ವಿಷಯಕ್ಕೆ ಹೋಗಿ

ಬಸವ ಜಯಂತಿ ಆಚರಣೆ ಬಗ್ಗೆ ಪಂಚಾಯ್ತಿ ಸದಸ್ಯರ ನಿರಾಸಕ್ತಿ

ಬಸವ ಜಯಂತಿ ಆಚರಣೆ ಬಗ್ಗೆ ಪಂಚಾಯ್ತಿ ಸದಸ್ಯರ ನಿರಾಸಕ್ತಿ
-----------------------------
ಹುಳಿಯಾರು:ಪ್ರತಿಯೊಂದು ಗ್ರಾಮಗಳ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಗ್ರಾಮಪಂಚಾಯ್ತಿಗಳಲ್ಲಿ ಕೆಲವೊಂದು ದಾರ್ಶನಿಕರ ಜಯಂತಿ ಆಚರಣೆಗೆ ಸರ್ಕಾರ ಆದೇಶಿಸಿದ್ದರೂ ಸಹ ಇಲ್ಲಿನ ಗ್ರಾಮಪಂಚಾಯ್ತಿಯಲ್ಲಿ ಸದಸ್ಯರ ಸಹಭಾಗಿತ್ವ ಇಲ್ಲದೆ ಆಚರಣೆಗಳು ಸಾರ್ವಜನಿಕರಲ್ಲಿ ನಗೆಪಾಟಿಲೀಗಾಡಾಗುತ್ತಿದೆ.

               ಇಂದು ನಾಡು ಕಂಡ ಮಹಾನ್ ಮಾನವತಾವಾದಿ ಬಸವಣ್ಣನವರ ಜಯಂತಿ ಆಚರಣೆಯಿದ್ದು ಜಿಲ್ಲೆಯ ಅತಿದೊಡ್ಡ ಪಂಚಾಯ್ತಿಯೆಂಬ ಹೆಗ್ಗಳಿಕೆಯಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕೇವಲ ಬೆರಳೇಣಿಕೆಯಷ್ಟು ಮಂದಿ ಮಾತ್ರ ಹಾಜರಿದ್ದು ಆಚರಿಸಿದ ಸಂಗತಿ ಚರ್ಚೆಯ ವಿಷಯವಾಗಿದೆ. ಗ್ರಾಪಂ ಅಧ್ಯಕ್ಷೆ ಗೀತಾ,ಸದಸ್ಯೆ ಸಿದ್ದಗಂಗಮ್ಮ,ಕಾರ್ಯದರ್ಶಿ ಉಮಾಶಂಕರ್,ಬಿಲ್ ಕಲೆಕ್ಟರ್ ರಾಜಣ್ಣ,ಕೃಷ್ಣಮೂರ್ತಿ,ಸಾರ್ವಜನಿಕರ ಪೈಕಿ ಇಮ್ರಾಜ್ ಹೊರತುಪಡಿಸಿದರೆ ಪಿಡಿಓ ಸೇರಿದಂತೆ ಇನ್ನುಳಿದ ೩೭ ಸದಸ್ಯರು ಗೈರಾಗಿದ್ದು ಸದಸ್ಯರ ನಿರಾಸಕ್ತಿಗೆ ಹಿಡಿದ ಕನ್ನಡಿಯಾಗಿದೆ.
ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಆಚರಿಸಲಾದ ಬಸವಜಯಂತಿಯಲ್ಲಿ ಹಾಜರಿರುವ ಬೆರಳೇಣಿಕೆಯ ಸದಸ್ಯರು ಹಾಗೂ ಸಿಬ್ಬಂದಿ.
             ಕಳೆದೊಂದು ವರ್ಷದಿಂದ ಕನಕ ಜಯಂತಿ,ಮಹಾವೀರ ಜಯಂತಿ,ಶಿವಾಜಿ ಜಯಂತಿ,ವಾಲ್ಮೀಕಿ ಜಯಂತಿ,ಟಿಪ್ಪು ಜಯಂತಿ,ಸಿದ್ದರಾಮೇಶ್ವರ ಜಯಂತಿ,ಬಸವ ಜಯಂತಿ ಸೇರಿದಂತೆ ಹಲವಾರು ದಾರ್ಶನಿಕರ ಆಚರಣೆಗೆ ಒತ್ತುನೀಡಿ ಆದೇಶ ಮಾಡಿದೆ.ಹೆಚ್ಚಿನ ಸಂದರ್ಭಗಳಲ್ಲಿ ಆಯಾ ಜಯಂತಿಯಂದು ರಜೆ ಕೂಡ ಇರುವುದರಿಂದ ಅಧಿಕಾರಿಗಳು ಹಾಗೂ ಸದಸ್ಯರ ಪಾಲ್ಗೊಳ್ಳುವಿಕೆಯಿಲ್ಲದೆ ಕೇವಲ ಶಿಷ್ಟಾಚಾರ ಪಾಲನೆಗೋಸ್ಕರ ಜಯಂತಿ ಆಚರಣೆ ಮಾಡುವ ಪ್ರಸಂಗ ಉಂಟಾಗುತ್ತಿದೆ.

             ಇಂದಿನ ಬಸವ ಜಯಂತಿ ಸೇರಿದಂತೆ ಇತ್ತಿಚೆಗೆ ನಡೆದ ದಾಸೀಮಯ್ಯ ಜಯಂತಿ,ಬಾಬು ಜಗಜೀವನರಾಂ ಜಯಂತಿ,ಅಂಬೇಡ್ಕರ್ ಜಯಂತಿ ಮುಂತಾದ ಜಯಂತಿಗಳ ಆಚರಣೆ ಪಂಚಾಯ್ತಿಯಲ್ಲಿ ನಡೆದರು ಸಹ ೩೯ ಸದಸ್ಯರುಗಳ ಪೈಕಿ ಅಧ್ಯಕ್ಷರು ಕೇವಲ ಮೂರ್ನಾಲ್ಕು ಮಂದಿ ಸದಸ್ಯರು ಮಾತ್ರ ಹಾಜರಿರುವುದು ಹಾಗೂ ಹೆಚ್ಚಿನ ಸಂದರ್ಭದಲ್ಲಿ ಸಿಬ್ಬಂದಿಯೂ ಸೇರಿ ಕೇವಲ ಏಳೆಂಟು ಮಂದಿ ಮಾತ್ರ ಪಾಲ್ಗೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ.

                   ನಾಡಿನ ಮಹಾಪುರುಷರ ಜಯಂತಿಗಳನ್ನು ಆಚರಿಸುವುದು ಸರ್ಕಾರ ಅವರಿಗೆ ಸಲ್ಲಿಸುವ ಒಂದು ಗೌರವದ ಸಂಗತಿಯಾಗಿದ್ದರೂ ಸಹ ಜಯಂತಿಗಳ ದಿನ ಸರ್ಕಾರಿ ರಜಾವಿರುವುದರಿಂದ ಯಾರೊಬ್ಬರು ಬಾರದೆ ಅನಿವಾರ್ಯವಾಗಿ ಸಿಬ್ಬಂದಿಗಳೆ ಜಯಂತಿ ಆಚರಿಸುವಂತಾಗಿದೆ.ಆಗಮಿಸುವ ಒಂದಿಬ್ಬರು ಸದಸ್ಯರೊಂದಿಗೆ ಸಿಬ್ಬಂದಿ ವರ್ಗದವರು ಮಹಾನುಭಾವರ ಫೋಟೊ ಇಟ್ಟು ಹಾರ ಹಾಕಿ ಫೋಟೊ ತೆಗೆದುಕೊಳ್ಳುವುದೆ ಜಯಂತಿ ಆಚರಣೆಯಾಗಿದೆ. ಕೇವಲ ಐದೇ ನಿಮಿಷದಲ್ಲಿ ಮುಗಿಯುವ ಕಾಟಾಚಾರದ ಜಯಂತಿಗಳು ಆಚರಿಸಬೇಕಾದ ಅಗತ್ಯವಾದರೂ ಏನೆಂದು ಕೇಳುವಂತಾಗಿದೆ.

             ಪಂಚಾಯ್ತಿ ಅನುದಾನದಲ್ಲಿ ಖರ್ಚು ಹಾಕಿ ಆಚರಿಸುವ ಜಯಂತಿ ಬಗ್ಗೆ ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂದು ಕೆಲವೊಂದು ಮಾರ್ಗದರ್ಶಿ ಸೂತ್ರರೂಪಿಸಬೇಕಾದ ಅನಿವಾರ್ಯತೆಯಿದೆ.
----------------------------------------------------

ಹೆಚ್ಚಿನ ಜಯಂತಿಗಳು ಆಯಾ ಜಾತಿಗೆ ಸೀಮಿತವಾಗಿದ್ದು ಅವರುಗಳ ಪಾಲ್ಗೊಳ್ಳುವಿಕೆ ಅನಿವಾರ್ಯ.ಆದರೆ ಇಂದು ಸಾರ್ವಜನಿಕರು ಹಾಗೂ ಸದಸ್ಯರುಗಳು ಇದರೆಡೆ ಆಸಕ್ತಿವಹಿಸುತ್ತಿಲ್ಲ.ಇಂದಿನ ಬಸವ ಜಯಂತಿ ಆಚರಣೆ ಬಗ್ಗೆ ವಾರದ ಮುನ್ನವೇ ಸದಸ್ಯರುಗಳಿಗೆ ಮೆಮೋ ಜಾರಿ ಮಾಡಿದ್ದರೂ ಸಹ ಯಾರೊಬ್ಬರು ಬಂದಿಲ್ಲ.ಹಾಗಾಗಿ ಸಿಬ್ಬಂದಿಯೆ ಆಚರಿಸುವುದು ಅನಿವಾರ್ಯವಾಗಿದೆ.: ಗೀತಾ,ಗ್ರಾಪಂ ಅಧ್ಯಕ್ಷೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...