ವಿಷಯಕ್ಕೆ ಹೋಗಿ

ನಾಯಿದಾಳಿಗೆ ಸಿಕ್ಕು ಸಾವನ್ನಪ್ಪಿದ ನವಿಲು.

ಗಾಯಗೊಂಡ ನವಿಲಿಗೆ ದೊರೆಯದ ಚಿಕಿತ್ಸೆ: ಸಾವನ್ನಪ್ಪಿದ ರಾಷ್ಟ್ರ ಪಕ್ಷಿ
--------------------------------------
ಹುಳಿಯಾರು:ಮುಂಜಾನೆಯ ತಂಗಾಳಿಯಲ್ಲಿ ಹುಣುಸೆಮರದಡಿಯಲ್ಲಿ ನರ್ತಿಸುತ್ತಿದ್ದ ನವಿಲಿನ ಮೇಲೆ ನಾಯಿಗಳು ಎರಗಿದ್ದರಿಂದ  ಗಾಯಗೊಂಡಿದ್ದ  ನವಿಲು ಸಾವನ್ನಪ್ಪಿರುವ ಘಟನೆ ಸಮೀಪದ ಬರಕನಾಳ್ ಗ್ರಾಮದಲ್ಲಿ ಜರುಗಿದೆ.

               
ಮಂಗಳವಾರ ಮುಂಜಾನೆ ಬರಕನಾಳ್ ಗ್ರಾಮದ ತಿಮ್ಮಯ್ಯನವರ ಮನೆ ಮುಂಭಾಗದ ಹುಣುಸೆಮರದಡಿಯಲ್ಲಿ ನಾಯಿಗಳ ಬೊಗುಳುವಿಕೆ ಕೇಳಿ ಧಾವಿಸಿದ ತಿಮ್ಮಯ್ಯನವರಿಗೆ ನಾಯಿಗಳು ನವಿಲಿನ ಮೇಲೆರೆಗಿ ಬೊಗುಳುತ್ತಿದ್ದ ದೃಶ್ಯ ಕಂಡುಬಂದಿದೆ.
ಕೂಡಲೆ ನಾಯಿಗಳನ್ನು ಓಡಿಸಿ ಗಾಯಗೊಂಡಿದ್ದ ನವಿಲನ್ನು ಚಿಕಿತ್ಸೆಗಾಗಿ ಹುಳಿಯಾರಿನ ಪಶುಆಸ್ಪತ್ರೆಗೆ ಕರೆತಂದಿದ್ದಾರೆ.

            ಈ ಬಗ್ಗೆ ಸ್ಥಳಿಯ ಪೋಲಿಸ್ ಗೆ ಹಾಗೂ ಅರಣ್ಯ ಇಲಾಖೆತೆ ಮಾಹಿತಿ ನೀಡಿದ ಅವರು ವೈದ್ಯರಿಗೆ ಫೋನ್ ಮಾಡಿ ಕಾದಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಬುಕ್ಕಾಪಟ್ಟಣ ರೇಂಜಿನ ದಸೂಡಿ ಗಸ್ತಿನ ಅರಣ್ಯ ವೀಕ್ಷಕ ರಂಗನಾಥಯ್ಯ ,ಇಮ್ರಾಜ್ ಹಾಗೂ ಗ್ರಾಪಂ ಸದಸ್ಯ ಚಂದ್ರಶೇಖರ್ ಆಗಮಿಸಿದ್ದು ಅವರುಗಳು ಕೂಡ ವೈದ್ಯರನ್ನು ಸಂಪರ್ಕಿಸಿದ್ದಾರೆ.

           
 ಹುಳಿಯಾರಿನಲ್ಲಿ ಪಶು ಆಸ್ಪತ್ರೆಯ ವೈದ್ಯರು ಚಿಕ್ಕನಾಯಕನಹಳ್ಳಿಯಿಂದ ಬರಬೇಕಿದ್ದು ಇಂದು ಚಿಕ್ಕನಾಯಕನಹಳ್ಳಿಯಲ್ಲಿ ಮೀಟಿಂಗ್ ಇರುವುದರಿಂದ ಬರಲು ಸಾಧ್ಯವಿಲ್ಲವೆಂದಿದ್ದಾರೆ.ಇಷ್ಟೆಲ್ಲರ ನಡುವೆ ಸುಮಾರು ಎರಡು ಗಂಟೆಗಳುರುಳಿ ಯಾರೊಬ್ಬರು ಬಾರದೆ ಚಿಕಿತ್ಸೆ ದೊರೆಯದೆ ನಿತ್ರಾಣವಾದ ನವಿಲು ಸಾವನ್ನಪ್ಪಿದೆ.

              ನವಿಲಿಗೆ ಚಿಕಿತ್ಸೆ ನೀಡಿಸಿ ಬದುಕಿಸಿ ಕಾಡಿಗೆ ಬಿಡಬಹುದೆಂದು ಬಂದಿದ್ದ ತಿಮ್ಮಯ್ಯನವರ ಕಾಳಜಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸ್ಥಳದಲ್ಲಿದ್ದ ಯುವಕರು ಸಮಯಕ್ಕೆ ಸರಿಯಾಗಿ ವೈದ್ಯರು ದೊರೆತು ಚಿಕಿತ್ಸೆ ದೊರೆತಿದ್ದಲ್ಲಿ ನವಿಲನ್ನು ಬದುಕುಳಿಸಬಹುದ್ದಿತ್ತೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು

  1. ತಿಮ್ಮಯ್ಯನವರ ಈ ಕಾಳಜಿಗೆ ಎಲ್ಲರೂ ಧನ್ಯವಾದ ಹೇಳಬೇಕು.... ಇದೇ ಕಾಳಜಿಯನ್ನು ಪಶುವೈದ್ಯರು ತೋರಿದ್ದರೆ ತಮ್ಮಯ್ಯನವರ ಶ್ರಮ ಸಾರ್ಥಕವಾಗುತ್ತಿತ್ತು....... ಇದನ್ನ ಪಶು ವೈದ್ಯರು ಯೋಚಿಸಬೇಕು...

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...