ವಿಷಯಕ್ಕೆ ಹೋಗಿ

ಹುಳಿಯಾರು ಎಪಿಎಂಸಿ ಪ್ರಾಂಗಣದ ಅಂಗಡಿಗಳಲ್ಲಿ ಕಳ್ಳತನ

ಹುಳಿಯಾರು;ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದಲ್ಲಿ ಸೋಮವಾರ ರಾತ್ರಿ ಸರಣಿಕಳ್ಳತನ ನಡೆದಿದ್ದು ನಾಲ್ಕು ಅಂಗಡಿಗಳ ರೋಲಿಂಗ್ ಶೆಟರ್ ಮೀಟಿದ್ದು ಅದರಲ್ಲಿ ಒಂದು ಅಂಗಡಿಯಲ್ಲಿ ಮಾತ್ರ ನಗದು ದೋಚಿರುವುದು ಬಿಟ್ಟರೆ ಹೆಚ್ಚಿನದೇನು ಕಳುವಾಗಿಲ್ಲ.


ಎಲ್ಲಾ ನಾಲ್ಕು ಅಂಗಡಿಗಳನ್ನು ಷಟರ್ ಮೀಟಿ ಒಳನುಗ್ಗಿರುವ ಕಳ್ಳರು ಕೇವಲ ಹಣಕ್ಕಾಗಿ ಬೀರುಗಳನ್ನು,ಕ್ಯಾಶ್ ಟೇಬಲ್ ಗಳನ್ನು ಜಾಲಾಡಿದ್ದು ಇನ್ಯಾವುದೇ ವಸ್ತು ಮುಟ್ಟಿಲ್ಲ.ಮೊದಲು ಮೂರು ಅಂಗಡಿಗಳಲ್ಲಿ ನಗದು ಸಿಕ್ಕದೆ ಕಡೆಯದಾಗಿ ಭಾರಿ ವಹಿವಾಟು ನಡೆಸುವ ಕೊಬ್ಬರಿ ವರ್ತಕರ ಅಂಗಡಿಗೆ ಬಾಗಿಲು ಮುರಿದು ಹೊಕ್ಕಿರುವ ಕಳ್ಳರು ಅಲ್ಲಿ ಸಿಕ್ಕ ೨೩,೫೦೦ ರೂಪಾಯಿಯನ್ನು ದೋಚಿ ಪರಾರಿಯಾಗಿದ್ದಾರೆ.

ಕಳ್ಳತನಕ್ಕೆ ಮಾರುಕಟ್ಟೆಯಲ್ಲಿಯೇ ನಿಂತಿದ್ದ ಲಾರಿಯ ಜಾಕ್ ಹಾಗೂ ಜಾಕ್ ಲಿವರ್ ಮತ್ತು ಅಂಗಡಿ ಮುಂದೆ ಕೊಬ್ಬರಿ ಸುಲಿಯಲಿಟ್ಟಿದ್ದ ಹಾರೆಯನ್ನು ಬಳಸಿಕೊಂಡಿದ್ದು ಪ್ರಕರಣ ಗಮನಿಸಿದಲ್ಲಿ ಸ್ಥಳಿಯರ ಕೈವಾಡದ ಶಂಕೆಯಿದೆ ಎನ್ನಲಾಗಿದೆ.


ರಾತ್ರಿ ನಡೆದಿರುವ ಘಟನೆ ಮುಂಜಾನೆ ೫ ರ ಸುಮಾರಿಗೆ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಎಪಿಎಂಸಿ ಅಧ್ಯಕ್ಷ ಸಿದ್ದರಾಮಯ್ಯ ಆಗಮಿಸಿದ್ದನ್ನು ಹೊರತುಪಡಿಸಿದರೆ ಬೆಳಿಗ್ಗೆ ೧೦ಗಂಟೆಯಾದರೂ ಕಾರ್ಯದರ್ಶಿಯಾಗಲಿ ,ಭದ್ರತಾ ಸಿಬ್ಬಂದಿಯ ಏಜೆನ್ಸಿಯವರಾಗಲಿ ಬಾರದಿದ್ದಿದ್ದು ವ್ಯಾಪಾರಸ್ಥರನ್ನು ಕೆರಳುವಂತೆ ಮಾಡಿತು.

ಪ್ರಕರಣ ಹುಳಿಯಾರು ಠಾಣೆಯಲ್ಲಿ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು ಪಿಎಸೈ ಪ್ರವೀಣ್ ಕುಮಾರ್ ತನಿಖೆ ಕೈಗೊಂಡಿದ್ದಾರೆ.
--------------------
ಜಿಲ್ಲೆಯಲ್ಲಿಯೇ ವಾರ್ಷಿಕ ೭೦-೮೦ ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ ಹೆಸರಾಗಿರುವ ಹುಳಿಯಾರು ಎಪಿಎಂಸಿಯಲ್ಲಿ ಸೂಕ್ತ ಭದ್ರತಾ ಸಿಬ್ಬಂದಿಯಿಲ್ಲದಿರುವುದು ಇಂದಿನ ಪ್ರಕರಣದಲ್ಲಿ ಕಣ್ಣಿಗೆ ರಾಚುತ್ತಿದೆ.೩೦ ಕ್ಕೂ ಮೀರಿ ಭಾರಿ ಅಂಗಡಿದಾರರಿರುವ ಎಪಿಎಂಸಿಯಲ್ಲಿ ಆವರಣದೊಳಗೆ ನುಗ್ಗಿ ರಾಜಾರೋಷವಾಗಿ ಕಳ್ಳತನ ಮಾಡಿರುವುದರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.ರಾತ್ರಿ ಸಮಯದಲ್ಲಿ ಹಾಲಿ ಇರುವ ಕೇವಲ ಒಬ್ಬನೇಒಬ್ಬ ಸೆಕ್ಯೂರಿಟಿಯ ಬದಲು ಮೂರ್ನಾಲ್ಕು ಜನರನ್ನು ನೇಮಿಸುವ ಮೂಲಕ ಎಲ್ಲರ ಅಂಗಡಿಗಳಿಗೆ ಕಾಯಲು ಸೂಕ್ತ ಭದ್ರತೆ ನೀಡಬೇಕು. ರಾತ್ರಿ ಗಸ್ತು ಹೆಚ್ಚಿಸಬೇಕು ಎಂದು ಪೊಲೀಸ್‌ ಇಲಾಖೆಗೆ ಮನವಿ ಮಾಡಿದ್ದಾರೆ.
-------------------
ಇಂದಿನ ಪ್ರಕರಣದಲ್ಲಿ ಭದ್ರತಾ ವೈಫಲ್ಯ ಎದ್ದುಕಾಣುತ್ತಿದ್ದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸದ ರಿತಿಯಲ್ಲಿ ಮಾರುಕಟ್ತೆಯ ಆಡಳಿತ ಮಂಡಳಿಯು ಎಪಿಎಂಸಿ ಪ್ರವೇಶಿಸುವ ಮುಖ್ಯದ್ವಾರದಲ್ಲಿ ಹಾಗೂ ಆಯ್ದ ಸ್ಥಳಗಳಲ್ಲಿ ಹಾಗೂ ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಬೇಕಿದೆ:ಬಾಲಾಜಿ,ಎಪಿಎಂಸಿಯ ರವಾನೆದಾರರು

------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...