ವಿಷಯಕ್ಕೆ ಹೋಗಿ

ಹುಳಿಯಾರು : ವ್ಯರ್ಥವಾಗುತ್ತಿದೆ ಜೀವಜಲ


ಹುಳಿಯಾರು : ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದ್ದು ಹನಿ ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ ಆದರೆ ಪಟ್ಟಣದ ಹಲವೆಡೆ ಕೆಲವು ತಿಂಗಳುಗಳಿಂದ ನೀರು ವ್ಯರ್ಥವಾಗಿ ರಸ್ತೆಯಲ್ಲಿ ಹರಿಯುತ್ತಿದ್ದು ಜನರ ಬಳಕೆಗೆ ಬಾರದಂತಾಗಿರುವುದು ಪಂಚಾಯ್ತಿಯವರ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಹುಳಿಯಾರು ಪಟ್ಟಣದ ಮಲ್ಲಿಕಾರ್ಜುನ ಮೆಡಿಕಲ್ಸ್ ಪಕ್ಕದ ಬಾಲ್ ವಾಲ್ ನಲ್ಲಿ ನೀರು ವ್ಯರ್ಥವಾಗಿ ಹರಿದು ರಸ್ತೆ ಸೇರುತ್ತಿರುವುದು.

           ಪಟ್ಟಣದ ಮೂರನೇ ಬ್ಲಾಕ್ ನ ಮಲ್ಲಿಕಾರ್ಜುನ ಮೆಡಿಕಲ್ ಪಕ್ಕದಲ್ಲಿ ಕಳೆದ ಐದಾರು ತಿಂಗಳಿಂದ ನೀರು ಹರಿಯುತ್ತಿದ್ದರೆ, ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ನೀರಿನ ಸಂಪರ್ಕ ಕಲ್ಪಿಸಿರುವ ಪೈಪ್ ಒಡೆದಿದ್ದು ನೀರು ಪೋಲಾಗಿ ಕೆರೆ ಅಂಗಳಕ್ಕೆ ಹರಿಯುತ್ತಿದೆ. ಈ ಬಗ್ಗೆ ಹಲವಾರು ಪಂಚಾಯ್ತಿಯವರ ಗಮಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

         ಹುಳಿಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನೀರು ಪೂರೈಸುವ ಹಿನ್ನಲೆಯಲ್ಲಿ ಪಕ್ಕದ ಬೋರನಕಣಿವೆ ಜಲಾಶಯದಿಂದ ಹಾಗೂ ಬೋರ್ ವೆಲ್ ಗಳಿಂದ ನೀರನ್ನು ಸರಬರಾಜು ಮಾಡುತ್ತಿದ್ದಾರೆ. ಈ ಬಾರಿ ಸಮರ್ಪಕವಾಗಿ ಮಳೆಯಾದ ಹಿನ್ನಲೆಯಲ್ಲಿ ಅಂತರ್ಜಲ ಕುಸಿತಕಂಡಿದ್ದು ಜಲಾಶಯ ಹಾಗೂ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ಕುಸಿದು ಇನ್ನೂ ಕೆಲವೇ ತಿಂಗಳಿಗೆ ಆಗುವಷ್ಟು ನೀರು ಮಾತ್ರ ಉಳಿದಿದೆ. ಹೀಗಿದ್ದಾಗ್ಯೂ ಸಹ ಸದ್ಯ ದೊರೆಯುತ್ತಿದುವ ನೀರನ್ನು ಸಮರ್ಪವಾಗಿ ಬಳಕೆ ಮಾಡುವಲ್ಲಿ ಗ್ರಾ.ಪಂ.ನವರು ವಿಫಲಾಗಿದ್ದಾರೆ. ಪಟ್ಟಣದಲ್ಲಿ ಜನ ಕುಡಿಯುವ ಹಾಗೂ ನಿತ್ಯದ ಬಳಕೆ ನೀರಿಗಾಗಿ ಪರಿತಪಿಸುತ್ತಿದ್ದರೂ ಸಹ ಈರೀತಿ ಎಲ್ಲೆಂದರಲ್ಲಿ ನೀರು ವ್ಯರ್ಥವಾಗಿ ಹರಿಯುತ್ತಿರುವುದು ಜನರಲ್ಲಿ ಅಕ್ರೋಶ ಮೂಡುವಂತೆ ಮಾಡಿದೆ.

               ಮಲ್ಲಿಕಾರ್ಜುನ ಮೆಡಿಕಲ್ ಪಕ್ಕದಲ್ಲಿನ ಬಾಲ್ ವಾಲ್ ನಲ್ಲಿ ನಿತ್ಯವೂ ಸುಮ್ಮನೆ ನೀರ್ ಲೀಕ್ ಆಗುತ್ತಿದ್ದು ರಾಜ್ ಕುಮಾರ್ ರಸ್ತೆ ಹಾಗೂ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಹರಿಯುತ್ತಿದೆ. ಜನ , ವಾಹನಗಳು ಈ ನೀರ ಮೇಲೆಯೇ ಸಂಚರಿಸುವಂತಾಗಿದೆ. ಈ ರಸ್ತೆಯಲ್ಲಿ ನಿತ್ಯ ಪಂಚಾಯ್ತಿ ಸದಸ್ಯರು ಓಡಾಡುತ್ತಿದ್ದರೂ ಸಹ ಕಂಡು ಕಾಣದಂತಿದ್ದಾರೆ. ಇನ್ನಾದರೂ ಪಂಚಾಯ್ತಿಯವರು ಎಚ್ಚೆತ್ತು ನೀರು ವ್ಯರ್ಥವಾಗುವುದನ್ನು ತಪ್ಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟೆರೆ ಒಳಿತಾಗುತ್ತದೆ ಎನ್ನುತ್ತಾರೆ ನಿವಾಸಿ ಪ್ರವೀಣ್ ಕುಮಾರ್ .
---------

ಹುಳಿಯಾರು ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ಸಂಪರ್ಕ ಕಲ್ಪಿಸಿರುವ ನೀರಿನ ಪೈಪ್ ಒಡೆದು ನೀರು ವ್ಯರ್ಥವಾಗಿ ಕೆರೆಗೆ ಸೇರುತ್ತಿದ್ದು , ಖುದ್ದಾಗಿ ನಾನೇ ಹಲವಾರು ಬಾರಿ ಪಿಡಿಓ ಗಮನಕ್ಕೆ ತಂದಿದ್ದರೂ ಸರಿಪಡಿಸಿಲ್ಲ, ನಾವೇ ಕಾಮಗಾರಿ ಮಾಡಿಸಿ ಸರಿಪಡಿಸಿಸಲು ಮುಂದಾದರೆ ವೆಚ್ಚವಾದ ಹಣವನ್ನೂ ಪಾವತಿ ಮಾಡುವುದಿಲ್ಲ : ಕೋಳಿಶ್ರೀನಿವಾಸ್- ಗ್ರಾ.ಪಂ.ಸದಸ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...