ವಿಷಯಕ್ಕೆ ಹೋಗಿ

ಚಿ.ನಾ.ಹಳ್ಳಿ ತಾಲೂಕಿಗೆ ಜಿಪಂ ಅಧ್ಯಕ್ಷ ಸ್ಥಾನ ಕೊಡಿ

ಹಿಂದುಳಿದ ಪ್ರದೇಶ ಅಭಿವೃದ್ಧಿ ದೃಷ್ಠಿಯಿಂದ ಹುಳಿಯಾರು ಸಿದ್ಧರಾಮಯ್ಯ ಅಧ್ಯಕ್ಷರಾಗಲಿ :ಸಾಸಲುಸತೀಶ್
----------------------------------------
ಹುಳಿಯಾರು: ನಂಜುಂಡಪ್ಪ ವರದಿಯನ್ವಯ ಹಿಂದುಳಿದ ಪ್ರದೇಶವಾಗಿರುವ ಚಿ.ನಾ.ಹಳ್ಳಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈ ಬಾರಿಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನವನ್ನು ಚಿಕ್ಕನಾಯಕನಹಳ್ಳಿಗೆ ಬಿಟ್ಟುಕೊಡುವಂತೆ ಚಿ.ನಾ.ಹಳ್ಳಿ ಕಾಂಗ್ರೆಸ್ ಮುಖಂಡ ಸಾಸಲುಸತೀಶ್ ಒತ್ತಾಯಿಸಿದ್ದಾರೆ.

                 ಹುಳಿಯಾರಿನಲ್ಲಿ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಪಕ್ಷದ ವರಿಷ್ಠರು ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಜಿಪಂ ಗಾದಿ ಹಿಡಿಯಲು ನಿರ್ಧರಿಸಿದಲ್ಲಿ ಚಿಕ್ಕನಾಯ್ಕನಹಳ್ಳಿ ತಾಲೂಕಿನ ಹುಳಿಯಾರು ಕ್ಷೇತ್ರದಿಂದ ಬಿಸಿಎಂ ಎ ಮೀಸಲಾತಿಯಿಂದ ಆಯ್ಕೆಯಾಗಿರುವ ವೈ.ಸಿ.ಸಿದ್ಧರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿಸುವ ಮೂಲಕ ತಾಲೂಕಿನ ಅಭಿವೃದ್ಧಿಗೆ ಮುನ್ನುಡಿ ಬರೆಯುವಂತೆ ಮನವಿ ಮಾಡಿದರು.

              ಕಳ್ಳಂಬೆಳ್ಳ ಕ್ಷೇತ್ರದಿಂದ ಟಿ.ಬಿ.ಜಯಚಂದ್ರ ಅವರು ಶಾಸಕರಾಗುತ್ತಿದ್ದ ಸಂದರ್ಭದಲ್ಲಿ ಹುಳಿಯಾರಿನಲ್ಲಿ ಪದವಿ ಕಾಲೇಜು, ಬೋರನಕಣಿವೆಯಿಂದ ನೀರಿನ ಸೌಲಭ್ಯ, ಹಳ್ಳಿಗಳಲ್ಲಿ ನೀರು ಹಾಗೂ ರಸ್ತೆ ಹೀಗೆ ಹತ್ತಾರು ಅಭಿವೃದ್ಧಿ ಕಾರ್ಯಗಳು ಆಗಿದ್ದವು. ಅವರು ಶಿರಾ ಕ್ಷೇತ್ರಕ್ಕೆ ಹೋದ ನಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಇನ್ನು ಚಿ.ನಾ.ಹಳ್ಳಿಯಲ್ಲೂ ಲಕ್ಕಪ್ಪ ಅವರ ಶಾಸಕರಾಗಿದ್ದ ಕಾಲದಲ್ಲಿ ಅಭಿವೃದ್ಧಿ ಕಾರ್ಯಗಳಾಗಿದ್ದವು. ಇದರರ್ಥ ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದರೆ ಮಾತ್ರ ಅಭಿವೃದ್ಧಿ ಕಾರ್ಯಗಳಾಗುತ್ತಿದ್ದು ವೈ.ಸಿ.ಸಿದ್ಧರಾಮಯ್ಯ ಅವರಿಗೆ ಅಧಿಕಾರ ಕೊಟ್ಟಲ್ಲಿ ಈ ಬಾರಿಯೂ ಕ್ಷೇತ್ರದಲ್ಲಿ ಅಭಿವೃದ್ಧಿ ನಿರೀಕ್ಷಿಸಬಹುದು ಎಂದರು.

             ಇನ್ನು ತುಮಕೂರು ಜಿಲ್ಲೆಯಲ್ಲಿ ಚಿ.ನಾ.ಹಳ್ಳಿ ಹೊರತು ಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ನಿಂದ ರಾಜಕೀಯದ ಅಧಿಕಾರ ಲಾಭ ಪಡೆದಿದ್ದಾರೆ. ಶಿರಾ, ಮಧುಗಿರಿ, ತಿಪಟೂರು, ತುಮಕೂರು ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಪಾವಗಡದಲ್ಲಿ ಉಗ್ರಪ್ಪ ಎಂಎಲ್ಸಿ ಆಗಿದ್ದಾರೆ. ತುರುವೇಕೆರೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ್, ಕೊರಟಗೆರೆಯಲ್ಲಿ ಸಚಿವ ಡಾ.ಜಿ.ಪರಮೇಶ್ವರ್, ಕುಣಿಗಲ್‌ನಿಂದ ಸಂಸದ ಮುದ್ದಹನುಮೇಗೌಡರಿದ್ದಾರೆ. ಹಾಗಾಗಿ ಚಿಕ್ಕನಾಯ್ಕನಹಳ್ಳಿ ತಾಲೂಕಿನಲ್ಲೂ ಕಾಂಗ್ರೆಸ್ ಪಕ್ಷ ಸಂಘಟನೆಯ ದೃಷ್ಠಿಯಿಂದಾದರೂ ಸಿದ್ಧರಾಮಯ್ಯ ಅವರಿಗೆ ಜಿಪಂ ಅ‘್ಯಕ್ಷ ಸ್ಥಾನ ನೀಡುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

            ಎಪಿಎಂಸಿ ಸದಸ್ಯ ರಹಮತ್‌ಉಲ್ಲಾ ಸಾಬ್ ಅವರು ಮಾತನಾಡಿ ಸಿದ್ಧರಾಮಯ್ಯ ಅವರ ತಂದೆ ಚಿಕ್ಕಣ್ಣ ಅವರು ಹುಟ್ಟು ಕಾಂಗ್ರೆಸಿಗರಾಗಿದ್ದು ಟಿ.ಬಿ.ಜಯಚಂದ್ರ, ಮೂಡ್ಲುಗಿರಿಯಪ್ಪ, ಕೆ.ಮಲ್ಲಣ್ಣ, ಲಕ್ಕಪ್ಪ ಹೀಗೆ ಎಲ್ಲರ ಚುನಾವಣೆಯಲ್ಲೂ ಕಾಂಗ್ರೆಸ್ ಪರ ಕೆಲಸ ಮಾಡಿ ಗೆಲುವಿಗೆ ಕಾರಣಕರ್ತರಾಗಿದ್ದರು. ಇನ್ನೂ ಸಿದ್ಧರಾಮಯ್ಯ ಅವರು ಎಂದೂ ಪಕ್ಷಾಂತರ ಮಾಡದ, ಪಕ್ಷ ವಿರೋಧಿ ಚಟುವಟಿಕೆ ಮಾಡದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ವ್ಯಕ್ತಿಗತ ಸರಳ, ಸಜ್ಜನಿಕೆಗೆ ಹೆಸರಾಗಿದ್ದು ಎಂದೂ ಕೋಪ ಮಾಡಿಕೊಳ್ಳದೆ ಎಲ್ಲರೊಂದಿಗೂ ಬೆರೆಯುವ ಸಂಘಟನಾ ಕೌಶಲ್ಯ ರೂಢಿಸಿಕೊಂಡಿದ್ದಾರೆ. ಇಂತಹವರಿಗೆ ಅಧಿಕಾರ ಕೊಟ್ಟರೆ ಪಕ್ಷಕ್ಕೂ, ಜನಸಾಮಾನ್ಯರಿಗೂ ಒಳಿತಾಗುತ್ತದೆ ಎಂದರು.

               ಗ್ರಾಪಂ ಸದಸ್ಯ ಎಲ್.ಆರ್.ಚಂದ್ರಶೇಖರ್ ಅವರು ಮಾತನಾಡಿ ಚಿಕ್ಕಾನಾಯ್ಕನಹಳ್ಳಿ ತಾಲೂಕಿನಲ್ಲಿ ಕಾಂಗ್ರೆಸ್ ನೆಲಕಚ್ಚಿ ಸಮರ್ಥ ನಾಯಕನಿಲ್ಲದೆ ಕಾರ್ಯಕರ್ತರು ದಿಕ್ಕಾಪಾಲಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ಸಾಸಲು ಸತೀಶ್ ಅವರು ಕ್ಷೇತ್ರದಲ್ಲಿ ನೆಲೆಯೂರಿ ಕಾರ್ಯಕರ್ತರ ಕಷ್ಟ-ಸುಖಗಳಿಗೆ ಸ್ಪಂದಿಸಿ ಪಕ್ಷವನ್ನು ಸಮರ್ಥವಾಗಿ ಕಟ್ಟುತ್ತಿದ್ದಾರೆ. ಇವರ ಪಕ್ಷ ಸಂಘಟನೆಗೆ ನೆರವಾಗುವ ನಿಟ್ಟಿನಲ್ಲಿಯಾದರೂ ಸಿದ್ಧರಾಮಯ್ಯ ಅವರಿಗೆ ಅಧ್ಯಕ್ಷಗಿರಿ ಕೊಡಬೇಕು ಎಂದರಲ್ಲದೆ ಸಿದ್ಧರಾಮಯ್ಯ ಅವರು ಗ್ರಾಪಂ ಅಧ್ಯಕ್ಷರಾಗಿ, ಎಪಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಜನಾನುರಾಗಿಯಾಗಿದ್ದು ಜಿಪಂ ಅಧ್ಯಕ್ಷಗಾದಿ ಕೊಟ್ಟರೆ ಅಧಿಕಾರವನ್ನು ಜನರಿಗೆ ಹಂಚಿ ಪಕ್ಷಕ್ಕೆ ಒಳ್ಳೆ ಹೆಸರು ತರುವುದರಲ್ಲಿ ಎರಡುಮಾತಿಲ್ಲ ಎಂದರು.


                 ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೇಷಾನಾಯ್ಕ, ಹುಳಿಯಾರು ಬಿಸಿಎಂ ಕಾಂಗ್ರೆಸ್ ಅಧ್ಯಕ್ಷ ಧನುಷ್ ರಂಗನಾಥ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್.ಅಶೋಕ್, ತಾಪಂ ಮಾಜಿ ಅಧ್ಯಕ್ಷ ವೈ.ಆರ್.ಮಲ್ಲಿಕಾರ್ಜುನಯ್ಯ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಅಬ್ಜಲ್, ಜಾಫರ್ ಮತ್ತಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...