ವಿಷಯಕ್ಕೆ ಹೋಗಿ

ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಊರಹಬ್ಬ

ಹುಳಿಯಾರು:ಹುಳಿಯಾರು ಸಮೀಪದ ಲಿಂಗಪ್ಪನಪಾಳ್ಯದಲ್ಲಿ ರಾಮನವಮಿ ಬಂತೆಂದರೆ ಅದೇನೋ ಸಂಭ್ರಮ.ಕುರುಬ ಸಮುದಾಯದವರೇ ಅಧಿಕ ಸಂಖ್ಯೆಯಲ್ಲಿರುವ ಈ ಪುಟ್ಟ ಗ್ರಾಮದಲ್ಲಿ ರಾಮನವಮಿ ಕೇವಲ ಪಾನಕ ಕೋಸುಂಬರಿ ವಿತರಿಸುವುದರೊಂದಿಗೆ ಕೊನೆಗೊಳ್ಳುವುದಿಲ್ಲ. ಇಲ್ಲಿ ಬರೋಬ್ಬರಿ ಒಂಬತ್ತು ದಿನಗಳ ಕಾಲ ನಡೆಯೋ ಆಚರಣೆಯನ್ನು ವಸಂತ ನವರಾತ್ರಿ ಎನ್ನುತ್ತಾರೆ. ಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಬರುವ ರಾಮನವಮಿಯನ್ನು ಊರಿನ ಮಂದಿಯೆಲ್ಲಾ ಒಟ್ಟಾಗಿ ಶ್ರದ್ಧಾಭಕ್ತಿಯಿಂದ ಆಚರಿಸುವ ಮೂಲಕ ಈ 9 ದಿನಗಳ ಕಾಲದ ಆಚರಣೆಗೆ ತೆರೆಬೀಳಲಿದೆ.


ಸಾಮಾನ್ಯವಾಗಿ ಶರನ್ನವರಾತ್ರಿ ದುರ್ಗಾಪೂಜೆಗೆ ಮೀಸಲಾದರೆ ಇಲ್ಲಿ ಆಚರಣೆಯಲ್ಲಿರುವ ವಸಂತ ನವರಾತ್ರಿ ಶ್ರೀರಾಮನಿಗೆ ಮೀಸಲು. ಹೊಸ ಸಂವತ್ಸರದ ಅಂದರೆ ಯುಗಾದಿಯ ಮೊದಲ ದಿನದಿಂದ ಪ್ರಾರಂಭಿಸಿ ರಾಮನು ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ರಾಮನ ಪೂಜೆ ಸಲ್ಲಿಸಿದ ನಂತರ ಅಂತ್ಯಗೊಳ್ಳುತ್ತದೆ.

                      ಯುಗಾದಿಯಿಂದ ಒಂಬತ್ತನೆ ದಿನ ಬರುವುದೇ ಶ್ರೀ ರಾಮ ನವಮಿ.2೦೦ ಮನೆಗಳ ಗ್ರಾಮವಾದ ಲಿಂಗಪ್ಪನಪಾಳ್ಯದಲ್ಲಿ ಎಲ್ಲ ಹಬ್ಬಗಳನ್ನು ಆಚರಿಸುತ್ತಾರಾದರೂ ರಾಮನವಮಿ ಮಾತ್ರ ವಿಶೇಷವಾಗಿ ಆಚರಿಸುತ್ತಾರೆ. ಇಡೀ ಗ್ರಾಮದ ಮಂದಿಯೆಲ್ಲ ಶ್ರೀರಾಮನ ಭಕ್ತರಾಗಿದ್ದು ಶ್ರೀರಾಮನ ಆರಾಧನೆಗಾಗಿ ರಾಮಮಂದಿರ ಕೂಡ ನಿರ್ಮಿಸಿಕೊಂಡಿದ್ದಾರೆ..ಹೊಸ ಸಂವತ್ಸರದ ಮೊದಲ ಹಬ್ಬವಾದ ಯುಗಾದಿಯಿಂದ ರಾಮ ನವಮಿಯವರೆಗೆ ಗ್ರಾಮದಲ್ಲಿ ಎಲ್ಲರೂ ಮಡಿಯಾಗಿರುತ್ತಾರೆ. ಗ್ರಾಮದಲ್ಲಿ ಈ 9 ದಿನ ಮಾಂಸಹಾರ ಕಡ್ಡಾಯ ನಿಷಿದ್ಧ.ಹಾಗೆಯೇ ೯ ದಿನವೂ ನಿತ್ಯ ರಾಮಭಜನೆಯೂ ಕಡ್ಡಾಯ.

                          ಗ್ರಾಮದಲ್ಲಿ ಶ್ರೀರಾಮನವಮಿ ಆಚರಣೆಯ ಹಿಂದೆ ಒಂದು ಕಥೆಯಿದೆ.ಗ್ರಾಮದಲ್ಲಿ 60 ವರ್ಷಗಳ ಹಿಂದೆ ಯಾವುದೇ ದೇವಾಲಯ ಇರಲಿಲ್ಲ ಆ ಸಮಯದಲ್ಲಿ ಹುಳಿಯಾರಿನ ರಾಮಭಕ್ತರೊಬ್ಬರು ಗ್ರಾಮದಲ್ಲಿ ರಾಮನವಮಿಯಂದು ಊರ ಮಧ್ಯೆ ಚಪ್ಪರ ಹಾಕಿಸಿ ಶ್ರೀರಾಮ ಪೋಟೊ ಇಟ್ಟು ಭಜನೆ ಮಾಡಿಸುವಲ್ಲಿ ಸಫಲರಾದರು.ಅಂದಿನಿಂದ ಗ್ರಾಮದ ಸಮಸ್ಯೆಗಳು ಮಂಜಿನಂತೆ ಕರಗಿದಲ್ಲದೆ ಊರು ಸುಭಿಕ್ಷವಾಯಿತು. ಸೋಮಸಂದ್ರದ ಬಾಲಪ್ಪನವರು ಹೇಳಿಕೊಟ್ಟ ರಾಮ ಭಜನೆಯಿಂದ ಗ್ರಾಮಕ್ಕೆ ಒಳಿತಾಯಿತೆಂದು ಬಗೆದ ಜನ ಅಂದಿನಿಂದ ರಾಮನವಮಿಯನ್ನು ಕಟ್ಟು ನಿಟ್ಟಿನಿಂದ, ಭಯಭಕ್ತಿಯಿಂದ ಆಚರಿಸುವುದನ್ನು ರೂಢಿಸಿಕೊಂಡರು.

                   ಶ್ರೀರಾಮನವಮಿಯಂದು ಗ್ರಾಮಸ್ಥೆರೆಲ್ಲಾ ಸೇರಿ ಹಿಂದಿನ ದಿನದಿಂದಲೆ ಚಪ್ಪರ ಹಾಕಿ ಮಾವಿನ ತೋರಣ ಕಟ್ಟುವ ಮೂಲಕ ಹಬ್ಬದ ಆಚರಣೆಗೆ ಮುಂದಾಗುತ್ತಾರೆ. ಗ್ರಾಮದ ಮನೆ ಮನೆಗಳು ತಳಿರು ತೋರಣ ಹಾಗೂ ಬಣ್ಣದ ರಂಗೋಲಿಯಿಂದ ಸಿಂಗರಿಸಲ್ಪಡುತ್ತದೆ. ಹಬ್ಬಕ್ಕಾಗಿ ದೂರದೂರುಗಳಿಂದ ನೆಂಟರಿಷ್ಟರನ್ನು ಕರೆಸಿಕೊಂಡು ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸಿ ಒಬ್ಬಟ್ಟಿನ ಊಟ ಮಾಡುತ್ತಾರೆ

ಉಪವಾಸ: ರಾಮನವಮಿಯಂದು ರಾಮನ ಉತ್ಸವ ಮೂರ್ತಿಯ ಪಲ್ಲಕ್ಕಿಯನ್ನು ಹೊತ್ತುಕೊಂಡು ಗ್ರಾಮ ದೇವತೆಗಳೊಂದಿಗೆ ಭಜನೆ ಮಾಡುತ್ತ ಹುಳಿಯಾರಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ಸು ಗ್ರಾಮಕ್ಕೆ ಮರಳಿ ಬಂದು ಗ್ರಾಮದಲ್ಲಿನ ಎಲ್ಲಮ್ಮ,ಹೊಸೂರಮ್ಮ,ಗರುಡನಗುಡಿ, ಬಸವನ ಗುಡ್ಡೆ, ಮಾರುತಿ ಗುಡ್ಡೆಗಳಿಗೆ ಪೂಜೆ ಸಲ್ಲಿಸಿ ನಂತರ ಶ್ರೀಸ್ವಾಮಿಯವರ ಮೂಲಗುಡಿಗೆ ತೆರಳುವವರೆಗೂ ಎಲ್ಲರೂ ಉಪವಾಸವಿರುತ್ತಾರೆ.ಸಂಜೆ ಮಹಾಮಂಗಳಾರತಿ ನಡೆದು ಪಾನಕ ವಿತರಿಸಿದಾಗಲಷ್ಟೆ ಎಲ್ಲರ ಮನೆಯಲ್ಲೂ ಊಟದ ಕಾರ್ಯಕ್ರಮ.

                ಸಂಜೆ ನೂರೊಂದು ಎಡೆ ಸೇವೆ,ಬಿಲ್ಲುಗೂಡು ಸೇವೆ ಸಲ್ಲಿಸುವ ಮೂಲಕ ದಾಸಯ್ಯಗಳಿಗೆ ಎಡೆ ಇಟ್ಟು ಎಲ್ಲರು ಒಟ್ಟಾಗಿ ರಾಮಭಜನೆ ಮಾಡುವುದರೊಂದಿಗೆ ಒಂಬತ್ತುದಿನಗಳ ಕಾಲದ ಆಚರಣೆ ಕೊನೆಗೊಳ್ಳುತ್ತದೆ.



                   ಒಟ್ಟಾರೆ ಲಿಂಗಪ್ಪನಪಾಳ್ಯದ ಗ್ರಾಮಸ್ಥರು ಹಲವು ಹಬ್ಬಗಳ ಜೊತೆ ರಾಮನವಮಿಯನ್ನು ವಿಶಿಷ್ಟವಾಗಿ ಆಚರಿಸುತ್ತ ಬಂದಿರುವುದು ಈ ಭಾಗದ ವಿಶೇಷ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...