ವಿಷಯಕ್ಕೆ ಹೋಗಿ

ಯಳನಾಡು ಜಾತ್ರೆಯಲ್ಲಿನ ವಿವಾದ ಬಗೆಹರಿಸಲು ಎಲ್ಲರ ಸಹಕಾರ ಅಗತ್ಯ; ಶ್ರೀಈಶ್ವರಾನಂದಪುರಿ ಸ್ವಾಮೀಜಿ

ಹುಳಿಯಾರು: ಹೋಬಳಿಯ ಯಳನಾಡು ಗ್ರಾಮದ ಶ್ರೀಗುರುಸಿದ್ಧರಾಮೇಶ್ವ ಸ್ವಾಮಿಯ ದೊಡ್ಡ ಜಾತ್ರ ಮಹೋತ್ಸವದಲ್ಲಿ ಸ್ವಾಮಿಯನ್ನು ಮಹಾದ್ವಾರದ ಕೆಳಗೆ ಕರೆದೊಯ್ಯಲು ನಿರಾಕರಿಸಿ ವಿವಾದಕ್ಕೀಡುಮಾಡಿರುವುದು ಉತ್ತಮ ಬೆಳವಣಿಗೆಯಲ್ಲ ,ಎರಡು ಕಡೆಯವರು ಈ ವಿಚಾರವನ್ನು ಪ್ರತಿಷ್ಟೆಯಾಗಿ ಪರಿಗಣಿಸಿದ್ದರಿಂದ ಜಾತ್ರೆ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿಯವರು ಅಸಮಧಾನ ವ್ಯಕ್ತಪಡಿಸಿದರು.
         
ಇದೇ ವಿಚಾರವಾಗಿ ಯಳನಾಡುವಿನ ರೇವಣಸಿದ್ದೇಶ್ವರ ಸ್ವಾಮಿ ಮಠದಲ್ಲಿ ಬುಧವಾರ ಸಂಜೆ ಕರೆಯಲಾಗಿದ್ದ ಜನಾಂಗದ ಸಭೆಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಎರಡು ಸಮುದಾಯದವರಲ್ಲೂ ಮುಕ್ತ ಚರ್ಚೆಯಾಗಿ ಮನಸ್ಸು ತಿಳಿಗೊಳಿಸಿಕೊಂಡು ದೇವರ ಕಾರ್ಯವನ್ನು ಹಿಂದಿನ ಸಂಪ್ರದಾಯದಂತೆ ಮುಂದುವರಿಸಿಕೊಂಡು ಹೋಗಬೇಕೆಂದು ಮನವಿ ಮಾಡಿದರು.

      ಸಮಾಜ ಮುಖಂಡರ ಜೊತೆ ಜಾತ್ರಾ ಸಮಯದಲ್ಲಿ ಆದ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅವರು ಕರಿಯಮ್ಮ ದೇವಿಯ ದ್ವಾರದ ಕೆಳಗೆ ಸಿದ್ದರಾಮೇಶ್ವರ ಸ್ವಾಮಿ ಹೋಗಬಾರದು ಎಂದು ಕೆಲವರು ಪಟ್ಟುಹಿಡಿದು ಹಿಂದಿನ ಪರಂಪರೆಗೆ ಅಡ್ಡಿಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.ಜಾತ್ರೆಯಲ್ಲಾಗಿರುವ ಅಡಚಣೆ ಬಗ್ಗೆ ಎರಡು ಸಮಾಜದವರು ಸೇರಿಕೊಂಡು ಸೌಹಾರ್ದವಾಗಿ ಸಮಸ್ಯೆ ಬಗೆಹರಿಸಿಕೊಂಡು ಹಿಂದಿನ ಸಂಪ್ರದಾಯಕ ಆಚರಣೆಗೆ ತೊಡಕಾಗದಂತೆ ಮುಂದುವರಿಸೋಣ ಎಂಬ ಆಶಯ ವ್ಯಕ್ತಪಡಿಸಿದರು.

          ಸಾಕಷ್ಟು ವರ್ಷಗಳಿಂದಲೂ ಸಹಾ ಗ್ರಾಮದ ಸಿದ್ದರಾಮೇಶ್ವರ ಸ್ವಾಮಿಯು ಉತ್ಸವ ಇದೇ ರಾಜಬೀದಿಯಲ್ಲಿ ನಡೆದುಕೊಂಡು ಬರುತ್ತಿದ್ದು ಈಗ ಆ ಬೀದಿಯಲ್ಲಿನ ಮಾರ್ಗದ ಮಧ್ಯೆ ಕರಿಯಮ್ಮ ದೇವಿಯ ಮಹಾದ್ವಾರವು ನಿರ್ಮಾಣವಾಗಿರುವುದರಿಂದ ಇದರ ಕೆಳಗೆ ಸಿದ್ದರಾಮೇಶ್ವರ ಸ್ವಾಮಿಯು ಹೋಗಬಾರದು ಎನ್ನುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದರು
             ಕರಿಯಮ್ಮನ ದ್ವಾರದ ಕೆಳಗೆ ಸಿದ್ದರಾಮಣ್ಣ ಬಂದರೆ ಅದು ಅಶುಚಿಯಾಗುತ್ತದೆ ಎಂಬ ಭಾವನೆ ಇದೆಯಲ್ಲ ,ಅದು ಒಳ್ಲೆಯದಲ್ಲ.ಸಮಸ್ಯೆ ಬಿಗಡಾಯಿಸಿದ್ದರಿಂದ ಮುಜರಾಯಿ ಅಧಿಕಾರಿಗಳು ದೇವರನ್ನು ಹೊರುವಂತಾಯಿತು.ಇದರಿಂದ ದೇವರಿಗೆ ಮೈಲಿಗೆಯಾಗಿದೆ ಎಂಬ ಭಾವನೆ ಸರಿಯಲ್ಲ.ಮನಸ್ಸನ್ನು ಮೈಲಿಗೆ ಮಾಡಿಕೊಳ್ಳದೆ ಈ ಬಗ್ಗೆ ತಾರ್ಕಿಕವಾಗಿ ಯೋಚಿಸಿದರೆ ಪರಿಹಾರ ಸಾಧ್ಯವಿದೆ ಎಂದರು.

         ಕೇವಲ ಕ್ಷುಲ್ಲಕ ಕಾರಣಕ್ಕೆ ಸ್ವಾಮಿಯ ಜಾತ್ರೆಯನ್ನ ನಿಲ್ಲಿಸಿಸುವುದು ಆಗಬಾರದಿತ್ತು. ಹಿಂದಿನಿಂದಲೂ ನಡೆದುಬಂದಿರುವ ಪದ್ಧತಿಗಳನ್ನ ಯಾರು ಬದಲಾಯಿಸುವುದು ಬೇಡ. ಈ ಘಟನೆಯನ್ನು ತಿಳಿಗೊಳಿಸಲು ನಾವು ಮತ್ತು ಶ್ರೀಮಠದ ಸ್ವಾಮೀಜಿ ಹಾಗೂ ತಹಶೀಲ್ದಾರ್ ರವರು, ದೇವಾಲಯ ಸಮಿತಿಯ ಸದಸ್ಯರೆಲ್ಲಾ ಒಟ್ಟೂಗೂಡಿ ಸಭೆ ನಡೆಸಿ ನಡೆದಿರುವ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸುತ್ತೇವೆಂದು ತಿಳಿಸಿದರು.


            ಸಭೆಯಲ್ಲಿ ಜಿ.ಪಂ.ಸದಸ್ಯ ವೈ.ಸಿ.ಸಿದ್ದರಾಮಯ್ಯ, ಜಾತ್ರ ಸಮಿತಿಯ ಮುಖಂಡರಾದ ಮಲ್ಲಿಕಾರ್ಜುನ್, ಶೇಖರಪ್ಪ, ಮುನಿಯಪ್ಪ, ಶಿವಣ್ಣ, ರಾಮಲಿಂಗಯ್ಯ, ರೇವಣಸಿದ್ದೇಶ್ವರಸ್ವಾಮಿ ಮಠದ ರಾಮಯ್ಯ, ಕೃಷ್ಣಪ್ಪ, ಸಿದ್ದರಾಮಯ್ಯ ಸೇರಿದಂತೆ ಸಿಂಗಾಪುರ, ಮರಾಠಿಪಾಳ್ಯ, ಭಟರಹಳ್ಳಿ ಗ್ರಾಮಸ್ಥರು,ಮುಖಂಡರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...