ವಿಷಯಕ್ಕೆ ಹೋಗಿ

ಕೆರೆಕಟ್ಟೆ ಕಟ್ಟಿದ ಸಿದ್ಧರಾಮರು ನಾಡು ಕಂಡಿರುವ ಶ್ರೇಷ್ಟ ಕಾಯಕ ಯೋಗಿ:ಬಿಎಸ್ ವೈ

ಹುಳಿಯಾರು ಸಮೀಪದ ಯಳನಾಡು ಗ್ರಾಮದಲ್ಲಿ ಶ್ರೀಸಿದ್ಧರಾಮೇಶ್ವರಸ್ವಾಮಿಯವರ ದೊಡ್ಡಜಾತ್ರೆಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರನ್ನು ಜಾತ್ರಾಸಮಿತಿಯವರು ಸ್ವಾಗತಿಸಿದರು. ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮೀಜಿಯವರು ಹಾಜರಿದ್ದರು. 
ಹುಳಿಯಾರು :ನಮ್ಮ ನಾಡಿನ ಪರಂಪರೆಯಲ್ಲಿ ಭಕ್ತಿಗೆ ಬಸವಣ್ಣ, ಆಧ್ಯಾತ್ಮಕ್ಕೆ ಅಲ್ಲಮಪ್ರಭು, ವೈರಾಗ್ಯಕ್ಕೆ ಅಕ್ಕಮಹಾದೇವಿ, ಕಾಯಕತತ್ವಕ್ಕೆ ಸಿದ್ಧರಾಮರು ಎಂಬ ನಂಬಿಕೆ ಮನೆ ಮಾಡಿದ್ದು ಅದರಂತೆ ಸಿದ್ಧರಾಮರು ಕರುನಾಡು ಕಂಡಿರುವ ಶ್ರೇಷ್ಟ ಕಾಯಕ ಯೋಗಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿದ್ಧರಾಮರ ಗುಣಗಾನ ಮಾಡಿದರು.
                ಹುಳಿಯಾರು ಸಮೀಪದ ಯಳನಾಡು ಗ್ರಾಮದಲ್ಲಿ ಶ್ರೀಸಿದ್ಧರಾಮೇಶ್ವರಸ್ವಾಮಿಯವರ ದೊಡ್ಡಜಾತ್ರೆಯ ಅಂಗವಾಗಿ ಈಚೆಗೆ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
                 ಕಾಯಕವೇ ಕೈಲಾಸ ಎಂದು ನಂಬಿದ್ದ ಸಿದ್ಧರಾಮರು ಸಂಚರಿಸಿದ ಕಡೆಯೆಲ್ಲಾ ಕೆರೆಕಟ್ಟೆ ಕಟ್ಟಿ ಕಾಯಕ ತತ್ವ, ರೈತ ನಿಷ್ಠೆ ಹಾಗೂ ಸಾಮಾಜಿಕ ಕಳಕಳಿಗೆ ನಿದರ್ಶನರಾಗಿದ್ದಾರೆ.ಸಿದ್ಧರಾಮರು ಆಚಾರದಿಂದ ಶರಣರಾದವರು. ಯಳನಾಡುವಿನ ಅವರ ಈ ಪುಣ್ಯಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು ಸಿದ್ಧರಾಮರ ಮಠಮಂದಿರಗಳನ್ನು ಅಭಿವೃದ್ಧಿ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
       ರೈತರ ಹಿತಕಾಯಲು ಬದ್ಧನಾಗಿರುವ ನನಗೆ ರೈತರ, ಶೋಷಿತರ, ನಿರ್ಗತಿಕರ, ಕೂಲಿಕಾರ್ಮಿಕರ, ಸ್ತ್ರೀಯರ ಬಗ್ಗೆ ಕಾಳಜಿ ಇದೆ. ಹಾಗಾಗಿಯೇ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ್ದೆ, ೨ ಬಾರಿ ಸಾಲ ಮನ್ನ ಮಾಡಿದೆ. ಹಾಗಾಗಿಯೇ ನಮ್ಮ ಆಡಳಿತಾವಧಿಯ ಕಾಲವನ್ನು ಸುವರ್ಣಕಾಲ ಎಂದು ಜನಸಾಮಾನ್ಯರು ಮಾತಾಡಿಕೊಳ್ಳುತ್ತಿದ್ದು ಮುಂದಿನ ಬಾರಿ ಅವಕಾಶ ಕೊಡಿ.ನಿಮ್ಮ ಆಶಯಗಳಿಗೆ ನಂಬಿಕೆಗೆ ದ್ರೋಹ ಬಗೆಯಲಾರೆ ಎಂದು ಬೇಕಿದ್ದರೆ ರಕ್ತದಲ್ಲಿ ಬರೆದುಕೊಡುವೆ ಎಂದರು .
         ಕಳೆದ ಮೂವತ್ತು ನಲವತ್ತು ವರ್ಷಗಳಲ್ಲಿ ಕಾಣದ ಬರಕಾಲ ಈಗ ಬಂದಿದ್ದು ಕೆರೆಕಟ್ಟೆಗಳು ಒಣಗಿ ಜನಜಾನುವಾರುಗಳು ತತ್ತರಿಸುತ್ತಿವೆ. ಆದರೂ ರಾಜ್ಯಸರ್ಕಾರ ದಿವ್ಯನಿರ್ಲಕ್ಷ್ಯ ತಾಳಿದೆ. ಕೇಂದ್ರದ ಮೇಲೆ ಇಲ್ಲಸಲ್ಲದ ದೂರು ಹೇಳಿ ಬರಗಾಲದಲ್ಲಿ ಜನರ ನೆರವಿಗೆ ಧಾವಿಸದೆ ದಿನದೂಡುತ್ತಿದೆ ಎಂದು ಆರೋಪಿಸಿದರು.
             ರೈತರ ನೋವಿಗೆ ಸ್ಪಂದಿಸಿರುವ ಮೋದಿ ಸರ್ಕಾರ ಹೊಸ ಬೆಳೆ ವಿಮೆ ನೀತಿ ಜಾರಿಗೆ ತಂದಿದ್ದು ಶೇ.೩೫ ರಷ್ಟು ಬೆಳೆ ಹಾಳಾಗಿದ್ದರೂ ಪರಿಹಾರ ಕೊಡಲು ಮುಂದಾಗಿದೆ. ದೇಶದ ಯಾವುದೇ ಒಂದು ಸರ್ವೆ ನಂಬರಲ್ಲಿ ಬೆಳೆ ಹಾಳಾಗಿದ್ದರೂ ಸಹ ಸ್ಯಾಟಲೈಟ್ ಮೂಲಕ ಪರಿಶೀಲಿಸಿ ಪರಿಹಾರ ಕೊಡುವುದು ಈ ಯೋಜನೆಯಲ್ಲಿದೆ. ಅಲ್ಲದೆ ಕೆರೆ ಹೂಳು ಎತ್ತುವ ಕಾರ್ಯ, ಸಮಗ್ರ ನೀರಾವರಿ ವ್ಯವಸ್ಥೆ, ಅಲ್ಲದೆ ರೈತರ ಆದಾಯ ಹೆಚ್ಚಳಕ್ಕೆ ವಿಶೇಷ ಯೋಜನೆ ರೂಪಿಸುವ ಚಿಂತನೆ ಅವರಲ್ಲಿದೆ ಎಂದರು.


            ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮೀಜಿ ವಹಿಸಿದ್ದರು. ಮಾಜಿ ಸಂಸದ ಬಸವರಾಜು,ಶಾಸಕ ಸುರೇಶ್ ಗೌಡ, ಮಾಜಿ ಸಚಿವರಾದ ಗೋವಿಂದಕಾರಜೋಳ, ಹಾಗೂ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ, ಹುಲಿನಾಯ್ಕರ್, ಜಿ.ಪಂ. ಮಾಜಿ ಅಧ್ಯಕ್ಷ ಹುಚ್ಚಯ್ಯ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಕೆಂಕೆರೆನವೀನ್, ಶಶಿಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...