ವಿಷಯಕ್ಕೆ ಹೋಗಿ

ಸೋಮನಹಳ್ಳಿ ಶಾಲೆಯಲ್ಲಿ ಶಿಕ್ಷಕರ ಕೊರತೆ

ಹಿಂದುಳಿದ ವರ್ಗದ ಮಕ್ಕಳಿಗೆ ಮರೀಚಿಕೆಯಾದ ಶಿಕ್ಷಣ
----------------------------------
ವರದಿ :ಡಿ.ಆರ್.ನರೇಂದ್ರಬಾಬು
ಹುಳಿಯಾರು: ಹೋಬಳಿಯ ಗಾಣಧಾಳು ಪಂಚಾಯ್ತಿಯ ಸೋಮನಹಳ್ಳಿ ಗ್ರಾಮದ ಜಿ.ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಯು ಕಳೆದ ಎರಡು ವರ್ಷಗಳಿಂದಲೂ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿದ್ದು, ಮಕ್ಕಳಿಗೆ ಸಮರ್ಪಕವಾದ ಶಿಕ್ಷಣ ಮರೀಚಿಕೆಯಾಗಿದೆ.


ಒಂದರಿಂದ ಏಳನೇ ತರಗತಿಯವರೆಗೆ ಒಟ್ಟು ೧೫೦ ವಿದ್ಯಾರ್ಥಿಗಳಿದ್ದು ಮಂಜೂರಾಗಿರುವ ಏಳು ಶಿಕ್ಷಕ ಹುದ್ದೆಯ ಪೈಕಿ ಇಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.ಶಿಕ್ಷಕರ ವರ್ಗಾವಣೆ ಹಾಗೂ ನಿವೃತ್ತಿಯಿಂದ ಐದು ಹುದ್ದೆಗಳು ಖಾಲಿಯಿದ್ದು ಹುದ್ದೆಗಳು ಭರ್ತಿಯಾಗದ ಕಾರಣ ದೈನಂದಿನ ಪಾಠ ಪ್ರವಚನಕ್ಕೆ ಅಡಚಣೆಯಾಗಿದೆ.ಇರುವ ಇಬ್ಬರು ಶಿಕ್ಷಕರಲ್ಲಿ ರಾಜಣ್ಣ ಮುಖ್ಯಶಿಕ್ಷಕರಾಗಿದ್ದು ಕಛೇರಿಯ ಕಡತ ನಿರ್ವಹಣೆ ಜೊತೆಗೆ ಬಿಸಿಯೂಟದ ,ಕ್ಷೀರಭಾಗ್ಯ, ಸಮವಸ್ತ್ರ ವಿತರಣೆ ,ನಲಿಕಲಿಯಂತಹ ಹತ್ತಾರು ಜವಬ್ದಾರಿ ನೋಡುವುದರಲ್ಲೆ ಕಾಲ ಮುಗಿಯುವುದರಿಂದ ಶಾಲೆಯತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಗುವುದಿಲ್ಲ.ಇನ್ನುಳಿದ ಸಹಶಿಕ್ಷಕರೊಬ್ಬರೆ 1ರಿಂದ 7ನೇ ತರಗತಿಗಳನ್ನು ನಿಭಾಯಿಸಬೇಕಾಗಿದೆ.


ಕಳೆದ ಎರಡು ವರ್ಷಗಳಿಂದಲೂ ಈ ಬಗ್ಗೆ ಇಲಾಖೆ ಕ್ರಮ ಕೈಗೊಳ್ಳದಿರುವುದರಿಂದ ಶಾಲೆಯ ಶೈಕ್ಷಣಿಕ ಪ್ರಗತಿ ಇಳಿಮುಖವಾಗುತ್ತಿದೆ.ಶಿಕ್ಷಕರ ಕೊರತೆಯಿಂದ ಪಾಠ ಪ್ರವಚನಗಳು ,ನಲಿಕಲಿ ಕಾರ್ಯಕ್ರಮ ಸರಿಯಾಗಿ ನಡೆಯದೆ ಶಾಲೆಯಲ್ಲಿ ಮಕ್ಕಳ ಫಲಿತಾಂಶ ಕುಂಠಿತಗೊಂಡಿದೆ.ಶೈಕ್ಷಣಿಕ ವರ್ಷದ ಆರಂಭಕ್ಕೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಅತಿಥಿ ಶಿಕ್ಷಕರ ನೇಮಿಸುವ ಇಲಾಖೆ ನಂತರ ಸಂಬಳ ಕೊಡದೆ ಸತಾಯಿಸುವುದರಿಂದ ಅವರು ಕೂಡ ಬಾರದಂತಾಗಿದ್ದಾರೆ.ಕೆಲ ಪೋಷಕರು ಮಕ್ಕಳ ಭವಿಷ್ಯದ ದೃಷ್ಠಿಯಿಂದ ಈಗಾಗಲೆ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ಟಿಸಿ ಕೇಳುತ್ತಿದ್ದಾರೆ.ಈಗಾಗಲೆ ಗುರುವಾರದಿಂದ ಹತ್ತುಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ಸೇರಿದ್ದಾರೆಂದು ಶಾಲಾ ಎಸ್ಡಿಎಂಸಿ ಸದಸ್ಯ ಹಾಗೂ ಪೋಷಕ ಮರಿಯಣ್ಣ ಆತಂಕ ವ್ಯಕ್ತ ಪಡಿಸಿದ್ದಾರೆ.


ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಇದೇ ಸಮಸ್ಯೆ ಮುಂದುವರಿದಿದೆ.ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುವ ಶಿಕ್ಷಣ ಇಲಾಖೆಯ ಅಧಿಕಾರಿಗಳ ಮಾತು ಕೇವಲ ಭರವಸೆಯಾಗಿಯೇ ಉಳಿದಿದೆ.ಶಾಲೆಗೆ ಖಾಯಂ ನೇಮಕಾತಿಯಿರಲಿ ಈ ಬಾರಿ ಅತಿಥಿ ಶಿಕ್ಷಕರು ನೇಮಕಾತಿಯೂ ಆಗಿಲ್ಲ.ಶಾಲೆಯ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ವಿಜಯಮ್ಮ,ರತ್ನಮ್ಮ,ಗೀತಾಬಾಯಿ ಹಾಗೂ ಶಿವಣ್ಣ ಶಾಸಕರ ಗಮನ ಸೆಳೆದಿದ್ದಾರೆ.

ಎಸ್‌ಡಿಎಂಸಿ, ಪೋಷಕರ ನಿಯೋಗವು ಗುರುವಾರದಂದು ಜಿಲ್ಲಾ ಉಪನಿರ್ದೇಶಕರು-ಸಾರ್ವಜನಿಕ ಶಿಕ್ಷಣ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕ್ ದಂಡಾಧಿಕಾರಗಳನ್ನು ಭೇಟಿ ಮಾಡಿ ಸಮಸ್ಯೆ ಏನೆಂದು ಮನವರಿಕೆ ಮಾಡಿಕೊಟ್ಟಿದ್ದಾರೆ.ಖಾಲಿಯಿರುವ ೫ ಹುದ್ದೆಗೆ ಶಿಕ್ಷಕರನ್ನು ನೇಮಕಾತಿ ಮಾಡದಿದ್ದಲ್ಲಿ ಮುಂದಿನ ಶುಕ್ರವಾರದಿಂದ ಶಾಲೆಗೆ ಬೀಗ ಪ್ರತಿಭಟನೆ ನಡೆಸಲಾಗುವುದು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಸಿ ಧನಂಜಯ ಎಚ್ಚರಿಸಿದ್ದಾರೆ.

ಶಿಕ್ಷಣ ಇಲಾಖೆ ಆದಷ್ಟು ಬೇಗ ಶಿಕ್ಷಕರನ್ನು ನೇಮಕ ಮಾಡಿ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
----------------
ತೀರಾ ಹಿಂದುಇಳಿದ ಪ್ರದೇಶವಾದ ಸೋಮನಹಳ್ಳಿ ಶಾಲೆಯಲ್ಲಿ ೮೦ ಮಕ್ಕಳು ಎಸ್.ಸಿ , ೬೦ ಮಕ್ಕಳು ಗೊಲ್ಲರು ಹಾಗೂ ಉಳಿದ ಹತ್ತು ಮಕ್ಕಳು ಇತರೆಯವರಾಗಿದ್ದು ಇವರೆಲ್ಲಾ ಇದೇ ಶಾಲೆಯನ್ನು ಆಶ್ರಯಿಸಬೇಕಿದೆ.ಇಲಾಖೆ ಖಾಲಿಯಿರುವ ಶಿಕ್ಷಕರ ನೇಮಕಾತಿಗಾಗಿ ತಲೆಕೆಡಿಸಿಕೊಳ್ಳುತ್ತಿಲ್ಲ.ಇವರುಗಳ ಬೇಜವಬ್ದಾರಿತನದಿಂದ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಹಿಂದೇಟು ಹಾಕುವಂತಾಗಿದೆ.ಶಿಕ್ಷಕರ ಕೊರತೆಯಿಂದಾಗಿ ಮಕ್ಕಳ ಭವಿಷ್ಯ ಹಾಳಾಗುತ್ತಿದೆ.ಶಿಕ್ಷಕರ ಸಮಸ್ಯೆ ಕುರಿತು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ :ತಿಮ್ಮಯ್ಯ , ಶಾಲಾಭಿವೃದ್ಧಿ ಸಮಿತಿ ಸದಸ್ಯರು.

---------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...