ವಿಷಯಕ್ಕೆ ಹೋಗಿ

ಹುಳಿಯಾರು : ವ್ಯರ್ಥವಾಗುತ್ತಿದೆ ಜೀವಜಲ


ಹುಳಿಯಾರು : ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದ್ದು ಹನಿ ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ ಆದರೆ ಪಟ್ಟಣದ ಹಲವೆಡೆ ಕೆಲವು ತಿಂಗಳುಗಳಿಂದ ನೀರು ವ್ಯರ್ಥವಾಗಿ ರಸ್ತೆಯಲ್ಲಿ ಹರಿಯುತ್ತಿದ್ದು ಜನರ ಬಳಕೆಗೆ ಬಾರದಂತಾಗಿರುವುದು ಪಂಚಾಯ್ತಿಯವರ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಹುಳಿಯಾರು ಪಟ್ಟಣದ ಮಲ್ಲಿಕಾರ್ಜುನ ಮೆಡಿಕಲ್ಸ್ ಪಕ್ಕದ ಬಾಲ್ ವಾಲ್ ನಲ್ಲಿ ನೀರು ವ್ಯರ್ಥವಾಗಿ ಹರಿದು ರಸ್ತೆ ಸೇರುತ್ತಿರುವುದು.

           ಪಟ್ಟಣದ ಮೂರನೇ ಬ್ಲಾಕ್ ನ ಮಲ್ಲಿಕಾರ್ಜುನ ಮೆಡಿಕಲ್ ಪಕ್ಕದಲ್ಲಿ ಕಳೆದ ಐದಾರು ತಿಂಗಳಿಂದ ನೀರು ಹರಿಯುತ್ತಿದ್ದರೆ, ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ನೀರಿನ ಸಂಪರ್ಕ ಕಲ್ಪಿಸಿರುವ ಪೈಪ್ ಒಡೆದಿದ್ದು ನೀರು ಪೋಲಾಗಿ ಕೆರೆ ಅಂಗಳಕ್ಕೆ ಹರಿಯುತ್ತಿದೆ. ಈ ಬಗ್ಗೆ ಹಲವಾರು ಪಂಚಾಯ್ತಿಯವರ ಗಮಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

         ಹುಳಿಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನೀರು ಪೂರೈಸುವ ಹಿನ್ನಲೆಯಲ್ಲಿ ಪಕ್ಕದ ಬೋರನಕಣಿವೆ ಜಲಾಶಯದಿಂದ ಹಾಗೂ ಬೋರ್ ವೆಲ್ ಗಳಿಂದ ನೀರನ್ನು ಸರಬರಾಜು ಮಾಡುತ್ತಿದ್ದಾರೆ. ಈ ಬಾರಿ ಸಮರ್ಪಕವಾಗಿ ಮಳೆಯಾದ ಹಿನ್ನಲೆಯಲ್ಲಿ ಅಂತರ್ಜಲ ಕುಸಿತಕಂಡಿದ್ದು ಜಲಾಶಯ ಹಾಗೂ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ಕುಸಿದು ಇನ್ನೂ ಕೆಲವೇ ತಿಂಗಳಿಗೆ ಆಗುವಷ್ಟು ನೀರು ಮಾತ್ರ ಉಳಿದಿದೆ. ಹೀಗಿದ್ದಾಗ್ಯೂ ಸಹ ಸದ್ಯ ದೊರೆಯುತ್ತಿದುವ ನೀರನ್ನು ಸಮರ್ಪವಾಗಿ ಬಳಕೆ ಮಾಡುವಲ್ಲಿ ಗ್ರಾ.ಪಂ.ನವರು ವಿಫಲಾಗಿದ್ದಾರೆ. ಪಟ್ಟಣದಲ್ಲಿ ಜನ ಕುಡಿಯುವ ಹಾಗೂ ನಿತ್ಯದ ಬಳಕೆ ನೀರಿಗಾಗಿ ಪರಿತಪಿಸುತ್ತಿದ್ದರೂ ಸಹ ಈರೀತಿ ಎಲ್ಲೆಂದರಲ್ಲಿ ನೀರು ವ್ಯರ್ಥವಾಗಿ ಹರಿಯುತ್ತಿರುವುದು ಜನರಲ್ಲಿ ಅಕ್ರೋಶ ಮೂಡುವಂತೆ ಮಾಡಿದೆ.

               ಮಲ್ಲಿಕಾರ್ಜುನ ಮೆಡಿಕಲ್ ಪಕ್ಕದಲ್ಲಿನ ಬಾಲ್ ವಾಲ್ ನಲ್ಲಿ ನಿತ್ಯವೂ ಸುಮ್ಮನೆ ನೀರ್ ಲೀಕ್ ಆಗುತ್ತಿದ್ದು ರಾಜ್ ಕುಮಾರ್ ರಸ್ತೆ ಹಾಗೂ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಹರಿಯುತ್ತಿದೆ. ಜನ , ವಾಹನಗಳು ಈ ನೀರ ಮೇಲೆಯೇ ಸಂಚರಿಸುವಂತಾಗಿದೆ. ಈ ರಸ್ತೆಯಲ್ಲಿ ನಿತ್ಯ ಪಂಚಾಯ್ತಿ ಸದಸ್ಯರು ಓಡಾಡುತ್ತಿದ್ದರೂ ಸಹ ಕಂಡು ಕಾಣದಂತಿದ್ದಾರೆ. ಇನ್ನಾದರೂ ಪಂಚಾಯ್ತಿಯವರು ಎಚ್ಚೆತ್ತು ನೀರು ವ್ಯರ್ಥವಾಗುವುದನ್ನು ತಪ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟೆರೆ ಒಳಿತಾಗುತ್ತದೆ ಎನ್ನುತ್ತಾರೆ ನಿವಾಸಿ ಪ್ರವೀಣ್ ಕುಮಾರ್ .
---------

ಹುಳಿಯಾರು ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ಸಂಪರ್ಕ ಕಲ್ಪಿಸಿರುವ ನೀರಿನ ಪೈಪ್ ಒಡೆದು ನೀರು ವ್ಯರ್ಥವಾಗಿ ಕೆರೆಗೆ ಸೇರುತ್ತಿದ್ದು , ಖುದ್ದಾಗಿ ನಾನೇ ಹಲವಾರು ಬಾರಿ ಪಿಡಿಓ ಗಮನಕ್ಕೆ ತಂದಿದ್ದರೂ ಸರಿಪಡಿಸಿಲ್ಲ, ನಾವೇ ಕಾಮಗಾರಿ ಮಾಡಿಸಿ ಸರಿಪಡಿಸಿಸಲು ಮುಂದಾದರೆ ವೆಚ್ಚವಾದ ಹಣವನ್ನೂ ಪಾವತಿ ಮಾಡುವುದಿಲ್ಲ : ಕೋಳಿಶ್ರೀನಿವಾಸ್- ಗ್ರಾ.ಪಂ.ಸದಸ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.