ವಿಷಯಕ್ಕೆ ಹೋಗಿ

ಯಳನಾಡು ಜಾತ್ರೆಯಲ್ಲಿನ ವಿವಾದ ಬಗೆಹರಿಸಲು ಎಲ್ಲರ ಸಹಕಾರ ಅಗತ್ಯ; ಶ್ರೀಈಶ್ವರಾನಂದಪುರಿ ಸ್ವಾಮೀಜಿ

ಹುಳಿಯಾರು: ಹೋಬಳಿಯ ಯಳನಾಡು ಗ್ರಾಮದ ಶ್ರೀಗುರುಸಿದ್ಧರಾಮೇಶ್ವ ಸ್ವಾಮಿಯ ದೊಡ್ಡ ಜಾತ್ರ ಮಹೋತ್ಸವದಲ್ಲಿ ಸ್ವಾಮಿಯನ್ನು ಮಹಾದ್ವಾರದ ಕೆಳಗೆ ಕರೆದೊಯ್ಯಲು ನಿರಾಕರಿಸಿ ವಿವಾದಕ್ಕೀಡುಮಾಡಿರುವುದು ಉತ್ತಮ ಬೆಳವಣಿಗೆಯಲ್ಲ ,ಎರಡು ಕಡೆಯವರು ಈ ವಿಚಾರವನ್ನು ಪ್ರತಿಷ್ಟೆಯಾಗಿ ಪರಿಗಣಿಸಿದ್ದರಿಂದ ಜಾತ್ರೆ ಅರ್ಧಕ್ಕೆ ನಿಲ್ಲುವಂತಾಯಿತು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿಯವರು ಅಸಮಧಾನ ವ್ಯಕ್ತಪಡಿಸಿದರು.
         
ಇದೇ ವಿಚಾರವಾಗಿ ಯಳನಾಡುವಿನ ರೇವಣಸಿದ್ದೇಶ್ವರ ಸ್ವಾಮಿ ಮಠದಲ್ಲಿ ಬುಧವಾರ ಸಂಜೆ ಕರೆಯಲಾಗಿದ್ದ ಜನಾಂಗದ ಸಭೆಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಎರಡು ಸಮುದಾಯದವರಲ್ಲೂ ಮುಕ್ತ ಚರ್ಚೆಯಾಗಿ ಮನಸ್ಸು ತಿಳಿಗೊಳಿಸಿಕೊಂಡು ದೇವರ ಕಾರ್ಯವನ್ನು ಹಿಂದಿನ ಸಂಪ್ರದಾಯದಂತೆ ಮುಂದುವರಿಸಿಕೊಂಡು ಹೋಗಬೇಕೆಂದು ಮನವಿ ಮಾಡಿದರು.

      ಸಮಾಜ ಮುಖಂಡರ ಜೊತೆ ಜಾತ್ರಾ ಸಮಯದಲ್ಲಿ ಆದ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದ ಅವರು ಕರಿಯಮ್ಮ ದೇವಿಯ ದ್ವಾರದ ಕೆಳಗೆ ಸಿದ್ದರಾಮೇಶ್ವರ ಸ್ವಾಮಿ ಹೋಗಬಾರದು ಎಂದು ಕೆಲವರು ಪಟ್ಟುಹಿಡಿದು ಹಿಂದಿನ ಪರಂಪರೆಗೆ ಅಡ್ಡಿಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ.ಜಾತ್ರೆಯಲ್ಲಾಗಿರುವ ಅಡಚಣೆ ಬಗ್ಗೆ ಎರಡು ಸಮಾಜದವರು ಸೇರಿಕೊಂಡು ಸೌಹಾರ್ದವಾಗಿ ಸಮಸ್ಯೆ ಬಗೆಹರಿಸಿಕೊಂಡು ಹಿಂದಿನ ಸಂಪ್ರದಾಯಕ ಆಚರಣೆಗೆ ತೊಡಕಾಗದಂತೆ ಮುಂದುವರಿಸೋಣ ಎಂಬ ಆಶಯ ವ್ಯಕ್ತಪಡಿಸಿದರು.

          ಸಾಕಷ್ಟು ವರ್ಷಗಳಿಂದಲೂ ಸಹಾ ಗ್ರಾಮದ ಸಿದ್ದರಾಮೇಶ್ವರ ಸ್ವಾಮಿಯು ಉತ್ಸವ ಇದೇ ರಾಜಬೀದಿಯಲ್ಲಿ ನಡೆದುಕೊಂಡು ಬರುತ್ತಿದ್ದು ಈಗ ಆ ಬೀದಿಯಲ್ಲಿನ ಮಾರ್ಗದ ಮಧ್ಯೆ ಕರಿಯಮ್ಮ ದೇವಿಯ ಮಹಾದ್ವಾರವು ನಿರ್ಮಾಣವಾಗಿರುವುದರಿಂದ ಇದರ ಕೆಳಗೆ ಸಿದ್ದರಾಮೇಶ್ವರ ಸ್ವಾಮಿಯು ಹೋಗಬಾರದು ಎನ್ನುವುದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದರು
             ಕರಿಯಮ್ಮನ ದ್ವಾರದ ಕೆಳಗೆ ಸಿದ್ದರಾಮಣ್ಣ ಬಂದರೆ ಅದು ಅಶುಚಿಯಾಗುತ್ತದೆ ಎಂಬ ಭಾವನೆ ಇದೆಯಲ್ಲ ,ಅದು ಒಳ್ಲೆಯದಲ್ಲ.ಸಮಸ್ಯೆ ಬಿಗಡಾಯಿಸಿದ್ದರಿಂದ ಮುಜರಾಯಿ ಅಧಿಕಾರಿಗಳು ದೇವರನ್ನು ಹೊರುವಂತಾಯಿತು.ಇದರಿಂದ ದೇವರಿಗೆ ಮೈಲಿಗೆಯಾಗಿದೆ ಎಂಬ ಭಾವನೆ ಸರಿಯಲ್ಲ.ಮನಸ್ಸನ್ನು ಮೈಲಿಗೆ ಮಾಡಿಕೊಳ್ಳದೆ ಈ ಬಗ್ಗೆ ತಾರ್ಕಿಕವಾಗಿ ಯೋಚಿಸಿದರೆ ಪರಿಹಾರ ಸಾಧ್ಯವಿದೆ ಎಂದರು.

         ಕೇವಲ ಕ್ಷುಲ್ಲಕ ಕಾರಣಕ್ಕೆ ಸ್ವಾಮಿಯ ಜಾತ್ರೆಯನ್ನ ನಿಲ್ಲಿಸಿಸುವುದು ಆಗಬಾರದಿತ್ತು. ಹಿಂದಿನಿಂದಲೂ ನಡೆದುಬಂದಿರುವ ಪದ್ಧತಿಗಳನ್ನ ಯಾರು ಬದಲಾಯಿಸುವುದು ಬೇಡ. ಈ ಘಟನೆಯನ್ನು ತಿಳಿಗೊಳಿಸಲು ನಾವು ಮತ್ತು ಶ್ರೀಮಠದ ಸ್ವಾಮೀಜಿ ಹಾಗೂ ತಹಶೀಲ್ದಾರ್ ರವರು, ದೇವಾಲಯ ಸಮಿತಿಯ ಸದಸ್ಯರೆಲ್ಲಾ ಒಟ್ಟೂಗೂಡಿ ಸಭೆ ನಡೆಸಿ ನಡೆದಿರುವ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸುತ್ತೇವೆಂದು ತಿಳಿಸಿದರು.


            ಸಭೆಯಲ್ಲಿ ಜಿ.ಪಂ.ಸದಸ್ಯ ವೈ.ಸಿ.ಸಿದ್ದರಾಮಯ್ಯ, ಜಾತ್ರ ಸಮಿತಿಯ ಮುಖಂಡರಾದ ಮಲ್ಲಿಕಾರ್ಜುನ್, ಶೇಖರಪ್ಪ, ಮುನಿಯಪ್ಪ, ಶಿವಣ್ಣ, ರಾಮಲಿಂಗಯ್ಯ, ರೇವಣಸಿದ್ದೇಶ್ವರಸ್ವಾಮಿ ಮಠದ ರಾಮಯ್ಯ, ಕೃಷ್ಣಪ್ಪ, ಸಿದ್ದರಾಮಯ್ಯ ಸೇರಿದಂತೆ ಸಿಂಗಾಪುರ, ಮರಾಠಿಪಾಳ್ಯ, ಭಟರಹಳ್ಳಿ ಗ್ರಾಮಸ್ಥರು,ಮುಖಂಡರುಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...