ವಿಷಯಕ್ಕೆ ಹೋಗಿ

ಕೆರೆಕಟ್ಟೆ ಕಟ್ಟಿದ ಸಿದ್ಧರಾಮರು ನಾಡು ಕಂಡಿರುವ ಶ್ರೇಷ್ಟ ಕಾಯಕ ಯೋಗಿ:ಬಿಎಸ್ ವೈ

ಹುಳಿಯಾರು ಸಮೀಪದ ಯಳನಾಡು ಗ್ರಾಮದಲ್ಲಿ ಶ್ರೀಸಿದ್ಧರಾಮೇಶ್ವರಸ್ವಾಮಿಯವರ ದೊಡ್ಡಜಾತ್ರೆಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರನ್ನು ಜಾತ್ರಾಸಮಿತಿಯವರು ಸ್ವಾಗತಿಸಿದರು. ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮೀಜಿಯವರು ಹಾಜರಿದ್ದರು. 
ಹುಳಿಯಾರು :ನಮ್ಮ ನಾಡಿನ ಪರಂಪರೆಯಲ್ಲಿ ಭಕ್ತಿಗೆ ಬಸವಣ್ಣ, ಆಧ್ಯಾತ್ಮಕ್ಕೆ ಅಲ್ಲಮಪ್ರಭು, ವೈರಾಗ್ಯಕ್ಕೆ ಅಕ್ಕಮಹಾದೇವಿ, ಕಾಯಕತತ್ವಕ್ಕೆ ಸಿದ್ಧರಾಮರು ಎಂಬ ನಂಬಿಕೆ ಮನೆ ಮಾಡಿದ್ದು ಅದರಂತೆ ಸಿದ್ಧರಾಮರು ಕರುನಾಡು ಕಂಡಿರುವ ಶ್ರೇಷ್ಟ ಕಾಯಕ ಯೋಗಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಿದ್ಧರಾಮರ ಗುಣಗಾನ ಮಾಡಿದರು.
                ಹುಳಿಯಾರು ಸಮೀಪದ ಯಳನಾಡು ಗ್ರಾಮದಲ್ಲಿ ಶ್ರೀಸಿದ್ಧರಾಮೇಶ್ವರಸ್ವಾಮಿಯವರ ದೊಡ್ಡಜಾತ್ರೆಯ ಅಂಗವಾಗಿ ಈಚೆಗೆ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
                 ಕಾಯಕವೇ ಕೈಲಾಸ ಎಂದು ನಂಬಿದ್ದ ಸಿದ್ಧರಾಮರು ಸಂಚರಿಸಿದ ಕಡೆಯೆಲ್ಲಾ ಕೆರೆಕಟ್ಟೆ ಕಟ್ಟಿ ಕಾಯಕ ತತ್ವ, ರೈತ ನಿಷ್ಠೆ ಹಾಗೂ ಸಾಮಾಜಿಕ ಕಳಕಳಿಗೆ ನಿದರ್ಶನರಾಗಿದ್ದಾರೆ.ಸಿದ್ಧರಾಮರು ಆಚಾರದಿಂದ ಶರಣರಾದವರು. ಯಳನಾಡುವಿನ ಅವರ ಈ ಪುಣ್ಯಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು ಸಿದ್ಧರಾಮರ ಮಠಮಂದಿರಗಳನ್ನು ಅಭಿವೃದ್ಧಿ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
       ರೈತರ ಹಿತಕಾಯಲು ಬದ್ಧನಾಗಿರುವ ನನಗೆ ರೈತರ, ಶೋಷಿತರ, ನಿರ್ಗತಿಕರ, ಕೂಲಿಕಾರ್ಮಿಕರ, ಸ್ತ್ರೀಯರ ಬಗ್ಗೆ ಕಾಳಜಿ ಇದೆ. ಹಾಗಾಗಿಯೇ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ್ದೆ, ೨ ಬಾರಿ ಸಾಲ ಮನ್ನ ಮಾಡಿದೆ. ಹಾಗಾಗಿಯೇ ನಮ್ಮ ಆಡಳಿತಾವಧಿಯ ಕಾಲವನ್ನು ಸುವರ್ಣಕಾಲ ಎಂದು ಜನಸಾಮಾನ್ಯರು ಮಾತಾಡಿಕೊಳ್ಳುತ್ತಿದ್ದು ಮುಂದಿನ ಬಾರಿ ಅವಕಾಶ ಕೊಡಿ.ನಿಮ್ಮ ಆಶಯಗಳಿಗೆ ನಂಬಿಕೆಗೆ ದ್ರೋಹ ಬಗೆಯಲಾರೆ ಎಂದು ಬೇಕಿದ್ದರೆ ರಕ್ತದಲ್ಲಿ ಬರೆದುಕೊಡುವೆ ಎಂದರು .
         ಕಳೆದ ಮೂವತ್ತು ನಲವತ್ತು ವರ್ಷಗಳಲ್ಲಿ ಕಾಣದ ಬರಕಾಲ ಈಗ ಬಂದಿದ್ದು ಕೆರೆಕಟ್ಟೆಗಳು ಒಣಗಿ ಜನಜಾನುವಾರುಗಳು ತತ್ತರಿಸುತ್ತಿವೆ. ಆದರೂ ರಾಜ್ಯಸರ್ಕಾರ ದಿವ್ಯನಿರ್ಲಕ್ಷ್ಯ ತಾಳಿದೆ. ಕೇಂದ್ರದ ಮೇಲೆ ಇಲ್ಲಸಲ್ಲದ ದೂರು ಹೇಳಿ ಬರಗಾಲದಲ್ಲಿ ಜನರ ನೆರವಿಗೆ ಧಾವಿಸದೆ ದಿನದೂಡುತ್ತಿದೆ ಎಂದು ಆರೋಪಿಸಿದರು.
             ರೈತರ ನೋವಿಗೆ ಸ್ಪಂದಿಸಿರುವ ಮೋದಿ ಸರ್ಕಾರ ಹೊಸ ಬೆಳೆ ವಿಮೆ ನೀತಿ ಜಾರಿಗೆ ತಂದಿದ್ದು ಶೇ.೩೫ ರಷ್ಟು ಬೆಳೆ ಹಾಳಾಗಿದ್ದರೂ ಪರಿಹಾರ ಕೊಡಲು ಮುಂದಾಗಿದೆ. ದೇಶದ ಯಾವುದೇ ಒಂದು ಸರ್ವೆ ನಂಬರಲ್ಲಿ ಬೆಳೆ ಹಾಳಾಗಿದ್ದರೂ ಸಹ ಸ್ಯಾಟಲೈಟ್ ಮೂಲಕ ಪರಿಶೀಲಿಸಿ ಪರಿಹಾರ ಕೊಡುವುದು ಈ ಯೋಜನೆಯಲ್ಲಿದೆ. ಅಲ್ಲದೆ ಕೆರೆ ಹೂಳು ಎತ್ತುವ ಕಾರ್ಯ, ಸಮಗ್ರ ನೀರಾವರಿ ವ್ಯವಸ್ಥೆ, ಅಲ್ಲದೆ ರೈತರ ಆದಾಯ ಹೆಚ್ಚಳಕ್ಕೆ ವಿಶೇಷ ಯೋಜನೆ ರೂಪಿಸುವ ಚಿಂತನೆ ಅವರಲ್ಲಿದೆ ಎಂದರು.


            ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಶ್ರೀ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಮಹಾಸ್ವಾಮೀಜಿ ವಹಿಸಿದ್ದರು. ಮಾಜಿ ಸಂಸದ ಬಸವರಾಜು,ಶಾಸಕ ಸುರೇಶ್ ಗೌಡ, ಮಾಜಿ ಸಚಿವರಾದ ಗೋವಿಂದಕಾರಜೋಳ, ಹಾಗೂ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ, ಹುಲಿನಾಯ್ಕರ್, ಜಿ.ಪಂ. ಮಾಜಿ ಅಧ್ಯಕ್ಷ ಹುಚ್ಚಯ್ಯ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಕೆಂಕೆರೆನವೀನ್, ಶಶಿಧರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.