ವಿಷಯಕ್ಕೆ ಹೋಗಿ

ಶ್ರದ್ಧಾಭಕ್ತಿಯಿಂದ ನಡೆದ ಹೊಸಕೆರೆ ಉಡುಸಲ್ಲಮ್ಮ ದೇವಿ ಅಗ್ನಿ ಕೊಂಡೋತ್ಸವ

ಹುಳಿಯಾರು:ಸಮೀಪದ ಹಂದನಕೆರೆ ಹೋಬಳಿಯ ಹೊಸಕೆರೆಯಲ್ಲಿ ಪ್ರತಿ ವರ್ಷದಂತೆ ಗ್ರಾಮದೇವತೆ ಉಡುಸಲ್ಲಮ್ಮ ದೇವಿಯ ಅಗ್ನಿ ಕೊಂಡೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.


       ಕೊಂಡೋತ್ಸವದ ಅಂಗವಾಗಿ ಹೊಸಕೆರೆಯಮ್ಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.ಕೆರೆ ಅಂಗಳದಲ್ಲಿ ಉಡುಸಲ್ಲಮ್ಮದೇವಿಯೊಂದಿಗೆ ಬೆಳಗುಲಿ ರಂಗನಾಥ ಸ್ವಾಮಿ,ಕೆಂಚರಾಯಸ್ವಾಮಿ ,ಜಾಲಿಮರದಮ್ಮ,ಹೊಸಕೆರೆಯಮ್ಮನ ಪರಿವಾರ ದೇವತೆಗಳಾದ ಪಾತಪ್ಪ,ವೀರಣ್ಣ,ಕೆಂಪಣ್ಣ ಸ್ವಾಮಿಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಕಳಸ ಹೊತ್ತ ಬಾಲಕಿಯ ಪೂಜೆ ಸಲ್ಲಿಸಿದ ನಂತರ ಆಗಮಿಸಿದ್ದ ದೇವರುಗಳೊಂದಿಗೆ ನಡೆಮುಡಿಯಲ್ಲಿ ಎಲ್ಲಾ ದೇವರುಗಳನ್ನು ಅಗ್ನಿಕೊಂಡದ ಬಳಿ ಕರೆತರಲಾಯಿತು.


ಅಗ್ನಿಕೊಂಡಕ್ಕೆ ಪೂಜಾ ಸಲ್ಲಿಸಿದ ನಂತರ ವಾದ್ಯಮೇಳದ ಹಿಮ್ಮೇಳದೊಂದಿಗೆ ನಿಗಿನಿಗಿಸುವ ಕೆಂಡದ ಮೇಲೆ ಮೊದಲು ದೇವರ ಬಸವ ನಂತರ ಕಳಸ ಹೊತ್ತ ಬಾಲಕಿ ಹಾದ ನಂತರ ಉಡುಸಲ್ಲಮ್ಮನೊಟ್ಟಿಗೆ ಎಲ್ಲಾ ದೇವರುಗಳ,ಕೆಂಚರಾಯಗಳನ್ನು ಕೆಂಡ ಹಾಯಿಸಲಾಯಿತು.ಮೊದಲೇ ಪಟ್ಟಿಮಾಡಿದ ಸೀಮಿತ ಸಂಖ್ಯೆಯ ಭಕ್ತರು ಕೆಂಡ ಸೇವೆಗೈದು ಹರಕೆ ಒಪ್ಪಿಸಿದರು.ಬೆಳಿಗ್ಗೆ ೧೧ ಕ್ಕೆ ಪ್ರಾರಂಭವಾದ ಕೆಂಡ ಸೇವೆ ನೋಡುವ ಸಲುವಾಗಿಯೇ ಅಪಾರ ಭಕ್ತರು ಬಿಸಿಲ್ಲನ್ನು ಲೆಖ್ಖಿಸದೆ ಕಾದು ನಿಂತಿದ್ದರು.ನಿಗಿನಿಗಿಸುವ ಕೆಂಡದ ಮೇಲೆ ಹಾಯುವುದನ್ನು ನೋಡಿ ಭಕ್ತಪರವಶರಾದರು.


ಕೆಂಡದ ಸಮಯದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಪೋಲಿಸರು ಹಾಗೂ ದೇವಾಲಯ ಸಮಿತಿಯವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಹೊಸಕೆರೆ ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ನಡೆಯಿತು.


ದೇವಾಲಯ ಸಮಿತಿಯ ಕನ್ವೀನರ್ ಭರತ್,ಪಟೇಲ ಸುರೇಶ್,ಪುಟ್ಟಶಾಮಯ್ಯ,ಯಜಮಾನರುಗಳಾದ ಜಯರಾಮಯ್ಯ,ಕರಿಯಪ್ಪ,ರಘು ಸೇರಿದಂತೆ ಮುದ್ದೇನಹಳ್ಳಿ,ಬಯಲಪ್ಪನ ಮಠ,ತಾರೀಕಟ್ಟೆ, ತಾಂಡ್ಯ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.


ವೈಫಲ್ಯ:ಅನಾದಿ ಕಾಲದಿಂದಲೂ ನಡೆಯುತ್ತಿದ್ದ ಕೆಂಡದ ಕಾರ್ಯಕ್ರಮಕ್ಕೆ ಇದೇ ಮೊದಲ ಬಾರಿ ತಾಲ್ಲೂಕ್ ಆಡಳಿತದಿಂದ ಒಪ್ಪಿಗೆ ಪಡೆಯಬೇಕಾಯಿತು.ಸರ್ಕಾರಿ ಆದೇಶದಂತೆ ಪೋಲಿಸರು ಆಗಮಿಸಿದ್ದರಾದರೂ ಮುಂಜಾಗ್ರತೆಯಾಗಿ ಸ್ಥಳದಲ್ಲಿರಬೇಕಾದ ಅಗ್ನಿಶಾಮಕ ದಳ ಹಾಗೂ ಸಂಚಾರಿ ತುರ್ತು ವಾಹನದ ಏರ್ಪಾಡಿನ ಬಗ್ಗೆ ತಾಲ್ಲೂಕ್ ಆಡಳಿತ ಗಮನಹರಿಸಿರಲಿಲ್ಲ. ಅಕಸ್ಮಾತ್ ಅಗ್ನಿಕೊಂಡ ಹಾಯುವಾಗ ಏನಾದರೂ ಹೆಚ್ಚುಕಮ್ಮಿಯಾಗಿ ಅನಾಹುತವಾಗಿದ್ದರೆ ಯಾರು ಹೊಣೆ ಎನ್ನುವ ಮಾತು ಕೇಳಿಬಂತು.
----------------------------------------
ಪ್ರತಿ ವರ್ಷವೂ ಗ್ರಾಮದೇವಿಯ ಸನ್ನಿಧಾನದಲ್ಲಿ ಜಾತ್ರಾ ಸಮಯದಲ್ಲಿ ಕೆಂಡ ಹಾಯುವುದು ನಡೆಯುತ್ತವೆ.ಕೆಂಡ ಹಾಯ್ದರೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ ಎನ್ನುವ ಕಾರಣಕ್ಕಾಗಿ ಈ ಆಚರಣೆ ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ತಾಲ್ಲೂಕ್ ಆಡಳಿತ ಹಾಗೂ ಪೋಲಿಸರು ಮಧ್ಯಸ್ಥಿಕೆ ವಹಿಸಿ ಎಲ್ಲರನ್ನೂ ಕೆಂಡ ಹಾಯಿಸದೆ ಸೀಮಿತ ಯುವಕರನ್ನು ಮಾತ್ರ ಕೆಂಡ ಹಾಯಿಸಲಾಯಿತು.ಇದರಿಂದಾಗಿ ಹರಕೆ ಹೊತ್ತ ಹಲವರು ನಿರಾಶರಾಗಿ ಮರಳಬೇಕಾಯಿತು :ಸಿಂದೂಧರ,ಗ್ರಾಮದ ಯುವಕ

-----------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...