ವಿಷಯಕ್ಕೆ ಹೋಗಿ

ಕಂಚೀಪುರದಲ್ಲಿ ಕಂಚೀವರದರಾಜ ಸ್ವಾಮಿಯವರ ರಥೋತ್ಸವ

ಗುರುವಾರ ಮುಂಜಾನೆ 1.55 ರಿಂದ 3.38ರವರೆಗೆ ಕಂಚೀಪುರದಲ್ಲಿ ಕಂಚೀವರದರಾಜ ಸ್ವಾಮಿಯವರ ರಥೋತ್ಸವ
-------------------------------------------
ದುಡ್ಡಿನ ತೇರು ಎಂದೆ ಪ್ರಸಿದ್ಧಿ :ಹೊನ್ನಿನ ತೇರಿಗೆ ಕ್ಷಣಗಣನೆ
----------------------
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಂಚೀಪುರದಲ್ಲಿ ಪುರಾಣಪ್ರಸಿದ್ಧ ಶ್ರೀ ಕಂಚಿ ವರದರಾಜ ಸ್ವಾಮಿಯವರ ರಥೋತ್ಸವಕ್ಕೆ ಕ್ಷಣಗಣನೆ ನಡೆದಿದ್ದು ಗುರುವಾರ ಮುಂಜಾನೆ 1.55 ರಿಂದ 3.36ರವರೆಗೆ ಸ್ವಾಮಿಯವರ ರಥೋತ್ಸವ ಅಸಂಖ್ಯಾತ ಭಕ್ತಾಧಿಗಳ ಸಮ್ಮುಖದಲ್ಲಿ ಜರುಗಲಿದೆ.ಜಾತ್ರಾ ಮಹೋತ್ಸವ ಏ19 ರಿಂದಲೇ ಪ್ರಾರಂಭವಾಗಿದ್ದು ಏ.30 ರವರೆಗೆ ನಡೆಯಲಿದ್ದು ಪ್ರಯುಕ್ತ ನಿತ್ಯ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ವಾಮಿಯವರ ರಥೋತ್ಸವ ರಾಜ್ಯದಲ್ಲಿಯೇ ವಿಶಿಷ್ಟವಾಗಿದ್ದು ಹೊನ್ನುಮಳೆ ರಥೋತ್ಸವ ಎಂದು ಕರೆಯಲಾಗುತ್ತದೆ.ಇತರೆ ರಥೋತ್ಸವಕ್ಕಿಂತ ಇದು ವಿಭಿನ್ನವಾಗಿದ್ದು ಎಲ್ಲಡೆ ನಡೆಯುವ ರಥೋತ್ಸವದಲ್ಲಿ ಸಾಮಾನ್ಯವಾಗಿ ಭಕ್ತರು ರಥಕ್ಕೆ ಬಾಳೆ ಹಣ್ಣು ತೂರುವ ಮೂಲಕ ಭಕ್ತಿ ಅರ್ಪಿಸುವುದು ವಾಡಿಕೆಯಾಗಿದ್ದರೆ, ಇಲ್ಲಿ ನಡೆಯುವ ರಥೋತ್ಸವದಲ್ಲಿ ಭಕ್ತರು ದೇವರಿಗೆ ದುಡ್ಡನ್ನು ತೂರುವುದರ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸುವುದು ಸಂಪ್ರದಾಯವಾಗಿದೆ.


ಶ್ರೀಕಂಚೀವರದರಾಜ ಸ್ವಾಮಿಯವರಿಗೆ ಭಕ್ತರು ತಮ್ಮ ಇಷ್ಟಾನುಸಾರ ಹರಕೆ ಕಟ್ಟಿ ಕಾಸನ್ನು ತೂರಿದರೆ ಸರ್ವಕಷ್ಟಗಳು ಪರಿಹಾರವಾಗಿ ಸುಖಶಾಂತಿ ನೆಮ್ಮದಿ ದೂರಕಿ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.

ವರದರಾಜ ಸ್ವಾಮಿಯು ಬೇಡಿದ ಭಕ್ತರಿಗೆ ವರವನ್ನು ದಯಪಾಲಿಸುವ ನಿಜದೈವವೆಂಬ ನಂಬಿಕೆ ಮನೆ ಮಾಡಿದ್ದು ಹಾಗಾಗಿ ತಮ್ಮ ಇಷ್ಟಾರ್ಥಸಿದ್ಧಿಯಾದ ಭಕ್ತರು ,ಹರಕೆ ಮಾಡಿಕೊಂಡ ಭಕ್ತರು ರಥೋತ್ಸವದಂದು ಶ್ರಿ ಸ್ವಾಮಿಯವರಿಗೆ 100 ರೂಪಾಯಿಯಿಂದ ಹಿಡಿದು ಲಕ್ಷದವರೆಗೆ ಚಿಲ್ಲರೆ ಹಾಗೂ ನೋಟನ್ನು ತೂರುವುದು ಈ ಜಾತ್ರೆಯ ವಿಶೇಷಣವಾಗಿದೆ.

ಕಾರ್ಯಕ್ರಮ: ಏ.27ರಂದು ಕಂಚೀಪುರ ಗ್ರಾಮದಲ್ಲಿ ಸೇವೆ ಸ್ವೀಕರಿಸಿ ರಾತ್ರಿ ಚಿಕ್ಕಬ್ಯಾಲದಕೆರೆ ಕರಿಯಮ್ಮ ದೇವಿಯ ಆಗಮನದ ನಂತರ ಕೂಡುಭೇಟಿ ನಡೆಯುವುದು.

ಏ 28ರ ಗುರುವಾರ ಮುಂಜಾನೆ 1.55 ರಿಂದ 3.36ರವರೆಗೆ ಶ್ರೀಸ್ವಾಮಿಯವರ ಹೊನ್ನಮಳೆ ಸುರಿಯುವ ರಥೋತ್ಸವ ನಡೆಯಲಿದೆ.ನಂತರ ಕಿಟ್ಟದಾಳ್ ಗ್ರಾಮಸ್ಥರಿಂದ ಹಾಲುಪಲ್ಲಕ್ಕಿ ಉತ್ಸವ ನಡೆಯಲಿದೆ.

ಏ.29ರ ಶುಕ್ರವಾರದಂದು ಕಂಕಣ ವಿಸರ್ಜನೆ,ಅವಭೃತ ಸ್ನಾನ,ಸಂಜೆ ಅಹಲ್ಯನಾಥ ದೇವಾಲಯದ ಬಳಿ ಸರ್ಪೋತ್ಸವ,ಪುಷ್ಪೋತ್ಸವ ಹಾಗೂ ಸಿಂಹವಾಹನೋತ್ಸವ ನಡೆಯಲಿದೆ.

              ಏ.30ರ ಶನಿವಾರದಂದು ಶ್ರೀವರದಯ್ಯನ ಗುರು ಶ್ರೀದಶರಥರಾಮೇಶ್ವರ ಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವದೊಂದಿಗೆ ಶ್ರೀಸ್ವಾಮಿಯವರ ಹಾಗೂ ಕರಿಯಮ್ಮದೇವಿಯವರ ಪುರ ಪ್ರವೇಶ,ಮಂಡೆ ಉತ್ಸವ,ಅಶ್ವವಾಹನೋತ್ಸವ ಕೂಡುಭೇಟಿ, ಮದಲಾಸಿ ಪೂಜೆಗಳಿರುತ್ತವೆ.

         ಮರುದಿನ ಬೆಳಗ್ಗೆ ಶ್ರೀಕರಿಯಮ್ಮ ದೇವಿಯವರು ಪುರದ ಪ್ರತಿ ಮನೆ ಮನೆಗೂ ತೆರಳಿ ಪೂಜೆ ಮಡಲಕ್ಕಿ ಸ್ವೀಕರಿಸುವುದರೊಂದಿಗೆ ಶ್ರೀಸ್ವಾಮಿಯವರ ಜಾತ್ರಾ ಕೈಕರ್ಯಗಳು ಮುಕ್ತಾಯವಾಗುತ್ತವೆ.
---------------------------------------------


ಹರಕೆ ಕಾಸನು ತೂರಲು ಬನ್ನಿ...ಸ್ವಾಮಿಯ ಕೃಪೆಗೆ ಪಾತ್ರರಾಗಲು ಬನ್ನಿ. . .ಹೊನ್ನಿನ ತೇರಲಿ ಸಾಗುವ ಉತ್ಸವವ ನೋಡಲು ಬನ್ನಿ...ಬನ್ನಿ ನಮ್ಮ ಶ್ರೀವರದನ ಗುಡಿಗೆ..ಕೆ.ಎಸ್.ವಿನಯ್.ಕಂಚೀಪುರ...

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.