ವಿಷಯಕ್ಕೆ ಹೋಗಿ

ತಿರುಮಲಾಪುರ ಪಂಚಾಯ್ತಿ: ಶೌಚಾಲಯಗಳ ಫಲಾನುಭವಿಗಳಿಗೆ ಹಣ ಬಿಡುಗಡೆ

ಆರೋಪದಲ್ಲಿ ಯಾವುದೇ ಹುರುಳಿಲ್ಲ :ಅಧ್ಯಕ್ಷ ದೇವರಾಜು
----------------------
ಹುಳಿಯಾರು: ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ತಿರುಮಲಾಪುರ ಗ್ರಾಮ ಪಂಚಾಯ್ತಿಗೆ ಶೌಚಾಲಯಗಳ ನಿರ್ಮಾಣಕ್ಕಾಗಿ ಒಟ್ಟು ೧೨ ಲಕ್ಷ ಅನುದಾನದಲ್ಲಿ ಸಧ್ಯ ೪ ಲಕ್ಷ ರೂ ಮಾತ್ರವೇ ಬಿಡುಗಡೆಯಾಗಿದ್ದು ಸಭೆಯಲ್ಲಿ ತೀರ್ಮಾನಿಸಿದಂತೆ ಫಲಾನುಭವಿಗಳಿಗೆ ಹಣ ಬಿಡುಗಡೆಮಾಡಲಾಗಿದ್ದು ಈ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿರುವುದು ಸತ್ಯಕ್ಕೆ ದೂರ ಎಂದು ತಿರುಮಲಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ದೇವರಾಜು ಸ್ಪಷ್ಟೀಕರಣ ನೀಡಿದ್ದಾರೆ.
ಶೌಚಾಲಯದ ಹಣ ಬಿಡುಗಡೆಯಾಗಿರುವ ಬಗ್ಗೆ ಹುಳಿಯಾರು ಹೋಬಳಿ ತಿರುಮಲಾಪುರದ ಗ್ರಾಮ.ಪಂ.ಕಛೇರಿಯಲ್ಲಿ ಸ್ಪಷ್ಟಿಕರಣ ನೀಡಿದ ಅಧ್ಯಕ್ಷ ದೇವರಾಜು.ಉಪಾಧ್ಯಕ್ಷ ಮೋಹನ್ ಕುಮಾರ್,ಕಾರ್ಯದರ್ಶಿ ಗಂಗಾಧರಯ್ಯ ಇದ್ದಾರೆ.
            ಹುಳಿಯಾರು ಹೋಬಳಿಯ ತಿರುಮಲಾಪುರ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರದಂದು ಸದಸ್ಯರುಗಳೊಡನೆ ಪತ್ರಿಕಾಗೋಷ್ಟಿ ನಡೆಸಿದ ಅವರು ಎರಡು ದಿನಗಳ ಹಿಂದೆ ಕೆಲವರು ಶೌಚಾಲಯ ಗಳನ್ನು ನಿರ್ಮಿಸಿದ ಹಣ ನೀಡಿಲ್ಲವೆಂದು ಆರೋಪಿಸಿ ಪಂಚಾಯ್ತಿಗೆ ಬೀಗ ಹಾಕಿದ ಘಟನೆ ದುರುದ್ದೇಶ ಪೂರಕ ಎಂದರು.
               ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದ ಅವರು ಯೋಜನೆ ಪ್ರಗತಿಯಲಿದ್ದು ಶೌಚಾಲ­ಯ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಸದ್ಯ ನಾಲ್ಕು ಸಾವಿರ ರೂಗಳಂತೆ ಹಣ ಜಮಾ ಮಾಡಲಾಗಿದೆ ಎಂದರು. 
              ಸರ್ಕಾರದಿಂದ ಇನ್ನೂ ಆರು ಲಕ್ಷ ರೂಗಳ ಅನುದಾನ ಬಾಕಿಯಿದೆ. ಸರ್ಕಾರದಿಂದ ಅನುದಾನ ವಿಳಂಬವಾಗುತ್ತಿರು­ವುದರಿಂದ ಫಲಾನುಭವಿಗಳಿಗೆ ಸಮಸ್ಯೆಯಾಗಿದ್ದು ಸದ್ಯ ವಾರದ ಹಿಂದೆ ಬಿಡುಗಡೆಯಾಗಿರುವ ನಾಲ್ಕು ಲಕ್ಷದಷ್ಟು ಅನುದಾನವನ್ನು ಆದ್ಯತೆ ಮೇರೆಗೆ ೩೦ ಮಂದಿಗೆ ತಲಾ ನಾಲ್ಕು ಸಾವಿರ ರೂ ಹಾಗೂ ಇಪ್ಪತ್ತು ಮಂದಿಗೆ ೧೨ ಸಾವಿರದಂತೆ ವಿತರಣೆ ಮಾಡಲಾ­ಗಿದ್ದು, ಬಾಕಿ ಇರುವ ಅನುದಾನದ ಮಂಜೂರಾ­ತಿಗಾಗಿ ಸರ್ಕಾರಕ್ಕೆ ಪತ್ರ ಮುಖೇನ ಪ್ರಸ್ತಾವ ಸಲ್ಲಿಸಲಾಗಿದೆ. ೧೨ಲಕ್ಷದಲ್ಲಿ ಬಾಕಿಯಿರುವ ಆರು ಲಕ್ಷ ಬರುತ್ತಿದ್ದಂತೆಯೆ ಶೌಚಾಲಯ ನಿರ್ಮಿಸಿಕೊಂಡಿರುವ ಎಲ್ಲ ಫಲಾನುಭವಿಗಳಿಗೆ ಅನುದಾನ ನೀಡಲಾಗುವುದು ಎಂದರು.

               ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೊಸಳ್ಳಿ ಕೃಷ್ಣಮೂರ್ತಿ ಮಾತನಾಡಿ ಈ ಹಿಂದಿದ್ದ ಕಾರ್ಯದರ್ಶಿ ರಮೇಶ್ ಅವರ ಅವಧಿಯಲ್ಲೆ ಅನುದಾನ ಬಿಡುಗಡೆಯಾಗಿದ್ದರು ಸಹ ಹಣಕ್ಕಾಗಿ ತಡಮಾಡಿದ್ದಾರೆ.ಹಾಲಿ ಕಾರ್ಯದರ್ಶಿ ಗಂಗಾಧರಯ್ಯನವರು ಏ.೨೭ರಂದು ಪಂಚಾಯ್ತಿಯ ಚಾರ್ಜ್ ವಹಿಸಿಕೊಂಡಿದ್ದು ,ಬರುತ್ತಿದ್ದಂತೆಯೆ ಮೇ.೨ ರಂದು ಸಭೆ ಕರೆದು ಶೌಚಾಲಯದ ಅನುದಾನದ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಿ ಪಲಾನುಭವಿಗಳ ಪಟ್ಟಿ ತಯಾರು ಮಾಡಿ ಹಣಬಿಡುಗಡೆ ಮಾಡಿದ್ದಾರೆ.
             ಅಲ್ಲದೆ ಬರಗಾಲ ಪರಿಸ್ಥಿತಿ ಬಗ್ಗೆ ನಿಗಾವಹಿಸಿ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಆಧ್ಯತೆ ನೀಡಿದ್ದಾರೆ.ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಬಿಡುಗಡೆ ಮಾಡಲು ಕಾಮಗಾರಿ ಪರಿಶೀಲಿಸಲು ಮುಂದಾಗಿದ್ದೆ ಅವರ ಮೇಲೆ ವೃಥಾ ಆರೋ ಮಾಡಲು ಕಾರಣವಾಗಿದೆ.ಪಂಚಾಯ್ತಿ ವ್ಯಾಪ್ತಿಯ ಯಾವುದೇ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯೂ ಇಲ್ಲ. ದಿನದ ೨೪ ಗಂಟೆಯೂ ಸ್ಪಂದಿಸುವ ಮನೋಭಾವ ಹೊಂದಿರುವ ಅವರ ಬಗ್ಗೆ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಪ್ರತಿಪಾದಿಸಿದರು.


        ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಮೋಹನ್ ಕುಮಾರ್,ಸದಸ್ಯರಾದ ಪ್ರಕಾಶ್,ಶಂಕ್ರಯ್ಯ, ದಯಾನಂದ ಮೂರ್ತಿ,ಮಾಜಿ ಸದಸ್ಯ ಸುರೇಶ್,ಕಾರ್ಯದರ್ಶಿ ಗಂಗಾಧರಯ್ಯ ಸೇರಿದಂತೆ ಹೊಸಳ್ಳಿ, ನಂದಿಹಳ್ಳಿ, ತೊರೆಸೂರಗೊಂಡನಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...