ವಿಷಯಕ್ಕೆ ಹೋಗಿ

ಹುಳಿಯಾರು :ಎಲ್ಲೆಲ್ಲೂ ರಾಮನವಮಿ ಸಂಭ್ರಮ

ಹುಳಿಯಾರು :ಪಟ್ಟಣದ ವಿವಿಧ ದೇವಾಲಯಗಳು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಾದ ಸೀಗೆಬಾಗಿ,ಹೊಸಹಳ್ಳಿ, ಕೆಂಕೆರೆ, ತಿರುಮಲಾಪುರ,ದಸೂಡಿ,ನಂದಿಹಳ್ಳಿ ಗ್ರಾಮಗಳ ದೇವಾಲಯಗಳಲ್ಲಿ ಶುಕ್ರವಾರದಂದು ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಎಲ್ಲಾ ದೇವಾಲಯಗಳಲ್ಲೂ ಪೂಜಾ ಕೈಂಕರ್ಯಗಳನ್ನು ನಡೆಸಿ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ ,ಕೋಸಂಬರಿ ವಿತರಿಸಲಾಯಿತು.

ಪಟ್ಟಣದ ಅಂಜನೇಯಸ್ವಾಮಿ ಸನ್ನಿಧಿ, ಅನಂತಶಯನ ರಂಗನಾಥಸ್ವಾಮಿ ಸನ್ನಿಧಿ, ಗಾಂಧಿಪೇಟೆಯ ಶನೇಶ್ವರಸ್ವಾಮಿ ದೇವಾಲಯ, ಕಾಳಿಕಾಂಭ ದೇವಾಲಯ, ಗ್ರಾಮದೇವತೆ ಹುಳಿಯಾರಮ್ಮನ ದೇವಾಲಯದಲ್ಲಿಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯ ದಿನದ ಅಂಗವಾಗಿ ಶುಕ್ರವಾರ ಬೆಳಗಿನಿಂದಲೇ ವಿಶೇಷ ಅರ್ಚನೆ, ಪೂಜೆ ಕೈಂಕರ್ಯ ನಡೆದವು.


ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ಮುಂಜಾನೆ ರಾಮಚಂದ್ರಭಟ್ಟರಿಂದ ಅರ್ಚನೆ,ಅಭಿಷೇಕ ನಡೆದು ರಾಮತಾರಕ ಮಂತ್ರ ಜಪಿಸಲಾಯಿತು.ಭಕ್ತಾಧಿಗಳಿಂದ ರಾಮಭಜನೆ ನಡೆಯಿತು.ಲಿಂಗಪ್ಪನಪಾಳ್ಯದ ರಾಮದೇವರು,ಹುಳಿಯಾರು ಗ್ರಾಮದೇವತೆಗಳಾದ ಹುಳಿಯಾರಮ್ಮ,ದುರ್ಗಮ್ಮ,ರಂಗನಾಥಸ್ವಾಮಿ,ಶನಿದೇವರ ಉತ್ಸವಮೂರ್ತಿಗಳ ಆಗಮನದ ನಂತರ ಮಹಾಮಂಗಳಾರತಿ ನಡೆಸಲಾಯಿತು. ಶ್ರೀ ಆಂಜನೇಯ ಸ್ವಾಮಿ ಸೇವಾ ಛಾರಿಟಬಲ್ ಟ್ರಸ್ಟ್ ಹಾಗೂ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ,ಕಡಲೆಕಾಳು ಉಸ್ಲಿ ವಿತರಿಸಲಾಯಿತು.

ಈ ವೇಳೆ ದೇವಾಲಯ ಸಮಿತಿಯ ಬಡಗಿ ರಾಮಣ್ಣ ಧನಂಜಯ್,ಟ್ರಾಕ್ಟರ್ ಮಂಜಣ್ಣ, ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಅಶೋಕ್ ಬಾಬು, ಮೆಡಿಕಲ್ ಚನ್ನಬಸವಯ್ಯ, ದಯಾನಂದ್, ಕೆ.ಎಮ್.ಎಲ್ ಮೂರ್ತಿ,ಪ್ರತಾಪ್,ಲೋಕೇಶ್,ಹರೀಶ್ ನಾಯ್ಕ್, ಮನು,ಎಸ್.ಬಿ.ಎಂ ಗ್ರೋಪ್ಸ್ ನ ಸದಸ್ಯರು ಸೇರಿದಂತೆ ಇತರರಿದ್ದರು.


ಪಟ್ಟಣದ ಸೀತಾರಾಮ ಕಲ್ಯಾಣಮಂದಿರದಲ್ಲಿ ವಿಪ್ರಸಂಘದಿಂದ ಶ್ರಿರಾಮಮೂರ್ತಿಗೆ ಪೂಜೆ ಸಲ್ಲಿಸಿ,ಮಹಿಳ ಸಂಘದಿಂದ ರಾಮಭಜನೆ ಮಾಡಿ,ಗೊಜ್ಜವಲಕ್ಕಿ, ಪಾನಕ,ಮಜ್ಜಿಗೆ ವಿತರಿಸಲಾಯಿತು. ವಾಸವಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿಯವರಿಂದ, ಅನಂತಶಯನ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವಾಲಯ ಸಮಿತಿಯವರಿಂದ ರಾಮನವಮಿ ಆಚರಿಸಿ ಪಾನಕ,ಕೋಸಂಬರಿ ವಿತರಿಸಲಾಯಿತು.

ರಾಮನವಮಿಯನ್ನು ಊರಹಬ್ಬವಾಗಿ ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಲಿಂಗಪ್ಪನಪಾಳ್ಯದಲ್ಲಿ ಈ ವರ್ಷವೂ ಸಹ ಶ್ರೀರಾಮದೇವರ ಉತ್ಸವ ಮೂರ್ತಿಯನ್ನು ಹುಳಿಯಾರಿನ ಗ್ರಾಮದೇವತೆಗಳಾದ ದುರ್ಗಮ್ಮ,ಹುಳಿಯಾರಮ್ಮನವರೊಂದಿಗೆ ಬಸವನ ನಗಾರಿ ಸಮೇತ ಸಕಲವಾದ್ಯದೊಂದಿಗೆ ಭಜನಾ ತಂಡದವರ ರಾಮಭಜನಾ ಗಾಯನದೊಂದಿಗೆ ಪಟ್ಟಣದ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆತರಲಾಯಿತು. ಅಲ್ಲಿ ಪೂಜೆ ಸಲ್ಲಿಸಿದ ತರವಾಯ ಮೆರವಣೆಗೆಯಲ್ಲಿ ಶನೇಶ್ವಸ್ವಾಮಿ,ರಂಗನಾಥಸ್ವಾಮಿ ದೇವಾಲಯಗಳಿಗೆತೆರಳಿ ಮಂಗಲಾರತಿ ಸಲ್ಲಿಸಿ ಉರಿ ಬಿಸಿಲಿನಲ್ಲಿ ದೇವರುಗಳನ್ನು ಲಿಂಗಪ್ಪನಪಾಳ್ಯಕ್ಕೆ ವಾಪಸ್ಸು ಕರೆದೊಯ್ಯಲಾಯಿತು.ಬಿಲ್ಲುಗೂಡು ಸೇವೆ,ದಾಸಪ್ಪಗಳಿಗೆ ಎಡೆಯಿಟ್ಟ ನಂತರ ಪಾನಕ ಪನಿವಾರ ವಿತರಿಸಲಾಯಿತು.




ಪಟ್ಟಣದ ಹೆಚ್ಚಿನ ಮನೆಮನೆಗಳಲ್ಲೂ ಸಹ ಶ್ರೀರಾಮನನ್ನು ಆರಾಧಸಿ, ನಂತರ ಕೋಸಂಬರಿ, ಬೇಲದ ಹಣ್ಣಿನ ಪಾನಕ, ಮಜ್ಜಿಗೆ, ಕೋಸುಂಬರಿ ನೈವೇದ್ಯ ಸಮರ್ಪಿಸಿ ಅಕ್ಕಪಕ್ಕದವರನ್ನು ಕರೆದು ಪ್ರಸಾದ ನೀಡುವ ಮೂಲಕ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...