ವಿಷಯಕ್ಕೆ ಹೋಗಿ

ಅಧಿಕಾರಿಗಳ ಅಜಾಗರೂಕತೆಯಿಂದ ಬೇರೊಬ್ಬರ ಖಾತೆಗೆ ರಾಗಿ ಹಣ

ಬಳಸಿಕೊಂಡ ಹಣವನ್ನು ಕೂಡಲೇ ಕಟ್ಟಲು ತಾಕೀತು : ಕಾಲಾವಕಾಶಕ್ಕೆ ರೈತನ ಮೊರೆ
-----------------
          ತನ್ನ ಖಾತೆಯಲ್ಲಿ ಅಧಿಕಾರಿಗಳ ಅಜಾಗರೂಕತೆಯಿಂದ ಹೆಚ್ಚುವರಿಯಾಗಿ ಬಂದಿರುವ ಹಣದ ಬಗ್ಗೆ ಅರಿಯದ ರೈತ ತನ್ನ ಖಾತೆಯಲ್ಲಿನ ಹಣವನ್ನು ಜಮೀನಿನಲ್ಲಿನ ಬೋರ್ ವೆಲ್ ಗೆ ವಿದ್ಯುತ್ ಸಂಪರ್ಕಕ್ಕಾಗಿ ಟಿಸಿ ತರಲು ಬಳಸಿಕೊಂಡಿದ್ದೆ ಆತನಿಗೆ ಉರುಳಾಗಿ ಪರಿಣಮಿಸಿದ್ದು ಹಣ ಹೊಂದಿಸಲು ರೈತ ಪರದಾಡುವಂತಾಗಿದೆ.

       ಹೌದು..ರಾಗಿ ಮಾರಿದ್ದ ರೈತನ ಖಾತೆಗೆ ಆತನ ಹಣವೂ ಸೇರಿ ಬೇರೊಬ್ಬರ ಹಣವೂ ಬಂದಿದ್ದು ಹೆಚ್ಚುವರಿಯಾಗಿ ಖಾತೆಗೆ ಜಮೆಯಾಗಿರುವ ಹಣವನ್ನು ಈ ಕೂಡಲೇ ಕಟ್ಟಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ರೈತನಿಗೆ ತಾಕೀತು ಮಾಡಿರುವುದಲ್ಲದೆ ರೈತನ ಬ್ಯಾಂಕ್ ಖಾತೆಯನ್ನು ವಹಿವಾಟು ನಡೆಸದಂತೆ ತಡೆಹಿಡಿದಿರುವುದು ಸಮಸ್ಯೆಗೆ ಕಾರಣವಾಗಿದೆ.

ನಡೆದಿದ್ದೇನು: ದೊಡ್ಡಬಿದರೆ ಗ್ರಾಮದ ದೇವರಾಜಪ್ಪ ಎಂಬಾತ ಹುಳಿಯಾರಿನ ರಾಗಿ ಖರೀದಿ ಕೇಂದ್ರದಲ್ಲಿ ೮ ಕ್ವಿಂಟಾಲ್ ರಾಗಿ ಮಾರಾಟ ಮಾಡಿದ್ದು ಈ ಬಾಬ್ತು ಆತನ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಗೆ ಮಾರ್ಚ್ ೨೨ ರಂದು ೧೬೮೦೦ ಹಣ ಜಮೆಯಾಗಿದೆ.ನಂತರ ಏಪ್ರಿಲ್ ೨೯ ರಂದು ಅಧಿಕಾರಿಗಳ ಅಜಾಗರೂಕತೆಯಿಂದಾಗಿ ಪುನಃ ೮ ಕ್ವಿಂಟಾಲ್ ರಾಗಿಯ ಹಣವಾಗಿ ೧೬೮೦೦ ಹಣ ಜಮೆಯಾಗಿದೆ.
ಇತ್ತೀಚೆಗಷ್ಟೆ ದೇವರಾಜಪ್ಪ ತನ್ನ ಜಮೀನಿಗೆ ಕಲ್ಲು ಕಂಬ ಹಾಕಲು ಹಾಗೂ ವಿದ್ಯುಚ್ಛಕ್ತಿಗಾಗಿ ಟಿಸಿ ತರಲು ಹಣದ ಅವಶ್ಯಕತೆ ಕಂಡು ಬಂದು ಹಿನ್ನೆಲೆಯಲ್ಲಿ ತನ್ನ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಡ್ರಾ ಮಾಡಿಕೊಂಡು ಬಳಸಿಕೊಂಡಿದ್ದಾನೆ.

              ಪುನಃ ಹಣ ಬೇಕಾದ ಹಿನ್ನಲೆಯಲ್ಲಿ ಡ್ರಾ ಮಾಡಲು ಬ್ಯಾಂಕಿಗೆ ಹೋದಾಗ ಆತನ ಬ್ಯಾಂಕ್ ಖಾತೆ ಸ್ಥಗಿತಗೊಂಡಿರುವುದಾಗಿ ಹೇಳಿದ ಬ್ಯಾಂಕ್ ವ್ಯವಸ್ಥಾಪಕರು ಆತನನ್ನು ಹಿಂದಕ್ಕೆ ಕಳುಹಿಸಿದ್ದಾರೆ. ಅದೇ ಸಮಯಕ್ಕೆ ಆಹಾರ ಮತ್ತು ನಾಗರೀಕ ಇಲಾಖೆಯ ಖರೀದಿ ಅಧಿಕಾರಿಗಳು ರೈತ ದೇವರಾಜಪ್ಪನಿಗೆ ಫೋನ್ ಮಾಡಿ ಎರಡು ಬಾರಿ ನಿಮ್ಮ ಖಾತೆಗೆ ಹಣ ಜಮೆಯಾಗಿದ್ದು ಸರ್ಕಾರದ ಹಣ ಬಳಸಿಕೊಂಡಿರುವ ಹಿನ್ನಲೆಯಲ್ಲಿ ನೀವೀಗ ಪೂರಾ ಹಣವನ್ನು ತತ್ ಕ್ಷಣವೇ ಜಮೆ ಮಾಡಬೇಕೆಂದು ಎಚ್ಚರಿಸಿದ್ದಾರೆ.

          ಈ ಬಗ್ಗೆ ಏನೊಂದು ಅರಿಯದ ಮುಗ್ಧ ದೇವರಾಜಪ್ಪ ಬ್ಯಾಂಕ್ ಹಾಗೂ ಎಪಿಎಂಸಿಗೆ ಎಡೆತಾಕಿದಾಗ ಈತನ ಖಾತೆಗೆ ಎರಡು ಬಾರಿ ರಾಗಿಯ ಹಣವನ್ನು ಜಮೆಮಾಡಿರುವುದಾಗಿ ತಿಳಿಸಿದ್ದಾರೆ.ಕುಣಿಗಲ್ ನ ದೇವಿರಮ್ಮ ಎಂಬುವವರ ಹಣವನ್ನು ಸಹ ಈತನ ಖಾತೆಗೆ ಜಮೆ ಮಾಡಿರುವುದಾಗಿ ಖರೀದಿ ಅಧಿಕಾರಿಗಳಿಂದ ತಿಳಿದುಬಂದಿದೆ.
            ಹಣಹೊಂದಿಸುವ ಚಿಂತೆಗೆ ಬಿದ್ದ ದೇವರಾಜಪ್ಪನಿಗೆ ಖರೀದಿ ಅಧಿಕಾರಿಗಳು ಮನೆಬಾಗಿಲಿಗೆ ಬಂದಿದ್ದು ಇನ್ನಷ್ಟು ದಿಗಿಲು ಹುಟ್ಟಿಸಿದೆ.ಹಣ ಜಮೆಮಾಡದಿದ್ದಲ್ಲಿ ಸಮಸ್ಯೆಯುಂಟಾಗುತ್ತದೆಂದು ಭಯಭೀತನಾದ ದೇವರಾಜಪ್ಪ ಹಣ ಹೊಂದಿಸಲಾಗದೆ ಕಾಲಾವಕಾಶ ಕೋರಿದ್ದಾನೆ.ಹೇಗಾದರೂ ಸರಿ ಸಾಲಾಮಾಡಿಯಾದರೂ ಹಣ ಕಟ್ಟುವುದಾಗಿ ಹೇಳಿದ್ದಾನೆ.ಈ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿಪತ್ರದ ಮೂಲಕ ಸಮಯ ಕೊಡಲು ವಿನಂತಿಸಿದರೂ ಸಹ ಒಪ್ಪದ ಅಧಿಕಾರಿಗಳ ನಿಲುವಿನಿಂದ ರೈತಸಂಘದ ಮೊರೆಹೊಕ್ಕಿದ್ದಾನೆ.

                ಸಧ್ಯ ರೈತನ ಖಾತೆಗೆ ಅಧಿಕಾರಿಗಳ ಬೇಜವಬ್ದಾರಿತನದಿಂದ ಹಣ ಹೆಚ್ಚುವರಿಯಾಗಿ ಜಮೆಯಾಗಿದ್ದು ಈ ಬಗ್ಗೆ ಅಧಿಕಾರಿಗಳೆ ಹೊಣೆಹೊರಬೇಕೆಂದು ರೈತಸಂಘದವರ ನಿಲುವಾಗಿದ್ದು ಕಟ್ಟಲು ದುಡ್ಡಿಲ್ಲದ ರೈತನ ಹಣ ಮನ್ನಾವಾಗುವುದೋ ಅಥವಾ ಕಾಲವಕಾಶ ನೀಡುವರೋ ಕಾದು ನೋಡಬೇಕಿದೆ.
---------------------------------------
ನಿಮ್ಮ ಹಣ ನನಗೆ ಬೇಡ,ಸಧ್ಯ ಬರಗಾಲವಿದ್ದು ನಿತ್ಯದ ದಿನಸಿ ತರುವುದೇ ದುಸ್ತರವಾಗಿದೆ.ನೀವು ಮೂರ್ನಾಲ್ಕು ತಿಂಗಳು ಕಾಲಾವಕಾಶ ನೀಡಿದಲ್ಲಿ ಕೊಬ್ಬರಿ ಸುಲಿಸಿ ಹಣ ಪಾವತಿಸುವೆ : ರೈತ ದೇವರಾಜಪ್ಪ.
-------------------------------------
ಇಲಾಖೆಯ ಅಧಿಕಾರಿಗಳ ಬೇಜವಬ್ದಾರಿತನದಿಂದ ಸಮಸ್ಯೆ ಉಂಟಾಗಿದ್ದು ರೈತನಿಗೆ ಒತ್ತಡ ತಂದಲ್ಲಿ ಪರಿಸ್ಥಿತಿ ನೆಟ್ಟಗಿರುವುದಿಲ್ಲ.ಆಹಾರ ಮತ್ತು ನಾಗರೀಕ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ಬರಗಾಲ ಮುಗಿಯುವವರೆಗೂ ರೈತನಿಗೆ ಕಾಲಾವಕಾಶ ಕೊಡಬೇಕು ಹಾಗೂ ಸ್ಥಗಿತಗೊಂಡಿರುವ ಬ್ಯಾಂಕ್ ಖಾತೆಯನ್ನು ಚಾಲನೆ ನೀಡಬೇಕು.ಇಲ್ಲದಿದ್ದಲ್ಲಿ ಹೋರಾಟ ಮಾಡುವುದು ಅನಿವಾರ್ಯ.: ಕೆಂಕೆರೆ ಸತೀಶ್- ರೈತ ಸಂಘದ ರಾಜ್ಯಕಾರ್ಯದರ್ಶಿ

----------------------------------------------------- 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...