ವಿಷಯಕ್ಕೆ ಹೋಗಿ

ಶ್ರದ್ದಾಭಕ್ತಿಯಿಂದ ನಡೆದ ದುರ್ಗಮ್ಮನ ಕಳಸ

ಕಳಸಹೊತ್ತು ಹರಕೆ ತೀರಿಸಿದ ಕುಮಾರಿಯರು

ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿಯ ಕಳಸೋತ್ಸವಕ್ಕೆ ಆಗಮಿಸಿದ್ದ ವಿವಿಧ ಗ್ರಾಮದೇವತೆಗಳು

-------------------------------
ಹುಳಿಯಾರು ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿದೇವಿಯ ೪೬ನೇ ವರ್ಷದ ಜಾತ್ರಾಮಹೋತ್ಸವದ ಅಂಗವಾಗಿ ಗುರುವಾರ ನಡೆದ ಕಳಸ ಕಾರ್ಯಕ್ರಮದಲ್ಲಿ ಇನ್ನೂರೈವತ್ತಕ್ಕೂ ಹೆಚ್ಚು ಹೆಣ್ಣು ಮಕ್ಕಳು ಕಳಸ ಹೊತ್ತು ಹರಕೆ ತೀರಿಸಿದರು.
ಬುಧವಾರ ರಾತ್ರಿ ದೇವರುಗಳ ಕೂಡುಭೇಟಿ ನಡೆದು ದುರ್ಗಮ್ಮನವರೊಂದಿಗೆ ಹುಳಿಯಾರಮ್ಮ, ತಿರುಮಲಾಪುರ ಹಾಗೂ ಹೊಸಹಳ್ಳಿಯ ಕೊಲ್ಲಾಪುರದಮ್ಮ, ಹೊಸಹಳ್ಳಿಪಾಳ್ಯದ ಅಂತರಘಟ್ಟೆಅಮ್ಮ, ಕೆಂಚಮ್ಮ ನವರೊಂದಿಗೆ ಕೆರೆಯಲ್ಲಿನ ಬಾವಿಹತ್ತಿರ ಗದ್ದುಗೆ ಮಾಡಲಾಗಿತ್ತು. ಮುಂಜಾನೆ ಪಟ್ಟದಕಳಸ ಸ್ಥಾಪನೆ ಹಾಗೂ ಗಂಗಾಸ್ನಾನ ನಡೆಸಲಾಯಿತು.ಮಹಾಮಂಗಳಾರತಿ ನಡೆದು ಪಲ್ಲಾರ ವಿತರಿಸಿದ ನಂತರ ಸರ್ವಾಲಂಕೃತ ದುರ್ಗಮ್ಮನವರೊಂದಿಗೆ ಪಟ್ಟದಕಳಸ ಸಮೇತ ನಡೆಮುಡಿ ಪ್ರಾರಂಭಗೊಂಡಿತು. ಬೆಳಗಿನ ಜಾವದಿಂದಲೇ ಕೆರೆ ಬಾವಿ ಸಮೀಪ ಹೆಣ್ಣುಮಕ್ಕಳೊಂದಿಗೆ ಆಗಮಿಸಿದ್ದ ಪೋಷಕರು ಪಟ್ಟದ ಕಳಸಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.


ಊರಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಹಾಗೂ ಇತರೆ ಕಾರಣಗಳಿಗೆ ಹರಕೆ ಹೊತ್ತವರು ತಮ್ಮ ಹೆಣ್ಣು ಮಕ್ಕಳಿಗೆ ಕಳಸ ಹೊರಿಸುವುದು ಇಲ್ಲಿನ ಸಂಪ್ರದಾಯವಾಗಿದ್ದು ಅದರಂತೆ ಕಳಸಹೊತ್ತ ಹೆಣ್ಣುಮಕ್ಕಳು ನಡೆಮುಡಿಯಲ್ಲಿ ದೇವಿಯ ಮೂಲಸ್ಥಾನದತ್ತ ಹೆಜ್ಜೆ ಹಾಕಿದರು. ಕೆರೆಯ ಬಾವಿ ಹತ್ತಿರದಿಂದ ಪ್ರಾರಂಭವಾದ ನಡೆಮುಡಿ ವಿವಿಧ ದೇವರುಗಳ ಮದಾಸಿ ಕುಣಿತದೊಂದಿಗೆ ರಂಗನಾಥಸ್ವಾಮಿ ರಸ್ತೆ, ಬ್ರಾಹ್ಮಣರ ಬೀದಿ,ಆಚಾರ್ ಬೀದಿ ಮಾರ್ಗದಲ್ಲಿ ಸಾಗಿ ದುರ್ಗಮ್ಮನ ಮೂಲಸ್ಥಾನ ತಲುಪಿ, ದೇವಾಲಯವನ್ನು ಪ್ರದಕ್ಷಿಣೆ ಹಾಕಿದ ನಂತರ ಕಳಸಗಳನ್ನು ವಿಸರ್ಜಿಸಲಾಯಿತು.

ಹುಳಿಯಾರು,ಲಿಂಗಪ್ಪನಪಾಳ್ಯ,ಕೋಡಿಪಾಳ್ಯ,ಕಾಮಶೆಟ್ಟಿಪಾಳ್ಯ,ಸೋಮಜ್ಜನಪಾಳ್ಯ ,ಕೇಶವಾಪುರ ಸೇರಿದಂತೆ ಇನ್ನಿತರ ಗ್ರಾಮಗಳ ೨೫೦ಕ್ಕೂ ಹೆಚ್ಚಿನ ಹೆಣ್ಣುಮಕ್ಕಳು ಕಳಸ ಹೊತ್ತು ತಮ್ಮ ಹರಕೆ ತೀರಿಸಿದರು. ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳು ಕಳಸೋತ್ಸವಕ್ಕೆ ಮೆರಗು ತಂದರು. ಕಳಸ ಹೊತ್ತ ಹೆಣ್ಣುಮಕ್ಕಳಿಗೆ ಪೋಲೀಸ್ ಇಲಾಖೆವತಿಯಿಂದ ಉಪಹಾರ ವ್ಯವಸ್ಥೆ ಮಾಡಿಸಲಾಗಿತ್ತು. ಕನಕ ಯುವ ವೇದಿಕೆವತಿಯಿಂದ ಪಾನಕವಿತರಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.