ವಿಷಯಕ್ಕೆ ಹೋಗಿ

ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಊರಹಬ್ಬ

ಹುಳಿಯಾರು:ಹುಳಿಯಾರು ಸಮೀಪದ ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಬಂತೆಂದರೆ ಅದೇನೋ ಸಂಭ್ರಮ.ಕುರುಬ ಸಮುದಾಯದವರೇ ಅಧಿಕ ಸಂಖ್ಯೆಯಲ್ಲಿರುವ ಈ ಪುಟ್ಟ ಗ್ರಾಮದಲ್ಲಿ ರಾಮನವಮಿ ಕೇವಲ ಪಾನಕ ಕೋಸುಂಬರಿ ವಿತರಿಸುವುದರೊಂದಿಗೆ ಕೊನೆಗೊಳ್ಳುವುದಿಲ್ಲ. ಇಲ್ಲಿ ಬರೋಬ್ಬರಿ ಒಂಬತ್ತು ದಿನಗಳ ಕಾಲ ನಡೆಯೋ ಆಚರಣೆಯನ್ನು ವಸಂತ ನವರಾತ್ರಿ ಎನ್ನುತ್ತಾರೆ. ಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಬರುವ ರಾಮನವಮಿಯನ್ನು ಊರಿನ ಮಂದಿಯೆಲ್ಲಾ ಒಟ್ಟಾಗಿ ಶ್ರದ್ಧಾಭಕ್ತಿಯಿಂದ ಆಚರಿಸುವ ಮೂಲಕ ಈ 9 ದಿನಗಳ ಕಾಲದ ಆಚರಣೆಗೆ ತೆರೆಬೀಳಲಿದೆ.


ಸಾಮಾನ್ಯವಾಗಿ ಶರನ್ನವರಾತ್ರಿ ದುರ್ಗಾಪೂಜೆಗೆ ಮೀಸಲಾದರೆ ಇಲ್ಲಿ ಆಚರಣೆಯಲ್ಲಿರುವ ವಸಂತ ನವರಾತ್ರಿ ಶ್ರೀರಾಮನಿಗೆ ಮೀಸಲು. ಹೊಸ ಸಂವತ್ಸರದ ಅಂದರೆ ಯುಗಾದಿಯ ಮೊದಲ ದಿನದಿಂದ ಪ್ರಾರಂಭಿಸಿ ರಾಮನು ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ರಾಮನ ಪೂಜೆ ಸಲ್ಲಿಸಿದ ನಂತರ ಅಂತ್ಯಗೊಳ್ಳುತ್ತದೆ.

                      ಯುಗಾದಿಯಿಂದ ಒಂಬತ್ತನೆ ದಿನ ಬರುವುದೇ ಶ್ರೀ ರಾಮ ನವಮಿ.2೦೦ ಮನೆಗಳ ಗ್ರಾಮವಾದ ಲಿಂಗಪ್ಪನಪಾಳ್ಯದಲ್ಲಿ ಎಲ್ಲ ಹಬ್ಬಗಳನ್ನು ಆಚರಿಸುತ್ತಾರಾದರೂ ರಾಮನವಮಿ ಮಾತ್ರ ವಿಶೇಷವಾಗಿ ಆಚರಿಸುತ್ತಾರೆ. ಇಡೀ ಗ್ರಾಮದ ಮಂದಿಯೆಲ್ಲ ಶ್ರೀರಾಮನ ಭಕ್ತರಾಗಿದ್ದು ಶ್ರೀರಾಮನ ಆರಾಧನೆಗಾಗಿ ರಾಮಮಂದಿರ ಕೂಡ ನಿರ್ಮಿಸಿಕೊಂಡಿದ್ದಾರೆ..ಹೊಸ ಸಂವತ್ಸರದ ಮೊದಲ ಹಬ್ಬವಾದ ಯುಗಾದಿಯಿಂದ ರಾಮ ನವಮಿಯವರೆಗೆ ಗ್ರಾಮದಲ್ಲಿ ಎಲ್ಲರೂ ಮಡಿಯಾಗಿರುತ್ತಾರೆ. ಗ್ರಾಮದಲ್ಲಿ ಈ 9 ದಿನ ಮಾಂಸಹಾರ ಕಡ್ಡಾಯ ನಿಷಿದ್ಧ.ಹಾಗೆಯೇ ೯ ದಿನವೂ ನಿತ್ಯ ರಾಮಭಜನೆಯೂ ಕಡ್ಡಾಯ.

                          ಗ್ರಾಮದಲ್ಲಿ ಶ್ರೀರಾಮನವಮಿ ಆಚರಣೆಯ ಹಿಂದೆ ಒಂದು ಕಥೆಯಿದೆ.ಗ್ರಾಮದಲ್ಲಿ 60 ವರ್ಷಗಳ ಹಿಂದೆ ಯಾವುದೇ ದೇವಾಲಯ ಇರಲಿಲ್ಲ ಆ ಸಮಯದಲ್ಲಿ ಹುಳಿಯಾರಿನ ರಾಮಭಕ್ತರೊಬ್ಬರು ಗ್ರಾಮದಲ್ಲಿ ರಾಮನವಮಿಯಂದು ಊರ ಮಧ್ಯೆ ಚಪ್ಪರ ಹಾಕಿಸಿ ಶ್ರೀರಾಮ ಪೋಟೊ ಇಟ್ಟು ಭಜನೆ ಮಾಡಿಸುವಲ್ಲಿ ಸಫಲರಾದರು.ಅಂದಿನಿಂದ ಗ್ರಾಮದ ಸಮಸ್ಯೆಗಳು ಮಂಜಿನಂತೆ ಕರಗಿದಲ್ಲದೆ ಊರು ಸುಭಿಕ್ಷವಾಯಿತು. ಸೋಮಸಂದ್ರದ ಬಾಲಪ್ಪನವರು ಹೇಳಿಕೊಟ್ಟ ರಾಮ ಭಜನೆಯಿಂದ ಗ್ರಾಮಕ್ಕೆ ಒಳಿತಾಯಿತೆಂದು ಬಗೆದ ಜನ ಅಂದಿನಿಂದ ರಾಮನವಮಿಯನ್ನು ಕಟ್ಟು ನಿಟ್ಟಿನಿಂದ, ಭಯಭಕ್ತಿಯಿಂದ ಆಚರಿಸುವುದನ್ನು ರೂಢಿಸಿಕೊಂಡರು.

                   ಶ್ರೀರಾಮನವಮಿಯಂದು ಗ್ರಾಮಸ್ಥೆರೆಲ್ಲಾ ಸೇರಿ ಹಿಂದಿನ ದಿನದಿಂದಲೆ ಚಪ್ಪರ ಹಾಕಿ ಮಾವಿನ ತೋರಣ ಕಟ್ಟುವ ಮೂಲಕ ಹಬ್ಬದ ಆಚರಣೆಗೆ ಮುಂದಾಗುತ್ತಾರೆ. ಗ್ರಾಮದ ಮನೆ ಮನೆಗಳು ತಳಿರು ತೋರಣ ಹಾಗೂ ಬಣ್ಣದ ರಂಗೋಲಿಯಿಂದ ಸಿಂಗರಿಸಲ್ಪಡುತ್ತದೆ. ಹಬ್ಬಕ್ಕಾಗಿ ದೂರದೂರುಗಳಿಂದ ನೆಂಟರಿಷ್ಟರನ್ನು ಕರೆಸಿಕೊಂಡು ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸಿ ಒಬ್ಬಟ್ಟಿನ ಊಟ ಮಾಡುತ್ತಾರೆ

ಉಪವಾಸ: ರಾಮನವಮಿಯಂದು ರಾಮನ ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನು ಹೊತ್ತುಕೊಂಡು ಗ್ರಾಮ ದೇವತೆಗಳೊಂದಿಗೆ ಭಜನೆ ಮಾಡುತ್ತ ಹುಳಿಯಾರಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ಸು ಗ್ರಾಮಕ್ಕೆ ಮರಳಿ ಬಂದು ಗ್ರಾಮದಲ್ಲಿನ ಎಲ್ಲಮ್ಮ,ಹೊಸೂರಮ್ಮ,ಗರುಡನಗುಡಿ, ಬಸವನ ಗುಡ್ಡೆ, ಮಾರುತಿ ಗುಡ್ಡೆಗಳಿಗೆ ಪೂಜೆ ಸಲ್ಲಿಸಿ ನಂತರ ಶ್ರೀಸ್ವಾಮಿಯವರ ಮೂಲಗುಡಿಗೆ ತೆರಳುವವರೆಗೂ ಎಲ್ಲರೂ ಉಪವಾಸವಿರುತ್ತಾರೆ.ಸಂಜೆ ಮಹಾಮಂಗಳಾರತಿ ನಡೆದು ಪಾನಕ ವಿತರಿಸಿದಾಗಲಷ್ಟೆ ಎಲ್ಲರ ಮನೆಯಲ್ಲೂ ಊಟದ ಕಾರ್ಯಕ್ರಮ.

                ಸಂಜೆ ನೂರೊಂದು ಎಡೆ ಸೇವೆ,ಬಿಲ್ಲುಗೂಡು ಸೇವೆ ಸಲ್ಲಿಸುವ ಮೂಲಕ ದಾಸಯ್ಯಗಳಿಗೆ ಎಡೆ ಇಟ್ಟು ಎಲ್ಲರು ಒಟ್ಟಾಗಿ ರಾಮಭಜನೆ ಮಾಡುವುದರೊಂದಿಗೆ ಒಂಬತ್ತುದಿನಗಳ ಕಾಲದ ಆಚರಣೆ ಕೊನೆಗೊಳ್ಳುತ್ತದೆ.



                   ಒಟ್ಟಾರೆ ಲಿಂಗಪ್ಪನಪಾಳ್ಯದ ಗ್ರಾಮಸ್ಥರು ಹಲವು ಹಬ್ಬಗಳ ಜೊತೆ ರಾಮನವಮಿಯನ್ನು ವಿಶಿಷ್ಟವಾಗಿ ಆಚರಿಸುತ್ತ ಬಂದಿರುವುದು ಈ ಭಾಗದ ವಿಶೇಷ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.