ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಾರ್ ನವೀಕರಿಸದಿರಲು ಜಿಲ್ಲಾಧಿಕಾರಿಗಳಿಗೆ ಮನವಿ ---------------- ಹುಳಿಯಾರು :ಜನನಿಬೀಡ ಪ್ರದೇಶದಲ್ಲಿರುವ ಹಾಗೂ ಅಬ್ಕಾರಿ ನಿಯಮ ಉಲ್ಲಂಘಿಸಿ ನಿಯಮಬಾಹಿರವಾಗಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಮದ್ಯದಂಗಡಿಯ ಸನ್ನದ್ದನ್ನು ರದ್ದು ಮಾಡಿ ೨೦೧೬-೧೭ನೇ ಸಾಲಿಗೆ ಪುನರ್ ನವೀಕರಣ ಮಾಡದಂತೆ ಪಟ್ಟಣದ ವಿವಿಧ ಸಂಘಸಂಸ್ಥೆಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಪಟ್ಟಣದ ಟೌನ್ ಕೋ ಆಪರೇಟಿವ್ ಕಟ್ಟಡದಲ್ಲಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಅನ್ನು ಸದರಿ ಸ್ಥಳದಿಂದ ತೆರವು ಮಾಡಿಸುವ ಕುರಿತಂತೆ ತಾಲ್ಲೂಕ್ ರೈತಸಂಘದ ನೇತೃತ್ವದಲ್ಲಿ ಹೋಬಳಿ ರೈತಸಂಘ,ಸೃಜನಾ ಸ್ತ್ರೀಶಕ್ತಿ ಮಹಿಳಾ ಒಕ್ಕೂಟ,ಕರ್ನಾಟಕ ರಕ್ಷಣ ವೇದಿಕೆ,ಜಯಕರ್ನಾಟಕ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗೆ ೧೧೬ ಮೀಟರ್ ಅಂತರದಲ್ಲಿ ಮಧ್ಯದಂಗಡಿಯಿದ್ದು ಸುಪ್ರೀಮ್ ಕೋರ್ಟ್ ಮಾರ್ಗಸೂಚಿಯಂತೆ ಹೆದ್ದಾರಿ ಸಮೀಪದಲ್ಲಿ ಮದ್ಯದಂಗಡಿ ನಡೆಸುವದಕ್ಕೆ ಅವಕಾಶವಿಲ್ಲದಿದ್ದರೂ ಕೂಡ ಅವಕಾಶ ಮಾಡಿರುವುದು ಸರಿಯಲ್ಲ .ಅಲ್ಲದೆ ಮುಜುರಾಯಿ ಇಲಾಖೆಯ ಲಕ್ಷ್ಮಿ ರಂಗನ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070