ್ಯುತ್ ಒದಗಿಸಲು ಸಾಧ್ಯವಾಗುತ್ತಿಲ್ಲ.ಆದರೂ ಕೂಡ ನಿಮ್ಮ ಸಮಸ್ಯೆಗಳನ್ನು ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
           ಈ ಸಂದರ್ಭದಲ್ಲಿ ಗ್ರಾಮದ ರಾಮಯ್ಯ,ನಾಗರಾಜು,ಗ್ರಾಪಂ ಸದಸ್ಯ ಮಧುಸೂದನ, ತ್ಯಾಗರಾಜು, ವಿಜಯಕುಮಾರ್,ಚಂದ್ರಯ್ಯ,ದೇವರಾಜು ಸೇರಿದಂತೆ ಗ್ರಾಮದ ಮುಖ್ಯಸ್ಥರು  ಹಾಜರಿದ್ದರು.
-----------------------------------------------------------
ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯ ಹಿನ್ನಲೆಯಲ್ಲಿ ವಿದ್ಯುತ್ ಅಭಾವ ತೀವ್ರವಾಗಿದ್ದು ಅನಿಶ್ಚಿತ ವಿದ್ಯುತ್ ನಿಂದಾಗಿ ಹಳ್ಳಿಗಳು ಕತ್ತಲಲ್ಲಿ ಮುಳುಗಿದ ಪರಿಸ್ಥಿತಿಉಂಟಾಗಿದೆಯಲ್ಲದೆ ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ : ಯಗಚಿಹಳ್ಳಿ ಗ್ರಾಪಂ ಸದಸ್ಯ ಮಧುಸೂದನ

--------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...