ವಿಷಯಕ್ಕೆ ಹೋಗಿ

ಶ್ರದ್ದಾಭಕ್ತಿಯಿಂದ ನಡೆದ ದುರ್ಗಮ್ಮನ ಕಳಸ

ಕಳಸಹೊತ್ತು ಹರಕೆ ತೀರಿಸಿದ ಕುಮಾರಿಯರು

ಹುಳಿಯಾರಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿಯ ಕಳಸೋತ್ಸವಕ್ಕೆ ಆಗಮಿಸಿದ್ದ ವಿವಿಧ ಗ್ರಾಮದೇವತೆಗಳು

-------------------------------
ಹುಳಿಯಾರು ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿದೇವಿಯ ೪೬ನೇ ವರ್ಷದ ಜಾತ್ರಾಮಹೋತ್ಸವದ ಅಂಗವಾಗಿ ಗುರುವಾರ ನಡೆದ ಕಳಸ ಕಾರ್ಯಕ್ರಮದಲ್ಲಿ ಇನ್ನೂರೈವತ್ತಕ್ಕೂ ಹೆಚ್ಚು ಹೆಣ್ಣು ಮಕ್ಕಳು ಕಳಸ ಹೊತ್ತು ಹರಕೆ ತೀರಿಸಿದರು.
ಬುಧವಾರ ರಾತ್ರಿ ದೇವರುಗಳ ಕೂಡುಭೇಟಿ ನಡೆದು ದುರ್ಗಮ್ಮನವರೊಂದಿಗೆ ಹುಳಿಯಾರಮ್ಮ, ತಿರುಮಲಾಪುರ ಹಾಗೂ ಹೊಸಹಳ್ಳಿಯ ಕೊಲ್ಲಾಪುರದಮ್ಮ, ಹೊಸಹಳ್ಳಿಪಾಳ್ಯದ ಅಂತರಘಟ್ಟೆಅಮ್ಮ, ಕೆಂಚಮ್ಮ ನವರೊಂದಿಗೆ ಕೆರೆಯಲ್ಲಿನ ಬಾವಿಹತ್ತಿರ ಗದ್ದುಗೆ ಮಾಡಲಾಗಿತ್ತು. ಮುಂಜಾನೆ ಪಟ್ಟದಕಳಸ ಸ್ಥಾಪನೆ ಹಾಗೂ ಗಂಗಾಸ್ನಾನ ನಡೆಸಲಾಯಿತು.ಮಹಾಮಂಗಳಾರತಿ ನಡೆದು ಪಲ್ಲಾರ ವಿತರಿಸಿದ ನಂತರ ಸರ್ವಾಲಂಕೃತ ದುರ್ಗಮ್ಮನವರೊಂದಿಗೆ ಪಟ್ಟದಕಳಸ ಸಮೇತ ನಡೆಮುಡಿ ಪ್ರಾರಂಭಗೊಂಡಿತು. ಬೆಳಗಿನ ಜಾವದಿಂದಲೇ ಕೆರೆ ಬಾವಿ ಸಮೀಪ ಹೆಣ್ಣುಮಕ್ಕಳೊಂದಿಗೆ ಆಗಮಿಸಿದ್ದ ಪೋಷಕರು ಪಟ್ಟದ ಕಳಸಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.


ಊರಿನಲ್ಲಿ ಹುಟ್ಟಿದ ಹೆಣ್ಣು ಮಕ್ಕಳು ಹಾಗೂ ಇತರೆ ಕಾರಣಗಳಿಗೆ ಹರಕೆ ಹೊತ್ತವರು ತಮ್ಮ ಹೆಣ್ಣು ಮಕ್ಕಳಿಗೆ ಕಳಸ ಹೊರಿಸುವುದು ಇಲ್ಲಿನ ಸಂಪ್ರದಾಯವಾಗಿದ್ದು ಅದರಂತೆ ಕಳಸಹೊತ್ತ ಹೆಣ್ಣುಮಕ್ಕಳು ನಡೆಮುಡಿಯಲ್ಲಿ ದೇವಿಯ ಮೂಲಸ್ಥಾನದತ್ತ ಹೆಜ್ಜೆ ಹಾಕಿದರು. ಕೆರೆಯ ಬಾವಿ ಹತ್ತಿರದಿಂದ ಪ್ರಾರಂಭವಾದ ನಡೆಮುಡಿ ವಿವಿಧ ದೇವರುಗಳ ಮದಾಸಿ ಕುಣಿತದೊಂದಿಗೆ ರಂಗನಾಥಸ್ವಾಮಿ ರಸ್ತೆ, ಬ್ರಾಹ್ಮಣರ ಬೀದಿ,ಆಚಾರ್ ಬೀದಿ ಮಾರ್ಗದಲ್ಲಿ ಸಾಗಿ ದುರ್ಗಮ್ಮನ ಮೂಲಸ್ಥಾನ ತಲುಪಿ, ದೇವಾಲಯವನ್ನು ಪ್ರದಕ್ಷಿಣೆ ಹಾಕಿದ ನಂತರ ಕಳಸಗಳನ್ನು ವಿಸರ್ಜಿಸಲಾಯಿತು.

ಹುಳಿಯಾರು,ಲಿಂಗಪ್ಪನಪಾಳ್ಯ,ಕೋಡಿಪಾಳ್ಯ,ಕಾಮಶೆಟ್ಟಿಪಾಳ್ಯ,ಸೋಮಜ್ಜನಪಾಳ್ಯ ,ಕೇಶವಾಪುರ ಸೇರಿದಂತೆ ಇನ್ನಿತರ ಗ್ರಾಮಗಳ ೨೫೦ಕ್ಕೂ ಹೆಚ್ಚಿನ ಹೆಣ್ಣುಮಕ್ಕಳು ಕಳಸ ಹೊತ್ತು ತಮ್ಮ ಹರಕೆ ತೀರಿಸಿದರು. ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳು ಕಳಸೋತ್ಸವಕ್ಕೆ ಮೆರಗು ತಂದರು. ಕಳಸ ಹೊತ್ತ ಹೆಣ್ಣುಮಕ್ಕಳಿಗೆ ಪೋಲೀಸ್ ಇಲಾಖೆವತಿಯಿಂದ ಉಪಹಾರ ವ್ಯವಸ್ಥೆ ಮಾಡಿಸಲಾಗಿತ್ತು. ಕನಕ ಯುವ ವೇದಿಕೆವತಿಯಿಂದ ಪಾನಕವಿತರಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...