ವಿಷಯಕ್ಕೆ ಹೋಗಿ

ಬಾಲಕಿ ಮೇಲೆ ಅತ್ಯಾಚಾರ :ಆರೋಪಿ ದಸ್ತಗಿರಿ

ತಪ್ಪು ಮಾಹಿತಿಯಿಂದ ಪೋಲಿಸ್ ಠಾಣೆ ಮುಂದೆ ರಸ್ತೆ ತಡೆ
-------------------------------
ಹುಳಿಯಾರು:ಪಟ್ಟಣದ ಶಂಕರಪುರ ಬಡಾವಣೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು(೧೫) ಅಪಹರಿಸಿ ಶಾಲಾ ಆವರಣದಲ್ಲಿ ಅತ್ಯಾಚಾರ ಎಸಗಿದ ಪ್ರಕರಣ ಶನಿವಾರ ರಾತ್ರಿ ಜರುಗಿದ್ದು ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ.
               
ಬಾಲಕಿಯ ಮೇಲೆ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಖಂಡಿಸಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.
ತುರುವೆಕೆರೆಯಲ್ಲಿ ವಸತಿ ಶಾಲೆಯಲ್ಲಿ ಎಂಟನೇ ಕ್ಲಾಸ್ ವರೆಗೆ ಓದಿ ಸಧ್ಯ ಶಾಲೆ ಬಿಟ್ಟು ಮನೆಯಲ್ಲಿದ್ದ ಈಕೆ ಶನಿವಾರ ರಾತ್ರಿ ೮.೩೦ರ ಸಮಯದಲ್ಲಿ ಬಹಿರ್ದೆಸೆಗೆಂದು ಮನೆಯ ಹಿಂದಿನ ಕೆರೆ ಅಂಗಳಕ್ಕೆ ಹೋದ ಸಂದರ್ಭದಲ್ಲಿ ಅದೇ ಬಡಾವಣೆಯ ಯುವಕನೊಬ್ಬ ಆಕೆಯ ಬಾಯಿಗೆ ಬಟ್ಟೆ ತುರುಕಿ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.ಒಂದು ಗಂಟೆಯ ನಂತರ ಹುಡುಗಿ ಕಾಣುತ್ತಿಲ್ಲವೆಂದು ಪೋಷಕರು ಹುಡುಕಾಡಿದರಾದರೂ ಪತ್ತೆಯಾಗಿರಲಿಲ್ಲ.ರಾತ್ರಿ ಸುಮಾರು ಎರಡು ಗಂಟೆಯ ಸಮಯದಲ್ಲಿ ಆಕೆಯನ್ನು ಮನೆಯ ಹಿಂಭಾಗ ಬಿಟ್ಟುಹೋಗಿದ್ದು ಅರೆಪ್ರಜ್ಞಾವಸ್ಥೆಯಲ್ಲಿದ್ದ ಈಕೆಯನ್ನು ಆಗಲೆ ವೈದ್ಯರ ಬಳಿ ಕರೆದೊಯ್ದರಾದರೂ ಯಾರೊಬ್ಬ ವೈದ್ಯರು ದೊರೆಯದ ಕಾರಣ ಬೆಳಗಿನ ಜಾವದವರೆಗೂ ಮನೆಯಲ್ಲಿಯೆ ಕಾದು ನಂತರ ೭ ಗಂಟೆ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು.
                 
ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಹುಳಿಯಾರು ಠಾಣೆಯ ಮುಂದೆ ಜಮಾಯಿಸಿರುವ ಜನ
 ಅದೇ ಬಡಾವಣೆಯ ತಾಲ್ಲೂಕ್ ಪಂಚಾಯ್ತಿ ಸದಸ್ಯ ಹೆಚ್.ಎನ್.ಕುಮಾರ್ ಹಾಗೂ ಗ್ರಾಪಂ ಸದಸ್ಯ ರಾಘವೇಂದ್ರ ಹುಡುಗಿಯ ನೆರವಿಗೆ ಧಾವಿಸಿ ಪೋಲಿಸರಿಗೆ ಮಾಹಿತಿ ನೀಡಿದರು.ಪಿಎಸೈ ಪ್ರವೀಣ್ ಕುಮಾರ್ ,ಎ ಎಸೈ ಶಿವಯ್ಯ,ಎ ಎಸೈ ರಾಜಣ್ಣ ಕೂಡಲೆ ಕಾರ್ಯಪ್ರವೃತರಾಗಿ ಪಕ್ಕದ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿದ್ದ ಆರೋಪಿಯನ್ನು ವಶಕ್ಕೆ ಪಡೆದರು.ಆರೋಪಿ ದಾದಾಪೀರ್ (೨೨) ಉರ್ಫ್ ಜಂಗ್ಲಿ ಇಟ್ಟಿಗೆ ಲಾರಿಗಳಲ್ಲಿ ಲೋಡಿಂಗ್ ಕೆಲಸ ಮಾಡುತ್ತಿದ್ದು ಈತನು ಕೂಡ ಶಂಕರಪುರದ ಬಡಾವಣೆಯ ವಾಸಿ ಎನ್ನಲಾಗಿದೆ.
                  ತೀರಾ ನಿತ್ರಾಣವಾಗಿದ್ದ ಬಾಲಕಿಯನ್ನು ಹೆಚ್ಚಿನ ಪರೀಕ್ಷೆ ಹಾಗೂ ಚಿಕಿತ್ಸೆಗಾಗಿ ತಾಲ್ಲೂಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆರೋಪಿ ಯುವಕನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದು ಈತನ ಮೇಲೆ ಪೋಕ್ಸೋ ಕಾಯ್ದೆ( ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ),ಅನುಸೂಚಿತ ಜಾತಿ ಬುಡಕಟ್ಟು ಪ್ರತಿಬಂಧಕ ನಿಬಂಧನೆ ಕಾಯ್ದೆ,ಐಪಿಸಿ ೩೬೬ ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
-----------------
ಅಪ ಪ್ರಚಾರ,ರಸ್ತೆ ತಡೆ : ಇದೆಲ್ಲದರ ನಡುವೆಯೆ ಬಾಲಕಿ ಮೇಲೆ ಗುಂಪು ಅತ್ಯಾಚಾರ ನಡೆದಿದೆ ಎಂಬ ಗಾಳಿಸುದ್ದಿ ಹರಡಿ ಅತ್ಯಾಚಾರಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಠಾಣೆಯ ಮುಂದೆ ಸಾಕಷ್ಟು ಜನ ಜಮಾಯಿಸಿ ರಸ್ತೆ ತಡೆ ನಡೆಸಿದ ಘಟನೆ ಕೂಡ ಜರುಗಿತು.ಹಬ್ಬಕ್ಕೆಂದು ಬಂದ್ದಿದ್ದ ಯವಕರು ಗುಂಪಾಗಿ ಆಗಮಿಸಿ ಪೋಲಿಸರು ಕೇವಲ ಒಬ್ಬನ್ನನ್ನು ಮಾತ್ರ ಬಂಧಿಸಿದ್ದು ಉಳಿದ ನಾಲ್ವರನ್ನು ಕೂಡಲೆ ಬಂಧಿಸಬೇಕು ,ಯಾರದೇ ಒತ್ತಡಕ್ಕೆ ಮಣಿಯಬಾರದು ಎಂದು ಪೋಲಿಸರ ವಿರುದ್ಧ ಹರಿಹಾಯ್ದರು.
                        ಪ್ರಕರಣ ತೀವ್ರ ಸ್ವರೂಪ ಪಡೆಯುವ ಸೂಚನೆ ದೊರೆಯುತ್ತಿದ್ದಂತೆ ತಿಪಟೂರು ಡಿವೈಎಸ್ಪಿ ರವಿಕುಮಾರ್ ,ವೃತ್ತ ನಿರೀಕ್ಷಕ ಮಾರಪ್ಪ ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.ಗುಂಪು ಅತ್ಯಾಚಾರದ ಗಾಳಿಸುದ್ದಿ ನಂಬದೆ ತನಿಖೆಗೆ ಸಹಕರಿಸುವಂತೆ ಮುಖಂಡರಲ್ಲಿ ಮನವಿ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.ಹೆಚ್ಚುವರಿ ಪೋಲಿಸ್ ಆಧೀಕ್ಷಕ ಮಂಜುನಾಥ್ ಕೂಡ ಆಗಮಿಸಿ ಮಾರ್ಗದರ್ಶನ ನೀಡಿದರು.
--------------------

ಮಾಜಿ ಜಿಪಂ ಅಧ್ಯಕ್ಷ ರಘುನಾಥ್, ಗ್ರಾಪಂ ಉಪಾಧ್ಯಕ್ಷ ಗಣೇಶ್,ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಬಡಗಿ ರಾಮಣ್ಣ, ಬಳೆಕಟ್ಟೆ ರಾಮಣ್ಣ,ದುರ್ಗಾ ಪರಮೇಶ್ವರಿ ದೇವಸ್ಥಾನ ಕನ್ವೀನರ್ ಹು.ಕೃ.ವಿಶ್ವನಾಥ್,ಗೋಪ್ಯಾನಾಯ್ಕ್ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...