ವಿಷಯಕ್ಕೆ ಹೋಗಿ

ಬಸವ ಜಯಂತಿ ಆಚರಣೆ ಬಗ್ಗೆ ಪಂಚಾಯ್ತಿ ಸದಸ್ಯರ ನಿರಾಸಕ್ತಿ

ಬಸವ ಜಯಂತಿ ಆಚರಣೆ ಬಗ್ಗೆ ಪಂಚಾಯ್ತಿ ಸದಸ್ಯರ ನಿರಾಸಕ್ತಿ
-----------------------------
ಹುಳಿಯಾರು:ಪ್ರತಿಯೊಂದು ಗ್ರಾಮಗಳ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಗ್ರಾಮಪಂಚಾಯ್ತಿಗಳಲ್ಲಿ ಕೆಲವೊಂದು ದಾರ್ಶನಿಕರ ಜಯಂತಿ ಆಚರಣೆಗೆ ಸರ್ಕಾರ ಆದೇಶಿಸಿದ್ದರೂ ಸಹ ಇಲ್ಲಿನ ಗ್ರಾಮಪಂಚಾಯ್ತಿಯಲ್ಲಿ ಸದಸ್ಯರ ಸಹಭಾಗಿತ್ವ ಇಲ್ಲದೆ ಆಚರಣೆಗಳು ಸಾರ್ವಜನಿಕರಲ್ಲಿ ನಗೆಪಾಟಿಲೀಗಾಡಾಗುತ್ತಿದೆ.

               ಇಂದು ನಾಡು ಕಂಡ ಮಹಾನ್ ಮಾನವತಾವಾದಿ ಬಸವಣ್ಣನವರ ಜಯಂತಿ ಆಚರಣೆಯಿದ್ದು ಜಿಲ್ಲೆಯ ಅತಿದೊಡ್ಡ ಪಂಚಾಯ್ತಿಯೆಂಬ ಹೆಗ್ಗಳಿಕೆಯಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕೇವಲ ಬೆರಳೇಣಿಕೆಯಷ್ಟು ಮಂದಿ ಮಾತ್ರ ಹಾಜರಿದ್ದು ಆಚರಿಸಿದ ಸಂಗತಿ ಚರ್ಚೆಯ ವಿಷಯವಾಗಿದೆ. ಗ್ರಾಪಂ ಅಧ್ಯಕ್ಷೆ ಗೀತಾ,ಸದಸ್ಯೆ ಸಿದ್ದಗಂಗಮ್ಮ,ಕಾರ್ಯದರ್ಶಿ ಉಮಾಶಂಕರ್,ಬಿಲ್ ಕಲೆಕ್ಟರ್ ರಾಜಣ್ಣ,ಕೃಷ್ಣಮೂರ್ತಿ,ಸಾರ್ವಜನಿಕರ ಪೈಕಿ ಇಮ್ರಾಜ್ ಹೊರತುಪಡಿಸಿದರೆ ಪಿಡಿಓ ಸೇರಿದಂತೆ ಇನ್ನುಳಿದ ೩೭ ಸದಸ್ಯರು ಗೈರಾಗಿದ್ದು ಸದಸ್ಯರ ನಿರಾಸಕ್ತಿಗೆ ಹಿಡಿದ ಕನ್ನಡಿಯಾಗಿದೆ.
ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಆಚರಿಸಲಾದ ಬಸವಜಯಂತಿಯಲ್ಲಿ ಹಾಜರಿರುವ ಬೆರಳೇಣಿಕೆಯ ಸದಸ್ಯರು ಹಾಗೂ ಸಿಬ್ಬಂದಿ.
             ಕಳೆದೊಂದು ವರ್ಷದಿಂದ ಕನಕ ಜಯಂತಿ,ಮಹಾವೀರ ಜಯಂತಿ,ಶಿವಾಜಿ ಜಯಂತಿ,ವಾಲ್ಮೀಕಿ ಜಯಂತಿ,ಟಿಪ್ಪು ಜಯಂತಿ,ಸಿದ್ದರಾಮೇಶ್ವರ ಜಯಂತಿ,ಬಸವ ಜಯಂತಿ ಸೇರಿದಂತೆ ಹಲವಾರು ದಾರ್ಶನಿಕರ ಆಚರಣೆಗೆ ಒತ್ತುನೀಡಿ ಆದೇಶ ಮಾಡಿದೆ.ಹೆಚ್ಚಿನ ಸಂದರ್ಭಗಳಲ್ಲಿ ಆಯಾ ಜಯಂತಿಯಂದು ರಜೆ ಕೂಡ ಇರುವುದರಿಂದ ಅಧಿಕಾರಿಗಳು ಹಾಗೂ ಸದಸ್ಯರ ಪಾಲ್ಗೊಳ್ಳುವಿಕೆಯಿಲ್ಲದೆ ಕೇವಲ ಶಿಷ್ಟಾಚಾರ ಪಾಲನೆಗೋಸ್ಕರ ಜಯಂತಿ ಆಚರಣೆ ಮಾಡುವ ಪ್ರಸಂಗ ಉಂಟಾಗುತ್ತಿದೆ.

             ಇಂದಿನ ಬಸವ ಜಯಂತಿ ಸೇರಿದಂತೆ ಇತ್ತಿಚೆಗೆ ನಡೆದ ದಾಸೀಮಯ್ಯ ಜಯಂತಿ,ಬಾಬು ಜಗಜೀವನರಾಂ ಜಯಂತಿ,ಅಂಬೇಡ್ಕರ್ ಜಯಂತಿ ಮುಂತಾದ ಜಯಂತಿಗಳ ಆಚರಣೆ ಪಂಚಾಯ್ತಿಯಲ್ಲಿ ನಡೆದರು ಸಹ ೩೯ ಸದಸ್ಯರುಗಳ ಪೈಕಿ ಅಧ್ಯಕ್ಷರು ಕೇವಲ ಮೂರ್ನಾಲ್ಕು ಮಂದಿ ಸದಸ್ಯರು ಮಾತ್ರ ಹಾಜರಿರುವುದು ಹಾಗೂ ಹೆಚ್ಚಿನ ಸಂದರ್ಭದಲ್ಲಿ ಸಿಬ್ಬಂದಿಯೂ ಸೇರಿ ಕೇವಲ ಏಳೆಂಟು ಮಂದಿ ಮಾತ್ರ ಪಾಲ್ಗೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ.

                   ನಾಡಿನ ಮಹಾಪುರುಷರ ಜಯಂತಿಗಳನ್ನು ಆಚರಿಸುವುದು ಸರ್ಕಾರ ಅವರಿಗೆ ಸಲ್ಲಿಸುವ ಒಂದು ಗೌರವದ ಸಂಗತಿಯಾಗಿದ್ದರೂ ಸಹ ಜಯಂತಿಗಳ ದಿನ ಸರ್ಕಾರಿ ರಜಾವಿರುವುದರಿಂದ ಯಾರೊಬ್ಬರು ಬಾರದೆ ಅನಿವಾರ್ಯವಾಗಿ ಸಿಬ್ಬಂದಿಗಳೆ ಜಯಂತಿ ಆಚರಿಸುವಂತಾಗಿದೆ.ಆಗಮಿಸುವ ಒಂದಿಬ್ಬರು ಸದಸ್ಯರೊಂದಿಗೆ ಸಿಬ್ಬಂದಿ ವರ್ಗದವರು ಮಹಾನುಭಾವರ ಫೋಟೊ ಇಟ್ಟು ಹಾರ ಹಾಕಿ ಫೋಟೊ ತೆಗೆದುಕೊಳ್ಳುವುದೆ ಜಯಂತಿ ಆಚರಣೆಯಾಗಿದೆ. ಕೇವಲ ಐದೇ ನಿಮಿಷದಲ್ಲಿ ಮುಗಿಯುವ ಕಾಟಾಚಾರದ ಜಯಂತಿಗಳು ಆಚರಿಸಬೇಕಾದ ಅಗತ್ಯವಾದರೂ ಏನೆಂದು ಕೇಳುವಂತಾಗಿದೆ.

             ಪಂಚಾಯ್ತಿ ಅನುದಾನದಲ್ಲಿ ಖರ್ಚು ಹಾಕಿ ಆಚರಿಸುವ ಜಯಂತಿ ಬಗ್ಗೆ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂದು ಕೆಲವೊಂದು ಮಾರ್ಗದರ್ಶಿ ಸೂತ್ರರೂಪಿಸಬೇಕಾದ ಅನಿವಾರ್ಯತೆಯಿದೆ.
----------------------------------------------------

ಹೆಚ್ಚಿನ ಜಯಂತಿಗಳು ಆಯಾ ಜಾತಿಗೆ ಸೀಮಿತವಾಗಿದ್ದು ಅವರುಗಳ ಪಾಲ್ಗೊಳ್ಳುವಿಕೆ ಅನಿವಾರ್ಯ.ಆದರೆ ಇಂದು ಸಾರ್ವಜನಿಕರು ಹಾಗೂ ಸದಸ್ಯರುಗಳು ಇದರೆಡೆ ಆಸಕ್ತಿವಹಿಸುತ್ತಿಲ್ಲ.ಇಂದಿನ ಬಸವ ಜಯಂತಿ ಆಚರಣೆ ಬಗ್ಗೆ ವಾರದ ಮುನ್ನವೇ ಸದಸ್ಯರುಗಳಿಗೆ ಮೆಮೋ ಜಾರಿ ಮಾಡಿದ್ದರೂ ಸಹ ಯಾರೊಬ್ಬರು ಬಂದಿಲ್ಲ.ಹಾಗಾಗಿ ಸಿಬ್ಬಂದಿಯೆ ಆಚರಿಸುವುದು ಅನಿವಾರ್ಯವಾಗಿದೆ.: ಗೀತಾ,ಗ್ರಾಪಂ ಅಧ್ಯಕ್ಷೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...