ವಿಷಯಕ್ಕೆ ಹೋಗಿ

ದಸೂಡಿ ಆಂಜನೇಯನ ವಿಜೃಂಭಣೆಯ ಬ್ರಹ್ಮರಥೋತ್ಸವ


     ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರಿ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವವು ಅಪಾರ ಸಂಖ್ಯೆಯ ಭಕ್ತರ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.

         ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಸ್ವಾಮಿಯವರ ಧಾರ್ಮಿಕ ಕೈಂಕರ್ಯಗಳು ನಡೆಯಿತು.ಸ್ವಾಮಿಯ ಪೂಜೆಯಿಂದ ಹಿಡಿದು, ಪತ್ತು, ನಗಾರಿ, ಧ್ವಜ, ಸೂರ್ಯಪಾನ, ಚಂದ್ರಪಾನ, ಚಾಮರ, ಮಕರ ತೋರಣ ಹೀಗೆ ಎಲ್ಲಾ ವಿಧದ ಬಿರುದಾವಳಿಗಳನ್ನು ಬ್ರಾಹ್ಮಣ ವರ್ಗದವರೇ ಹಿಡಿಯುವುದು ಇಂದಿನ ವಿಶೇಷವಾಗಿದ್ದು ಆಂಜನೇಯಸ್ವಾಮಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಗೌಡಗೆರೆಯ ದುರ್ಗಮ್ಮದೇವರು ಹಾಗೂ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿಕೊಂಡು ಸಕಲ ವಾದ್ಯಮೇಳದೊಂದಿಗೆ ದೇವಾಲಯವನ್ನು ಪ್ರದಕ್ಷಿಣೆ ಹಾಕಿಬಂದ ನಂತರ ಕೆಂಚರಾಯಸ್ವಾಮಿ,ದೂತರಾಯ ಸ್ವಾಮಿ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ರಥದ ಬಳಿ ಕರೆತರಲಾಯಿತು.ಜೈಕಾರದೊಂದಿಗೆ ಶುಭಲಗ್ನದಲ್ಲಿ ಆಂಜನೇಯ ಸ್ವಾಮಿಯವರನ್ನು ಬ್ರಹ್ಮರಥದ ಮೇಲೆ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥದ ಮುಂದೆ ನೆಟ್ಟಿದ್ದ ಕದಳಿ ಮರವನ್ನು ತುಂಡರಿಸಿದ ನಂತರ ಫಲಪುಷ್ಪಾದಿಗಳಿಂದ, ರಂಗಿನ ಬಾವುಟ, ತಳಿರು ತೋರಣಗಳಿಂದ ಸಕಲ ಬಿರುದಾವಳಿಗಳಿಂದ ಅಲಂಕೃತಗೊಂಡ ರಥವನ್ನು ಮಂಗಳವಾದ್ಯ ವೇದ, ಮಂತ್ರ ಘೋಷಗಳ ನಡುವೆ, ಜೈ ಹನುಮಾನ್ ಉದ್ಘೋಷದೊಂದಿಗೆ ಭಕ್ತರು ಎಳೆದು ಪುನೀತರಾದರು.

           ಭಕ್ತರು ಅನತಿ ದೂರದಿಂದಲೇ ಬಾಳೆ ಹಣ್ಣನ್ನು ರಥದ ಕಲಶಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.ಮಹಿಳೆಯರು ರಥದ ಮೇಲಿದ್ದ ಸ್ವಾಮಿಗೆ ಹಣ್ಣುಕಾಯಿ ಮಾಡಿಸುವಲ್ಲಿ ಮುಂದಾಗಿದ್ದರು.ಮೂವತ್ತು ಅಡಿಗೂ ಎತ್ತರದ ಈ ಮಹಾರಥೋತ್ಸವವನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.


         ರಥೋತ್ಸವದ ನಂತರ ಬ್ರಾಹ್ಮಣರಿಗೆ ಸಂತರ್ಪಣೆ ನಡೆಯಿತಲ್ಲದೆ, ದೇವಾಲಯ ಸಮಿತಿ,ಆರ್ಯವೈಶ್ಯ ಜನಾಂಗದವರಿಂದ,ಯುವಕ ಸಂಘದವರಿಂದ ಭಕ್ತಾಧಿಗಳಿಗೆ ಪಾನಕಪನಿವಾರ,ಫಲಾಹಾರ ಸೇವೆ ನಡೆಯಿತು. ರಥಕ್ಕೆ ಹಾಗೂ ಶ್ರೀ ಸ್ವಾಮಿಯವರಿಗೆ ಹಾಕಿದ ಹಾರಗಳನ್ನು ಹರಾಜಿನಲ್ಲಿ ಸಹಸ್ರಾರು ರೂಪಾಯಿಗಳಿಗೆ ಕೊಳ್ಳುವುದರ ಮೂಲಕ ಭಕ್ತಿಭಾವ ಸಮರ್ಪಿಸಿದರು.
                 ಆರ್ಯವೈಶ್ಯ ಮಹಿಳಾ ಮಂಡಳಿ , ಶ್ರೀ ಮಾರುತಿ ಭಜನಾಮಂಡಳಿ ಹಾಗೂ ಎಮ್ಮೇಕರಕೆಹಟ್ಟಿ “ಶ್ರೀರಾಮ ಭಜನಾ ಮಂಡಳಿ”ಯವರಿಂದ ಅಖಂಡ ಭಜನೆ ಹಾಗೂ ಕೆಳಗಲ ಗೊಲ್ಲರಹಟ್ಟಿ ಯಾದವ ತಂಡಗಳ ವಿಶೇಷ ಕೋಲಾಟವಂತು ಭಕ್ತರ ಮನದಲ್ಲಿ ಪುಳಕ ಉಂಟು ಮಾಡಿತು.ಊರಿನ ತುಂಬೆಲ್ಲಾ ಕೇಸರಿಬಣ್ನದ ಮಾರುತಿ ಧ್ವಜ ರಾರಾಜಿಸುತ್ತಿತ್ತು. ಶ್ರೀಸೇನೆಯ ಸ್ವಯಂಸೇವಕರು ಶಿಸ್ತಿನಿಂದ ಸಕಲ ಕಾರ್ಯಗಳಲ್ಲೂ ತೊಡಗಿಕೊಂಡು ನಿರ್ವಹಿಸಿದರು.
          ಬೇಸಿಗೆಯ ಬಿಸಿಲಝಳವನ್ನು ಲೆಕ್ಕಿಸದೆ ದಬ್ಬಗುಂಟೆ,ರಂಗನಕೆರೆ,ಹೊಯ್ಸಳಕಟ್ಟೆ,ಕಲ್ಲೇನಹಳ್ಳಿ, ಮರೆನಡು,ಹುಳಿಯಾರು,ಬೆಳ್ಳಾರ ಸೇರಿದಂತೆ ದಸೂಡಿ ಸುತ್ತಮುತ್ತಲ ಹತ್ತಾರೂ ಹಳ್ಳಿಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ದರ್ಶನ ಪಡೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...