ವಿಷಯಕ್ಕೆ ಹೋಗಿ

ಶ್ರದ್ದಾಭಕ್ತಿಯಿಂದ ನಡೆದ ದುರ್ಗಮ್ಮನ ಕಳಸ

ಕಳಸಹೊತ್ತು ಹರಕೆ ತೀರಿಸಿದ ಕುಮಾರಿಯರು

ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿಯ ಕಳಸೋತ್ಸವಕ್ಕೆ ಆಗಮಿಸಿದ್ದ ವಿವಿಧ ಗ್ರಾಮದೇವತೆಗಳು

-------------------------------
ಹುಳಿಯಾರು ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿದೇವಿಯ ೪೬ನೇ ವರ್ಷದ ಜಾತ್ರಾಮಹೋತ್ಸವದ ಅಂಗವಾಗಿ ಗುರುವಾರ ನಡೆದ ಕಳಸ ಕಾರ್ಯಕ್ರಮದಲ್ಲಿ ಇನ್ನೂರೈವತ್ತಕ್ಕೂ ಹೆಚ್ಚು ಹೆಣ್ಣು ಮಕ್ಕಳು ಕಳಸ ಹೊತ್ತು ಹರಕೆ ತೀರಿಸಿದರು.
ಬುಧವಾರ ರಾತ್ರಿ ದೇವರುಗಳ ಕೂಡುಭೇಟಿ ನಡೆದು ದುರ್ಗಮ್ಮನವರೊಂದಿಗೆ ಹುಳಿಯಾರಮ್ಮ, ತಿರುಮಲಾಪುರ ಹಾಗೂ ಹೊಸಹಳ್ಳಿಯ ಕೊಲ್ಲಾಪುರದಮ್ಮ, ಹೊಸಹಳ್ಳಿಪಾಳ್ಯದ ಅಂತರಘಟ್ಟೆಅಮ್ಮ, ಕೆಂಚಮ್ಮ ನವರೊಂದಿಗೆ ಕೆರೆಯಲ್ಲಿನ ಬಾವಿಹತ್ತಿರ ಗದ್ದುಗೆ ಮಾಡಲಾಗಿತ್ತು. ಮುಂಜಾನೆ ಪಟ್ಟದಕಳಸ ಸ್ಥಾಪನೆ ಹಾಗೂ ಗಂಗಾಸ್ನಾನ ನಡೆಸಲಾಯಿತು.ಮಹಾಮಂಗಳಾರತಿ ನಡೆದು ಪಲ್ಲಾರ ವಿತರಿಸಿದ ನಂತರ ಸರ್ವಾಲಂಕೃತ ದುರ್ಗಮ್ಮನವರೊಂದಿಗೆ ಪಟ್ಟದಕಳಸ ಸಮೇತ ನಡೆಮುಡಿ ಪ್ರಾರಂಭಗೊಂಡಿತು. ಬೆಳಗಿನ ಜಾವದಿಂದಲೇ ಕೆರೆ ಬಾವಿ ಸಮೀಪ ಹೆಣ್ಣುಮಕ್ಕಳೊಂದಿಗೆ ಆಗಮಿಸಿದ್ದ ಪೋಷಕರು ಪಟ್ಟದ ಕಳಸಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.


ಊರಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಹಾಗೂ ಇತರೆ ಕಾರಣಗಳಿಗೆ ಹರಕೆ ಹೊತ್ತವರು ತಮ್ಮ ಹೆಣ್ಣು ಮಕ್ಕಳಿಗೆ ಕಳಸ ಹೊರಿಸುವುದು ಇಲ್ಲಿನ ಸಂಪ್ರದಾಯವಾಗಿದ್ದು ಅದರಂತೆ ಕಳಸಹೊತ್ತ ಹೆಣ್ಣುಮಕ್ಕಳು ನಡೆಮುಡಿಯಲ್ಲಿ ದೇವಿಯ ಮೂಲಸ್ಥಾನದತ್ತ ಹೆಜ್ಜೆ ಹಾಕಿದರು. ಕೆರೆಯ ಬಾವಿ ಹತ್ತಿರದಿಂದ ಪ್ರಾರಂಭವಾದ ನಡೆಮುಡಿ ವಿವಿಧ ದೇವರುಗಳ ಮದಾಸಿ ಕುಣಿತದೊಂದಿಗೆ ರಂಗನಾಥಸ್ವಾಮಿ ರಸ್ತೆ, ಬ್ರಾಹ್ಮಣರ ಬೀದಿ,ಆಚಾರ್ ಬೀದಿ ಮಾರ್ಗದಲ್ಲಿ ಸಾಗಿ ದುರ್ಗಮ್ಮನ ಮೂಲಸ್ಥಾನ ತಲುಪಿ, ದೇವಾಲಯವನ್ನು ಪ್ರದಕ್ಷಿಣೆ ಹಾಕಿದ ನಂತರ ಕಳಸಗಳನ್ನು ವಿಸರ್ಜಿಸಲಾಯಿತು.

ಹುಳಿಯಾರು,ಲಿಂಗಪ್ಪನಪಾಳ್ಯ,ಕೋಡಿಪಾಳ್ಯ,ಕಾಮಶೆಟ್ಟಿಪಾಳ್ಯ,ಸೋಮಜ್ಜನಪಾಳ್ಯ ,ಕೇಶವಾಪುರ ಸೇರಿದಂತೆ ಇನ್ನಿತರ ಗ್ರಾಮಗಳ ೨೫೦ಕ್ಕೂ ಹೆಚ್ಚಿನ ಹೆಣ್ಣುಮಕ್ಕಳು ಕಳಸ ಹೊತ್ತು ತಮ್ಮ ಹರಕೆ ತೀರಿಸಿದರು. ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳು ಕಳಸೋತ್ಸವಕ್ಕೆ ಮೆರಗು ತಂದರು. ಕಳಸ ಹೊತ್ತ ಹೆಣ್ಣುಮಕ್ಕಳಿಗೆ ಪೋಲೀಸ್ ಇಲಾಖೆವತಿಯಿಂದ ಉಪಹಾರ ವ್ಯವಸ್ಥೆ ಮಾಡಿಸಲಾಗಿತ್ತು. ಕನಕ ಯುವ ವೇದಿಕೆವತಿಯಿಂದ ಪಾನಕವಿತರಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...