ವಿಷಯಕ್ಕೆ ಹೋಗಿ

ಧಾರ್ಮಿಕ ಸ್ಥಳಗಳಲ್ಲಿ ಅತಿಥಿ ಗೃಹ ನಿರ್ಮಿಸಲು ರಾಜ್ಯಪಾಲರ ಸಲಹೆ

ಹುಳಿಯಾರು: ರಾಜ್ಯದ ಎಲ್ಲಾ ಪ್ರಮುಖ ದೇವಾಲಯ ಹಾಗೂ ಧಾರ್ಮಿಕ ಕ್ಷೇತ್ರಗಳ ಸಮೀಪ ಅತಿಥಿ ಗೃಹ ನಿರ್ಮಿಸಲು ಸರ್ಕಾರ ಮುಂದಾಗಬೇಕೆಂದು ರಾಜ್ಯಪಾಲ ವಜುಬಾಯಿ ವಾಲಾ ಸಲಹೆ ನೀಡಿದರು.

ಹೋಬಳಿಯ ಬೋರನಕಣಿವೆ ಸೇವಾಚೇತನ ಕೇಂದ್ರದಲ್ಲಿ ಬುಧವಾರ ಸಂಜೆ ನಡೆದ ಸಾಯಿ ಮಂದಿರದ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿ ಪ್ರಪಂಚದಲ್ಲಿ ಸಾಕಷ್ಟು ಧರ್ಮಗಳಿದ್ದು ಎಲ್ಲಾ ಧರ್ಮಗಳ ಸಾರ ಒಂದೇ,ಸತ್ಯವನ್ನು ನುಡಿಯಬೇಕು.ಸೇವೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಹುಳಿಯಾರು ಹೋಬಳಿ ಬೋರನಕಣಿವೆಯ ಸೇವಾಚೇತನ ಕೇಂದ್ರದಲ್ಲಿ ಬುಧವಾರ ಸಂಜೆ ಸಾಯಿ ಮಂದಿರದ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸಮಾರಂಭವನ್ನು ಉದ್ಘಾಟಿಸಿದರು. ಜಿಲ್ಲಾಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಶಾಸಕ ಸಿ.ಬಿ.ಸುರೇಶ್ ಬಾಬು, ಸೇವಾ ಚೇತನದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ.ಕಾರ್ಯದರ್ಶಿ ಬಿ.ವಿಠಲ್ ಇತರರು ಇದ್ದರು. 

ಹನಿಹನಿಯೂ ಸೇರಿ ಒಂದು ನದಿಯಾಗುವಂತೆ ಪ್ರತಿಯೊಬ್ಬ ಮನುಷ್ಯನು ಸೇವೆಯನ್ನು ಮಾಡುತ್ತಾ ಸಂಸ್ಕಾರ ರೂಡಿಸಿಕೊಳ್ಳಬೇಕಕು ಸಾಯಿಬಾಬಾ ರೀತಿಯಲ್ಲಿ ಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನದ ಜಂಜಾಟವನ್ನು ಮರೆತು ಕೇವಲ ತಮ್ಮ ಕುಟಂಬ ಪರಿವಾರವಷ್ಟೆ ಅಲ್ಲದೆ ಸಮಾಜದ ಸೇವೆಯನ್ನು ಮಾಡಬೇಕೆಂದರು.

ಹಿಂದು, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯವನ್ನು ಸಮಾನವಾಗಿ ಕಾಣುವ ಭಾರತೀಯ ಸಂಸ್ಕೃತಿ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ ಎಂದ ಅವರು ಶಾಂತಿಯನ್ನು ಪ್ರತಿಪಾದಿಸಿದವರಲ್ಲಿ ಅನೇಕ ವಿರಕ್ತ ಮಹಾಪುರುಷರಿದ್ದು ಅವರಲ್ಲಿ ಸಾಯಿ ಬಾಬಾರವರನ್ನು ಎಲ್ಲಾ ಧರ್ಮದವರು ಆರಾಧಿಸುತ್ತಾರೆಂದರು. ವಿವೇಕಾನಂದರ ಉಪದೇಶ ಹಾಗೂ ಸಾಯಿಬಾಬಾ ಅವರ ಆದರ್ಶ ಅಳವಡಿಸಿಕೊಳ್ಳಿ ಎಂದರು.


ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ ಶಿರಡಿಗೆ ಹೋಗಲು ಸಾಧ್ಯವಾಗದವರಿಗಾಗಿ ಶಿರಡಿ ಸಾಯಿಯನ್ನೆ ಇಲ್ಲಿ ಸ್ಥಾಪಿಸಿ ನೆಲೆಯೂರುವಂತೆ ಮಾಡಿರುವುದು ಪ್ರಶಂಸನೀಯ ಎಂದರು. ಬೋರನಕಣಿವೆ ತುಂಬಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಸಾಯಿ ಬಾಬಾ ಮಂದಿರದ ಬಳಿ ರೂ.5 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣ ಮಾಡಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ ಸುಂದರ ಪರಿಸರದಲ್ಲಿರುವ ಬೋರನಕಣಿವೆ ಜಲಾಶಯವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರವನ್ನು ಒತ್ತಾಯಿದರು.ಶಾಂತಿ ಮತ್ತು ಹೋರಾಟ ಎರಡೂ ಒಂದೇ ಕಡೆ ಮಾಡಿದ್ದಾರೆ. ಸಾಯಿ ಬಾಬಾ ಶಾಂತಿಯ ಸಂಕೇತವಾದರೆ ಸ್ವಾಮಿ ವಿವೇಕಾನಂದ ಅವರು ಹೋರಾಟದ ಸಂಕೇತವೆಂದರು. ಇಂತಹ ಪ್ರಶಾಂತ ಸ್ಥಳದಲ್ಲಿ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು.


ಸೇವಾ ಚೇತನದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿಶ್ವ ಮಾನವತ್ವದ ಸಂದೇಶವನ್ನು ಹೊಂದಿ ಪ್ರಜ್ಞಾವಿಕಾಸವಾಗುವಂತಹ ವಾತವಾರಣ ಹೊಂದಿರುವ ಈ ಸ್ಥಳದಲ್ಲಿ ರಂಗಚಟುವಟಿಕೆ,ರೈತರ ತರಬೇತಿ, ಆರೋಗ್ಯ ಶಿಬಿರ,ಶಿಲ್ಪಕಲಾ ಶಿಬಿರವನ್ನು ಫೌಂಡೇಷನ್ ನಡೆಸುತ್ತಾ ಬಂದಿದೆ ಎಂದರು.

ರುದ್ರಪ್ಪ ಹನಗವಾಡಿ,ಸಂಸ್ಥೆಯ ಕಾರ್ಯದರ್ಶಿ ವಿಠಲ್ ಉಪಸ್ಥಿತರಿದ್ದರು. 

ಸಮಾರಂಭಕ್ಕೂ ಮುನ್ನ ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್ ಭಕ್ತಿ ಗೀತೆಗಳನ್ನು ಹಾಡಿದರು. ಗ್ರಾಮೀಣ ಕಲಾವಿದರಿಂದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ನಡೆಯಿತು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.