ವಿಷಯಕ್ಕೆ ಹೋಗಿ

ಎರಡೇ ದಿನದಲ್ಲಿ ನೂರಕ್ಕೂ ಮೀರಿ ಕುರಿಗಳ ಸಾವು :ಆತಂಕದಲ್ಲಿ ಕುರಿಗಾಹಿಗಳು

ಹುಳಿಯಾರು:ಚಿಕ್ಕನಾಯಕನಹಳ್ಳಿ ಹಾಗೂ ಹಿರಿಯೂರು ಗಡಿ ಭಾಗವಾದ ಪುರದಯ್ಯನಪಾಳ್ಯದ ಬಿಡಾರದಲ್ಲಿ ಶನಿವಾರ ರಾತ್ರಿಯಿಂದ ಸುಮಾರು ಐವತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು ದಿಡೀರ್ ಘಟನೆಯಿಂದಾಗಿ ಕುರಿಗಾಹಿಗಳು ಆತಂಕಗೊಂಡಿದ್ದು ಆಂತ್ರಾಕ್ಸ್ ರೋಗವಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.

             ಕುರಿಗಾಹಿಗಳು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ದಿಂಡಾವರ ಬಾಲದೇವರಹಟ್ಟಿಯವರಾಗಿದ್ದು ತಮ್ಮ ಜೀವನ ನಿರ್ವಹಣೆಗೆ ತಿಂಗಳ ಹಿಂದೆ ವಲಸೆ ಬಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದಸೂಡಿ ಹತ್ತಿರದ ಬಳ್ಳಪ್ಪನಹಟ್ಟಿಯ ಸಮೀಪದಲ್ಲಿ ಬಿಡಾರ ಹಾಕಿದ್ದರು.
                 ಶನಿವಾರ ರಾತ್ರಿ ಇದ್ದಕ್ಕಿಂದ್ದಂತೆ ಕುರಿಗಳ ಬಾಯಲ್ಲಿ ರಕ್ತ ಬಂದು ಅರ್ಧ ಗಂಟೆಯೊಳಗೆ ಕೆಲವು ಕುರಿಗಳು ಸತ್ತಿದ್ದರೆ ಇನ್ನು ಕೆಲವು ಹೊಟ್ಟೆ ಉಬ್ಬರದಿಂದ ಸಾಯುತ್ತಿದ್ದು ಪಶು ವೈದ್ಯರಿಗೆ ಶನಿವಾರ ರಾತ್ರಿಯೆ ವಿಷಯ ಮುಟ್ಟಿಸಿದ್ದಾಗಿ ,ಇದು ಆಂತ್ರಾಕ್ಸ್‌ ಕಾಯಿಲೆ ಎಂದು ಪಶು ವೈದ್ಯರು ತಿಳಿಸಿರುವುದಾಗಿ ಕುರಿಗಾಹಿಗಳಾದ ದಾಸಪ್ಪ . ಜಯಣ್ಣ , ಹಾಗೂ ಕರಿಯಣ್ಣ ತಿಳಿಸಿದ್ದಾರೆ.

                 ಶನಿವಾರ ರಾತ್ರಿ ಸುಮಾರು ೫೦ ಕುರಿಗಳು ಸಾವನ್ನಪ್ಪಿದರೆ ಭಾನುವಾರದಂದು ಸುಮಾರು 20 ಕುರಿಗಳು ಸತ್ತಿದ್ದು ಮಂದೆಯಲ್ಲಿ 50 ರಿಂದ 60 ಕುರಿಗಳು ಚಿಂತಾಜನಕ ಸ್ಥಿತಿಯಲ್ಲಿದೆ ಎನ್ನಲಾಗಿದೆ.
                ಭಾನುವಾರ ಪಶುವೈದ್ಯಕೀಯ ಇಲಾಖೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಹಾಯಕ ನಿರ್ದೇಶಕ ನಾಗರಾಜು ಹಾಗೂ ಹಿರಿಯೂರು ತಾಲ್ಲೂಕಿನ ಸಹಾಯಕ ನಿರ್ದೇಶಕ ರವಿ ಭೇಟಿ ನೀಡಿದ್ದು ವ್ಯಾಕ್ಸಿನೇಷನ್ ಮಾಡಿ ಸ್ಯಾಂಪಲ್ ಲ್ಯಾಬ್ ಗೆ ಕಳುಹಿಸಿಕೊಟ್ಟಿದ್ದಾರೆ.
              ಒಟ್ಟಾರೆ ಕುರಿಗಳ ಸಾವಿನಿಂದ ಸುತ್ತಲ ಗ್ರಾಮಗಳ ಕುರಿಗಾಹಿಗಳು ಗ್ರಾಮದ ಇತರೆ ಕುರಿಗಳಿಗೂ ರೋಗಹಬ್ಬಿದಲ್ಲಿ ಮುಂದೇನು ಎಂಬ ಆತಂಕಕ್ಕೊಳ್ಳಗಾಗಿದ್ದು ಪಶುವೈದ್ಯರು ಕೂಡಲೇ ಗಮನ ಹರಿಸಿ ರೋಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು.ತಾತ್ಕಾಲಿಕ ಚಿಕಿತ್ಸೆಗಾಗಿ ಪಶು ವೈದ್ಯಕೀಯ ಪರೀಕ್ಷಕರನ್ನು ಎರಡು ದಿನಗಳ ಮಟ್ಟಿಗೆ ಅಲ್ಲೆ ನೆಲೆಯೂರುವಂತೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
---------------------------------
ಇವರಿಗೆ ಕುರಿ ಸಾಕಾಣಿಕೆಯೇ ಜೀವನಕ್ಕೆ ಆಧಾರವಾಗಿದ್ದು ಇಲಾಖೆಯವರು ಸತ್ತ ಕುರಿಗಳಿಗೆ ಪರಿಹಾರಕೊಡಬೇಕು. ಪಶುವೈದ್ಯರು ಉಳಿದ ಕುರಿಗಳು ಸಾಯದಂತೆ ರೋಗ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು. :ಮಂಜು ಯಾದವ್ ಕೆಂಪರಾಯನಹಟ್ಟಿ-ತಾಲ್ಲೂಕ್ ಕಾಡುಗೊಲ್ಲರ ಯುವಸೇನೆಯ ಅಧ್ಯಕ್ಷ
---------------------------------
ಕುರಿಗಳ ಸಾವು ಆಂತ್ರಾಕ್ಸ್‌ ನಿಂದಾಗಿರಬಹುದೆಂದು ಶಂಕಿಸಲಾಗಿದ್ದು ಇಲಾಖೆಯಿಂದ ಮಂದೆಯಲ್ಲಿದ್ದ ಉಳಿದ ಕುರಿಗಳಿಗೆ ಮುಂಜಾಗ್ರತೆಯಾಗಿ ಚುಚ್ಚುಮದ್ದು ನೀಡಿ ರೋಗನಿಯಂತ್ರಣಕ್ಕೆ ಮುಂದಾಗಿದ್ದು ಕುರಿಗಾರರು ಮುಂಜಾಗ್ರತೆಯಾಗಿ ಕುರಿಗಳಿಗೆ ಚುಚ್ಚುಮದ್ದನ್ನು ಹಾಕಿಸಬೇಕು;ರವೀದ್ರಸಿಂಗ್ -ಪಶು ವೈದ್ಯ

----------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.