ವಿಷಯಕ್ಕೆ ಹೋಗಿ

ಹುಳಿಯಾರು :ಎಲ್ಲೆಲ್ಲೂ ರಾಮನವಮಿ ಸಂಭ್ರಮ

ಹುಳಿಯಾರು :ಪಟ್ಟಣದ ವಿವಿಧ ದೇವಾಲಯಗಳು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಾದ ಸೀಗೆಬಾಗಿ,ಹೊಸಹಳ್ಳಿ, ಕೆಂಕೆರೆ, ತಿರುಮಲಾಪುರ,ದಸೂಡಿ,ನಂದಿಹಳ್ಳಿ ಗ್ರಾಮಗಳ ದೇವಾಲಯಗಳಲ್ಲಿ ಶುಕ್ರವಾರದಂದು ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಎಲ್ಲಾ ದೇವಾಲಯಗಳಲ್ಲೂ ಪೂಜಾ ಕೈಂಕರ್ಯಗಳನ್ನು ನಡೆಸಿ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ ,ಕೋಸಂಬರಿ ವಿತರಿಸಲಾಯಿತು.

ಪಟ್ಟಣದ ಅಂಜನೇಯಸ್ವಾಮಿ ಸನ್ನಿಧಿ, ಅನಂತಶಯನ ರಂಗನಾಥಸ್ವಾಮಿ ಸನ್ನಿಧಿ, ಗಾಂಧಿಪೇಟೆಯ ಶನೇಶ್ವರಸ್ವಾಮಿ ದೇವಾಲಯ, ಕಾಳಿಕಾಂಭ ದೇವಾಲಯ, ಗ್ರಾಮದೇವತೆ ಹುಳಿಯಾರಮ್ಮನ ದೇವಾಲಯದಲ್ಲಿಶ್ರೀರಾಮಚಂದ್ರ ಹುಟ್ಟಿದ ದಿನವಾದ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯ ದಿನದ ಅಂಗವಾಗಿ ಶುಕ್ರವಾರ ಬೆಳಗಿನಿಂದಲೇ ವಿಶೇಷ ಅರ್ಚನೆ, ಪೂಜೆ ಕೈಂಕರ್ಯ ನಡೆದವು.


ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ಮುಂಜಾನೆ ರಾಮಚಂದ್ರಭಟ್ಟರಿಂದ ಅರ್ಚನೆ,ಅಭಿಷೇಕ ನಡೆದು ರಾಮತಾರಕ ಮಂತ್ರ ಜಪಿಸಲಾಯಿತು.ಭಕ್ತಾಧಿಗಳಿಂದ ರಾಮಭಜನೆ ನಡೆಯಿತು.ಲಿಂಗಪ್ಪನಪಾಳ್ಯದ ರಾಮದೇವರು,ಹುಳಿಯಾರು ಗ್ರಾಮದೇವತೆಗಳಾದ ಹುಳಿಯಾರಮ್ಮ,ದುರ್ಗಮ್ಮ,ರಂಗನಾಥಸ್ವಾಮಿ,ಶನಿದೇವರ ಉತ್ಸವಮೂರ್ತಿಗಳ ಆಗಮನದ ನಂತರ ಮಹಾಮಂಗಳಾರತಿ ನಡೆಸಲಾಯಿತು. ಶ್ರೀ ಆಂಜನೇಯ ಸ್ವಾಮಿ ಸೇವಾ ಛಾರಿಟಬಲ್ ಟ್ರಸ್ಟ್ ಹಾಗೂ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ,ಕಡಲೆಕಾಳು ಉಸ್ಲಿ ವಿತರಿಸಲಾಯಿತು.

ಈ ವೇಳೆ ದೇವಾಲಯ ಸಮಿತಿಯ ಬಡಗಿ ರಾಮಣ್ಣ ಧನಂಜಯ್,ಟ್ರಾಕ್ಟರ್ ಮಂಜಣ್ಣ, ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಅಶೋಕ್ ಬಾಬು, ಮೆಡಿಕಲ್ ಚನ್ನಬಸವಯ್ಯ, ದಯಾನಂದ್, ಕೆ.ಎಮ್.ಎಲ್ ಮೂರ್ತಿ,ಪ್ರತಾಪ್,ಲೋಕೇಶ್,ಹರೀಶ್ ನಾಯ್ಕ್, ಮನು,ಎಸ್.ಬಿ.ಎಂ ಗ್ರೋಪ್ಸ್ ನ ಸದಸ್ಯರು ಸೇರಿದಂತೆ ಇತರರಿದ್ದರು.


ಪಟ್ಟಣದ ಸೀತಾರಾಮ ಕಲ್ಯಾಣಮಂದಿರದಲ್ಲಿ ವಿಪ್ರಸಂಘದಿಂದ ಶ್ರಿರಾಮಮೂರ್ತಿಗೆ ಪೂಜೆ ಸಲ್ಲಿಸಿ,ಮಹಿಳ ಸಂಘದಿಂದ ರಾಮಭಜನೆ ಮಾಡಿ,ಗೊಜ್ಜವಲಕ್ಕಿ, ಪಾನಕ,ಮಜ್ಜಿಗೆ ವಿತರಿಸಲಾಯಿತು. ವಾಸವಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿಯವರಿಂದ, ಅನಂತಶಯನ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವಾಲಯ ಸಮಿತಿಯವರಿಂದ ರಾಮನವಮಿ ಆಚರಿಸಿ ಪಾನಕ,ಕೋಸಂಬರಿ ವಿತರಿಸಲಾಯಿತು.

ರಾಮನವಮಿಯನ್ನು ಊರಹಬ್ಬವಾಗಿ ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಲಿಂಗಪ್ಪನಪಾಳ್ಯದಲ್ಲಿ ಈ ವರ್ಷವೂ ಸಹ ಶ್ರೀರಾಮದೇವರ ಉತ್ಸವ ಮೂರ್ತಿಯನ್ನು ಹುಳಿಯಾರಿನ ಗ್ರಾಮದೇವತೆಗಳಾದ ದುರ್ಗಮ್ಮ,ಹುಳಿಯಾರಮ್ಮನವರೊಂದಿಗೆ ಬಸವನ ನಗಾರಿ ಸಮೇತ ಸಕಲವಾದ್ಯದೊಂದಿಗೆ ಭಜನಾ ತಂಡದವರ ರಾಮಭಜನಾ ಗಾಯನದೊಂದಿಗೆ ಪಟ್ಟಣದ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆತರಲಾಯಿತು. ಅಲ್ಲಿ ಪೂಜೆ ಸಲ್ಲಿಸಿದ ತರವಾಯ ಮೆರವಣೆಗೆಯಲ್ಲಿ ಶನೇಶ್ವಸ್ವಾಮಿ,ರಂಗನಾಥಸ್ವಾಮಿ ದೇವಾಲಯಗಳಿಗೆತೆರಳಿ ಮಂಗಲಾರತಿ ಸಲ್ಲಿಸಿ ಉರಿ ಬಿಸಿಲಿನಲ್ಲಿ ದೇವರುಗಳನ್ನು ಲಿಂಗಪ್ಪನಪಾಳ್ಯಕ್ಕೆ ವಾಪಸ್ಸು ಕರೆದೊಯ್ಯಲಾಯಿತು.ಬಿಲ್ಲುಗೂಡು ಸೇವೆ,ದಾಸಪ್ಪಗಳಿಗೆ ಎಡೆಯಿಟ್ಟ ನಂತರ ಪಾನಕ ಪನಿವಾರ ವಿತರಿಸಲಾಯಿತು.




ಪಟ್ಟಣದ ಹೆಚ್ಚಿನ ಮನೆಮನೆಗಳಲ್ಲೂ ಸಹ ಶ್ರೀರಾಮನನ್ನು ಆರಾಧಸಿ, ನಂತರ ಕೋಸಂಬರಿ, ಬೇಲದ ಹಣ್ಣಿನ ಪಾನಕ, ಮಜ್ಜಿಗೆ, ಕೋಸುಂಬರಿ ನೈವೇದ್ಯ ಸಮರ್ಪಿಸಿ ಅಕ್ಕಪಕ್ಕದವರನ್ನು ಕರೆದು ಪ್ರಸಾದ ನೀಡುವ ಮೂಲಕ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...