ವಿಷಯಕ್ಕೆ ಹೋಗಿ

ರಾಗಿ ಕೇಂದ್ರದಿಂದ ಬಾರದ ಬಾಕಿ:ಎಪಿಎಂಸಿಗೆ ಎಡೆತಾಕುತ್ತಿರುವ ರೈತರು

ಹುಳಿಯಾರು:ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಕೇಂದ್ರದ ಮೂಲಕ ಸರ್ಕಾರ ಖರೀದಿ ಮಾಡಿದ್ದ ರಾಗಿಗೆ ಎರಡು ತಿಂಗಳಾಗುತ್ತಾ ಬಂದರೂ ಹಣ ಪಾವತಿ ಮಾಡದಿರುವುದರಿಂದ ಕಂಗಾಲಾಗಿರುವ ರೈತರು ಬರದ ಇಂದಿನ ಪರಿಸ್ಥಿತಿಯಲ್ಲಿ ಕೈಯಲ್ಲಿ ಕಾಸಿಲ್ಲದೆ ಪರದಾಡುತ್ತಿದ್ದು ಖರೀದಿ ಕೇಂದ್ರಗಳ ಉಸಾಬರಿಯೇ ಬೇಡವೆಂದು ತೀರ್ಮಾನಿಸಿದ್ದಾರೆ.

              ಖರೀದಿ ಕೇಂದ್ರ ಪ್ರಾರಂಭದಲ್ಲಿ ರಾಗಿ ಮಾರಿದ ವಾರದೊಳಗೆ ರೈತರ ಖಾತೆಗೆ ಹಣ ಪಾವತಿ ಮಾಡಲಾಗುವುದೆಂದು ಹೇಳಿದ್ದ ಇಲಾಖೆ ಇದೀಗ ತಿಂಗಳುಗಳುರುಳಿದರೂ ಪಾವತಿ ಮಾಡದೆ ಮುಗ್ಗುಮ್ಮಾಗಿ ಕುಳಿತಿರುವುದು ಸಮಸ್ಯೆಗೆ ಕಾರಣವಾಗಿದೆ.

ತಿಂಗಳಾದರೂ ಇಲ್ಲ:ತೀವ್ರ ಕುಸಿತ ಕಂಡಿದ್ದ ರಾಗಿಗೆ ಬೆಂಬಲ ಬೆಲೆ ಘೋಷಿಸಿ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರೆದ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಪ್ರತಿ ಕ್ವಿಂಟಾಲ್‌ ರಾಗಿಗೆ ೨,೧೦೦ ರೂ. ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿತ್ತು. ಜನವರಿ ೨೨ರಿಂದ ಮಾರ್ಚ್ ೨೯ ರವರೆಗೆ ಖರೀದಿ ನಡೆದಿದ್ದು ಹುಳಿಯಾರು ಕೇಂದ್ರದಲ್ಲಿ ಒಟ್ಟು ೨೩೩೩ ರೈತರುಗಳಿಂದ ೫೬೫೪೦ ಕ್ವಿಂಟಾಲ್ ರಾಗಿ ರೈತರಿಂದ ಕೊಳ್ಳಲಾಗಿತ್ತು. ಒಟ್ಟು ೧೧ಕೋಟಿ ೮೭ ಲಕ್ಷದ ೩೫ ಸಾವಿರ ರೂಪಾಯಿಗಳ ರಾಗಿ ಖರೀದಿ ಮಾಡಿದ ನಿಗಮ ಇದುವರೆಗೂ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಿದೆ.ಕಡೆಯದಾಗಿ ಮಾರ್ಚ್ ೩ ರಿಂದ ೧೯ ರವರೆಗಿನ ಖರೀದಿಗಾಗಿ ಮೇ ೧೦ರಂದು ಹಣ ಬಿಡುಗಡೆ ಮಾಡಿದ್ದರೂ ಸಹ ಇನ್ನೂ ಸಾಕಷ್ಟು ರೈತರಿಗೆ ಬಾಕಿ ಉಳಿಸಿದ್ದಾರೆ.

ಸಮಸ್ಯೆ ಏನು:ಎಪಿಎಂಸಿಯಲ್ಲಿ ೧೪೦೦ ರ ಆಸುಪಾಸಿನಲ್ಲಿ ಮಾರಾಟವಾಗುತ್ತಿದ್ದ ರಾಗಿಯ ಬೆಲೆ ಕುಸಿತದಿಂದ ಕಂಗೆಟ್ಟಿದ ರೈತರಿಗೆ ಸರ್ಕಾರ ಪ್ರಾರಂಭಿಸಿದ ಖರೀದಿ ಕೇಂದ್ರ ವರದಾನವಾಗಿದ್ದೇನೋ ಸರಿ.ಕೇಂದ್ರ ಪ್ರಾರಂಭದಿಂದಾಗಿ ಮಾರುಕಟ್ಟೆಯಲ್ಲಿ ಇಳಿಮುಖವಾಗಿದ್ದ ರಾಗಿ ಬೆಲೆಯೂ ಏರಿಕೆ ಕಂಡು ೧೮೦೦ರೂ ಆಸುಪಾಸಿನಲ್ಲಿ ಮಾರಾಟವಾಗುವಂತಾಗಿತ್ತು.ನಿತ್ಯ ಲೋಡ್ ಗಟ್ಟಲೆ ರಾಗಿ ಖರೀದಿಯೂ ಬಿಡುವಿಲ್ಲದಂತೆ ನಡೆದಿತ್ತು.ಮಾ.೨೯ ರವರೆಗೆ ರಾಗಿ ಖರೀದಿ ಮಾಡಿದ ನಿಗಮದವರು ಹಣಪಾವತಿಸಬೇಕಿದ್ದ ಸಮಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಸಮಸ್ಯೆಗೆ ಎಡೆಮಾಡಿಕೊಟ್ಟಿದೆ.

          ದುಡ್ಡು ತಡವಾಗುವುದರಿಂದ ಮುಂದಿನ ದಿನಗಳಲ್ಲಿ ರೈತರು ಖರೀದಿ ಕೇಂದ್ರಕ್ಕೆ ಮಾರಿದ್ರೆ ದುಡ್ಡು ಬರವುದು ಯಾವತ್ತೂ ,ಏನೋ ,ಅದರ ಬದಲು ತಕ್ಷಣ ಹಣ ನೀಡುವ ವ್ಯಾಪಾರಸ್ಥರಿಗೆ ಮಾರಾಟ ಮಾಡಿದರೆ ಒಳ್ಳೆಯದು ಅನ್ನುವ ಅಭಿಪ್ರಾಯ ಮೂಡಿದಂತಾಗುತ್ತದೆ.ನಿಗಮಕ್ಕೆ ಮಾರಿದರೆ ದುಡ್ಡು ತಕ್ಷಣಕ್ಕೆ ಲಭ್ಯವಾಗುವುದಿಲ್ಲ ಎಂದ ಮೇಲೆ ಮಧ್ಯವರ್ತಿಗಳನ್ನೆ ಆಶ್ರಯ ಮಾಡುವ ಪರಿಸ್ಥಿತಿ ಎದುರಾಗುತ್ತದೆ.

ಎಚ್ಚರಿಕೆ: ನಿಗಮದಿಂದ ಸಾಕಷ್ಟು ರೈತರಿಗೆ ಬಾಕಿ ಬರಬೇಕಿದ್ದು ಖರೀದಿ ನಡೆದಿದ್ದ ಗೊಡೌನ್ ಸಧ್ಯ ಬಾಗಿಲು ಮುಚ್ಚಿದ್ದು ಖರೀದಿ ಅಧಿಕಾರಿಯೊಬ್ಬರ ನಂಬರ್ ಅಂಟಿಸಿದ್ದಾರೆ.ಅವರಿಗೆ ಫೋನ್ ಮಾಡಿದರೆ ಹಣ ಬರಬೇಕು ,ಬಂದಾಗ ನಿಮ್ಮ ಖಾತೆಗೆ ನೇರ ಹಾಕುತ್ತೇವೆ ಅಂತಾರೆ ಹೊರತು ಎಂದು ಬರುತ್ತೆ ಅಂತ ತಿಳಿಸುತ್ತಿಲ್ಲ.ಹೀಗಾದರೆ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎನ್ನುತ್ತಾರೆ ರಾಜ್ಯರೈತ ಸಂಘದ ಕಾರ್ಯದರ್ಶಿ ಕೆಂಕೆರೆ ಸತೀಶ್ .
ಹುಳಿಯಾರಿನ ಎಪಿಎಂಸಿಯಲ್ಲಿ ತೆರಯಲಾಗಿದ್ದ ರಾಗಿ ಖರೀದಿ ಕೇಂದ್ರದ ದೃಶ್ಯ
                 ಈ ಕುರಿತು ಪ್ರತಿಕ್ರಿಯಿಸಿದ ಹುಳಿಯಾರು ಎಪಿಎಂಸಿ ಕಾರ್ಯದರ್ಶಿ ನಾಗರಾಜು ಬೆಂಬಲ ಬೆಲೆ ಯೋಜನೆ ಮೂಲಕ ಖರೀದಿಸಿರುವ ರಾಗಿಗೆ ಸರ್ಕಾರದಿಂದ ಹಂತ ಹಂತವಾಗಿ ಹಣ ಬಿಡುಗಡೆಯಾಗುತ್ತಿದ್ದು, ನಿಗಮದಿಂದ ರೈತರ ಖಾತೆಗೆ ನೇರವಾಗಿ ಹಣ ಪಾವತಿಯಾಗುತ್ತಿದೆ. ಎಪಿಎಂಸಿಯಿಂದ ನಿಗಮದವರಿಗೆ ಗೊಡೌನ್ ಹಾಗೂ ತೂಕದ ವ್ಯವಸ್ಥೆ ಮಾತ್ರ ಮಾಡಿಕೊಟ್ಟಿದ್ದು ,ಹಣ ಪಾವತಿಸುವುದಕ್ಕೂ ನಮಗೂ ಸಂಬಂಧವಿಲ್ಲ.ರೈತರು ನಿತ್ಯ ಎಪಿಎಂಸಿಗೆ ಅಲೆದಾಡುತ್ತಿದ್ದು ,ಹಣ ಬಿಡುಗಡೆ ಬಗ್ಗೆ ಎಪಿಎಂಸಿ ಅಧ್ಯಕ್ಷರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಆಹಾರ ಹಾಗೂ ನಾಗರಿಕ ವ್ಯವಹಾರಗಳ ನಿಗಮಕ್ಕೆ ಪತ್ರ ವ್ಯವಹಾರ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

               ಒಟ್ಟಾರೆ ಬರಪರಿಸ್ಥಿಯಿಂದ ಕಂಗೆಟ್ಟಿರುವ ತಾಲ್ಲೂಕಿನ ರೈತರಿಗೆ ತುರ್ತಾಗಿ ಬಾಕಿ ಹಣ ಪಾವತಿಸುವ ಅನಿವಾರ್ಯತೆಯಿದ್ದು ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ.
--------------------------------------------------------------------------
              ಕಳೆದ ಇಪ್ಪತ್ತು ದಿನಗಳಿಂದ ರಾಗಿಯ ಬಾಕಿ ಹಣಕ್ಕಾಗಿ ಎಪಿಎಂಸಿಗೆ ನಿತ್ಯ ಬರುತ್ತಿದ್ದೇನೆ.ಆದರೆ ಹಣ ಮಾತ್ರ ಬಂದಿಲ್ಲ.ಎಂದು ಬರುತ್ತೆ ಅಂತಾನೂ ಗೊತ್ತಿಲ್ಲ.ಖರೀದಿ ಕೇಂದ್ರದ ಬದಲು ಅಂಗಡಿಗೆ ಮಾರಿದ್ದರೂ ನಮಗೆ ತಕ್ಷಣ ಹಣ ಕೈಸೇರ್ತಿತ್ತು.ತುರ್ತಾಗಿ ಹಣ ಬೇಕಿದ್ದು ಮಾಮೂಲಿ ಅಂಗಡಿಯವರಿಂದ ಕೈಗಡ ತರುವ ಪರಿಸ್ಥಿತಿ ಉಂಟಾಗಿದೆ: ಸಣ್ಣವರದಯ್ಯ-ರೈತ, ಸೀಗೆಬಾಗಿ
------------------------


       ಹುಳಿಯಾರು ಎಪಿಎಂಸಿಯ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಿ ೨ ತಿಂಗಳಾದರೂ ಸಹ ಖರೀದಿಸಿದ ರಾಗಿಗೆ ಇನ್ನೂ ಹಣ ಬಂದಿಲ್ಲ.ಇಲ್ಲಿ ಎಪಿಎಂಸಿಯ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧವಿಲ್ಲವೆನ್ನುತ್ತರೆ. ರಾಗಿ ಖರೀದಿ ಕೇಂದ್ರ ಮುಚ್ಚಿರುವುದರಿಂದ ಯಾರನ್ನು ಕೇಳುವುದೆಂದೆ ತಿಳಿಯುತ್ತಿಲ್ಲ. :ಮಹಲಿಂಗಯ್ಯ-ನಿರುವಗಲ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...